AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Padmanabhanagar Election Results: ಪದ್ಮನಾಭ ನಗರ ಕ್ಷೇತ್ರದಲ್ಲಿ ಆರ್​ ಅಶೋಕ್​ಗೆ ಗೆಲುವು

Padmanabhanagar Assembly Election Result 2023 Live Counting Updates: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯಲ್ಲಿ ಪದ್ಮನಾಭ ನಗರ ಕ್ಷೇತ್ರದಲ್ಲಿ ಆರ್​ ಅಶೋಕ್​ಗೆ ಗೆಲುವು ಕಂಡಿದ್ದಾರೆ.

Padmanabhanagar Election Results: ಪದ್ಮನಾಭ ನಗರ ಕ್ಷೇತ್ರದಲ್ಲಿ ಆರ್​ ಅಶೋಕ್​ಗೆ ಗೆಲುವು
ಪದ್ಮನಾಭ ನಗರ ಕ್ಷೇತ್ರದಲ್ಲಿ ಆರ್​ ಅಶೋಕ್​ಗೆ ಗೆಲುವು
ಸಾಧು ಶ್ರೀನಾಥ್​
|

Updated on:May 13, 2023 | 3:03 PM

Share

Padmanabhanagar Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections 2023) ಫಲಿತಾಂಶ ಪ್ರಕಟಗೊಂಡಿದೆ. ಪದ್ಮನಾಭ ನಗರ ಕ್ಷೇತ್ರದಲ್ಲಿ ಆರ್​ ಅಶೋಕ್​ಗೆ ಗೆಲುವು ಕಂಡಿದ್ದಾರೆ. ಇನ್ನು ಕನಕಪುರದಿಂದಲೂ ಸ್ಪರ್ಧಿಸಿದ್ದ ಅಶೋಕ್ ಅವರು ಡಿಕೆ ಶಿವಕುಮಾರ್​ ವಿರುದ್ಧ ಭಾರಿ ಅಪಜಯ ಅನುಭವಿಸಿದ್ದಾರೆ.  ಮೇ 10 ರಂದು ನಡೆದ ಮತದಾನದಲ್ಲಿ ಪದ್ಮನಾಭ ನಗರ ಕ್ಷೇತ್ರದಲ್ಲಿ (Padmanabhanagar Assembly Elections 2023) ಶೇ. 51.4ರಷ್ಟು ಮತದಾನವಾಗಿತ್ತು. ಪ್ರತಿ ಬಾರಿಯೂ ಮತ ಗಳಿಕೆ ಪ್ರಮಾಣದಲ್ಲಿ ಹೆಚ್ಚಳವನ್ನೇ ಕಾಣುತ್ತಿರುವ ಆರ್. ಅಶೋಕ್ ಈ ಬಾರಿಯೂ ಗೆಲುವು ಕಂಡಿದ್ದಾರೆ. ಪದ್ಮನಾಭ ನಗರ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರ ಹೀಗಿದೆ – ಮುಸ್ಲಿಮರು : 42000, ಹಿಂದುಳಿದ ವರ್ಗ: 53000, ಪರಿಶಿಷ್ಟ ಜಾತಿ : 42000, ಬ್ರಾಹ್ಮಣ : 56000, ಒಕ್ಕಲಿಗ 51000, ಕಮ್ಮ ನಾಯ್ಡು : 14000, ರೆಡ್ಡಿ : 2000, ಲಿಂಗಾಯತ: 7500, ಉತ್ತರ ಭಾರತೀಯರು : 13500, ತಮಿಳು ಭಾಷಿಕರು : 14800, ವಿಶ್ವ ಕರ್ಮ: 9700, ಮರಾಠಿಗರು : 3000, ಭಂಟರು : 7345, ವೈಶ್ಯರು 5789.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಇದುವರೆಗೆ ಸೋಲು ಕಾಣದೇ ಹ್ಯಾಟ್ರಿಕ್‌ ಸಾಧಿಸಿರುವ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಈ ಬಾರಿ ಕನಕಪುರ ಕ್ಷೇತ್ರದಲ್ಲೂ ಟಿಕೆಟ್ ನೀಡುವ ಮೂಲಕ ಬಿಜೆಪಿ ಹೈಕಮಾಂಡ್ ಡಬಲ್ ಧಮಾಕಾ ನೀಡಿತ್ತು.  ಆದರೆ ಒಂದರಲ್ಲಿ ಸೋತು ಮತ್ತೊಂದರಲ್ಲಿ ಗೆಲುವು ಕಂಡಿದ್ದಾರೆ.

ಬೆಂಗಳೂರಿನ ಪ್ರತಿಷ್ಠಿತ ಕ್ಷೇತ್ರಗಳ ಪೈಕಿ ಒಂದೆಂದು ಪರಿಗಣಿಸಲ್ಪಟ್ಟ ಪದ್ಮನಾಭನಗರ ಪ್ರಶಾಂತ ಜೀವನ ಪದ್ಧತಿಯ ಪ್ರದೇಶವಾಗಿದೆ. ಪ್ರತಿ ಬಾರಿಯಂತೆ ಹೊಸ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಪ್ರಯೋಗವನ್ನು ಕಾಂಗ್ರೆಸ್‌ ಪಕ್ಷವನ್ನು ಮುಂದುವರಿಸಿದ್ದು ಕಮ್ಮ ನಾಯ್ಡು ಸಮುದಾಯಕ್ಕೆ ಸೇರಿದ ರಘುನಾಥ ನಾಯ್ಡುಗೆ ಟಿಕೆಟ್ ನೀಡಿದೆ. ಈ ಸಮುದಾಯಕ್ಕೆ ಸೇರಿದವರೂ ಸೇರಿದಂತೆ 75,000ಕ್ಕೂ ಮೇಲ್ಪಟ್ಟು ಹಿಂದುಳಿದ ವರ್ಗದವರು ಈ ಕ್ಷೇತ್ರದಲ್ಲಿ ಇರುವ ಕಾರಣಕ್ಕೆ ಒಕ್ಕಲಿಗರ ಬದಲು ರಘುನಾಥ ನಾಯ್ಡು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಹಣಾಹಣಿ ಇದೆ.

2008ರ ಪುನರ್ ವಿಂಗಡಣೆಯ ಬಳಿಕ ಆ‌. ಅಶೋಕ್ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಒಕ್ಕಲಿಗ, ಬಾಹ್ಯಣ ಹಾಗೂ ಹಿಂದುಳಿದ ವರ್ಗದವರು ಹೆಚ್ಚಿನ ವರ್ಗದಲ್ಲಿ ಸಂಖ್ಯೆಯಲ್ಲಿರುವ ಈ ಕ್ಷೇತ್ರದ ಒಂದೆರಡು ಭಾಗದಲ್ಲಿ ಮಾತ್ರ ಮುಸ್ಲಿಂ ಬಾಹುಳ್ಯವಿದೆ. ಪ್ರತಿ ಚುನಾವಣೆಯಲ್ಲೂ ಮತ ಗಳಿಕೆಯ ಪ್ರಮಾಣದಲ್ಲಿ ಹೆಚ್ಚಳವನ್ನೇ ಕಾಣುತ್ತಿರುವ ಆರ್. ಅಶೋಕ್, ಕ್ಷೇತ್ರದಲ್ಲಿ ಜಾತಿ, ಮತ, ಭಾಷೆಯ ದೃಷ್ಟಿಯಿಂದ ಯಾವುದೇ ವಿವಾದ ಸೃಷ್ಟಿಯಾಗದಂತೆ ನೋಡಿಕೊಂಡಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 4:12 am, Sat, 13 May 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು