AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi Bangalore roadshow: ಪ್ರಧಾನಿ ಮೋದಿ ಬೆಂಗಳೂರು ರೋಡ್​ ಶೋ ಸಮಯದಲ್ಲಿ ಮತ್ತೆ ಬದಲಾವಣೆ

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್​ ಶೋಗೆ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ರೋಡ್​ಶೋಗೆ ಸಮಯವನ್ನು ಮರು ನಿಗದಿ ಮಾಡಲಾಗಿದೆ.

Modi Bangalore roadshow: ಪ್ರಧಾನಿ ಮೋದಿ ಬೆಂಗಳೂರು ರೋಡ್​ ಶೋ ಸಮಯದಲ್ಲಿ ಮತ್ತೆ ಬದಲಾವಣೆ
ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಸಮಯImage Credit source: PTI File
Rakesh Nayak Manchi
|

Updated on: May 05, 2023 | 7:32 PM

Share

ಬೆಂಗಳೂರು: ಹೈಕೋರ್ಟ್ (Karnataka High Court) ಅನುಮತಿ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ರೋಡ್​ ಶೋ ಸಮಯದಲ್ಲಿ ಕೊಂಚ ಬದಲಾವಣೆ ಮಾಡಿ ಅಧಿಕೃತಗೊಳಿಸಲಾಗಿದೆ. ನಾಳೆ (ಮೇ 6) ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರವರೆಗೆ ಮಾತ್ರ ರೋಡ್​ ಶೋ (Modi Road Show) ನಡೆಸಲು ಅವಕಾಶ ನೀಡಲಾಗಿದ್ದು, ಭಾನುವಾರ (ಮೇ 7) ಬೆಳಗ್ಗೆ 9ರಿಂದ ಬೆಳಗ್ಗೆ 11.30ರವರೆಗೆ ಅನುಮತಿ ನೀಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ತುಷಾರ್ ಗಿರಿನಾಥ್​ ಹೇಳಿದ್ದಾರೆ.

ನಾಳೆ ನಗರದ 13 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 23 ಕಿಲೋ ಮೀಟರ್​​ ರೋಡ್​ಶೋ ನಡೆಸುವ ಮೋದಿ, ಭಾನುವಾರಂದು 6.1 ಕಿ.ಮೀ. ರೋಡ್​​ಶೋ ನಡೆಸಲಿದ್ದಾರೆ. ಸಮಯ ಮೀರಿ ರ್ಯಾಲಿ ಮಾಡಿದರೆ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ನಿಗದಿತ ಸಮಯಕ್ಕಿಂತ ಹೆಚ್ಚು ಱಲಿ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು, ಆಯೋಗದ ಸಮಿತಿ ಜೊತೆ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗಿರಿನಾಥ್ ಹೇಳಿದ್ದಾರೆ.

ಸಂಚಾರಕ್ಕೆ ಪರ್ಯಾಯ ಕ್ರಮ ತಗೆದುಕೊಳ್ಳಲಾಗಿದೆ ಎಂದು ಹೇಳಿದ ಗಿರಿನಾಥ್, ರ್ಯಾಲಿಗಳಿಗೆ ಕೇಂದ್ರ ಚುನಾವಣಾ ಆಯೋಗದ ನಿರ್ಭಂಧನೆಗಳು ಅನ್ವಯ ಮಾಡಲಾಗುತ್ತದೆ. ಪ್ರಧಾನಿ ಭದ್ರತೆಗೆ ಬ್ಲೂ ಬುಕ್ ಮಾರ್ಗಸೂಚಿಯಂತೆ ಮಾರ್ಗಸೂಚಿ ಇರಲಿದೆ. ಈ ಬಗ್ಗೆ ಆಯೋಜಕರಿಗೆ ಇವತ್ತಿನ ಸಭೆಯಲ್ಲಿ ಸೂಚನೆ ನೀಡಲಾಗಿದೆ, ಆಯೋಜಕರು ರಕ್ಷಣೆ ಹಾಗೂ ಭದ್ರತೆ ಸಂಬಂಧ ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಾಳೆ ಮೋದಿ ರೋಡ್ ಶೋ: 34 ರಸ್ತೆಗಳು ಬಂದ್, ಯಾವುವು? ಇಲ್ಲಿದೆ ನೋಡಿ

ರವಿವಾರ 11:30 ರ ಒಳಗೆ ರ್ಯಾಲಿ ಮುಕ್ತಾಯಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ ಗಿರಿನಾಥ್, 11:30 ರೊಳಗೆ ರ್ಯಾಲಿ ಮುಕ್ತಾಯ ಮಾಡಬೇಕಿದೆ. ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು 1 ಗಂಟೆಗೆ ಕೊಠಡಿಗೆ ಹಾಜರಾಗಬೇಕಿದ್ದು, 2ಗಂಟೆಗೆ ಪರೀಕ್ಷೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಕಂಟ್ರೋಲ್ ರೂಮ್ ಮೂಲಕ ಆಂಬ್ಯೂಲೆನ್ಸ್​ಗಳ ನಿರ್ವಹಣೆ

ರೋಡ್ ಶೋ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ 108 ಆಂಬ್ಯೂಲೆನ್ಸ್​ಗಳನ್ನ ಮಾನಿಟರ್ ಮಾಡಲಾಗುತ್ತದೆ ಎಂದು ಗಿರಿನಾಥ್ ಮಾಹಿತಿ ನೀಡಿದ್ದಾರೆ. ಕಂಟ್ರೋಲ್ ರೂಮ್ ಮೂಲಕ ಆಂಂಬುಲೆನ್ಸ್​ಗಳನ್ನು ನಿರ್ವಹಣೆ ಮಾಡಲಾಗುತ್ತದೆ. ತುರ್ತು ಸೆವೆಗಳಿಗೆ ಪರ್ಯಾಯ ಮಾರ್ಗಗಳ ಮೂಲಕ ಆದ್ಯತೆ ನೀಡಲಾಗುತ್ತದೆ. ಮಾದ್ಯಮ ಹಾಗೂ ಸಾಮಾಜಿಕ ಜಾಲತಣದ ಮೂಲಕವೂ ಜನರಿಗೆ ಸಲಹೆ ಸೂಚನೆ ನೀಡಲಾಗುತ್ತದೆ. ರಸ್ತೆ ಬದೀಯ ವ್ಯಾಪರಿಗಳು ಬೀದಿ ಬದಿ ಮುಖ್ಯೆ ರಸ್ತೆಯಲ್ಲಿ ವ್ಯಾಪರ ಮಾಡುವಂತಿಲ್ಲ. ಸಾರ್ವಜನಿಕ ಆಸ್ತಿಗೆ ಹಾನಿಯಾಗದಂತೆ ಸೂಚನೆ ನೀಡಲಾಗಿದೆ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ