AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi Bangalore roadshow: ಪ್ರಧಾನಿ ಮೋದಿ ಬೆಂಗಳೂರು ರೋಡ್​ ಶೋ ಸಮಯದಲ್ಲಿ ಮತ್ತೆ ಬದಲಾವಣೆ

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್​ ಶೋಗೆ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ರೋಡ್​ಶೋಗೆ ಸಮಯವನ್ನು ಮರು ನಿಗದಿ ಮಾಡಲಾಗಿದೆ.

Modi Bangalore roadshow: ಪ್ರಧಾನಿ ಮೋದಿ ಬೆಂಗಳೂರು ರೋಡ್​ ಶೋ ಸಮಯದಲ್ಲಿ ಮತ್ತೆ ಬದಲಾವಣೆ
ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಸಮಯImage Credit source: PTI File
Rakesh Nayak Manchi
|

Updated on: May 05, 2023 | 7:32 PM

Share

ಬೆಂಗಳೂರು: ಹೈಕೋರ್ಟ್ (Karnataka High Court) ಅನುಮತಿ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ರೋಡ್​ ಶೋ ಸಮಯದಲ್ಲಿ ಕೊಂಚ ಬದಲಾವಣೆ ಮಾಡಿ ಅಧಿಕೃತಗೊಳಿಸಲಾಗಿದೆ. ನಾಳೆ (ಮೇ 6) ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರವರೆಗೆ ಮಾತ್ರ ರೋಡ್​ ಶೋ (Modi Road Show) ನಡೆಸಲು ಅವಕಾಶ ನೀಡಲಾಗಿದ್ದು, ಭಾನುವಾರ (ಮೇ 7) ಬೆಳಗ್ಗೆ 9ರಿಂದ ಬೆಳಗ್ಗೆ 11.30ರವರೆಗೆ ಅನುಮತಿ ನೀಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ತುಷಾರ್ ಗಿರಿನಾಥ್​ ಹೇಳಿದ್ದಾರೆ.

ನಾಳೆ ನಗರದ 13 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 23 ಕಿಲೋ ಮೀಟರ್​​ ರೋಡ್​ಶೋ ನಡೆಸುವ ಮೋದಿ, ಭಾನುವಾರಂದು 6.1 ಕಿ.ಮೀ. ರೋಡ್​​ಶೋ ನಡೆಸಲಿದ್ದಾರೆ. ಸಮಯ ಮೀರಿ ರ್ಯಾಲಿ ಮಾಡಿದರೆ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ನಿಗದಿತ ಸಮಯಕ್ಕಿಂತ ಹೆಚ್ಚು ಱಲಿ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು, ಆಯೋಗದ ಸಮಿತಿ ಜೊತೆ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗಿರಿನಾಥ್ ಹೇಳಿದ್ದಾರೆ.

ಸಂಚಾರಕ್ಕೆ ಪರ್ಯಾಯ ಕ್ರಮ ತಗೆದುಕೊಳ್ಳಲಾಗಿದೆ ಎಂದು ಹೇಳಿದ ಗಿರಿನಾಥ್, ರ್ಯಾಲಿಗಳಿಗೆ ಕೇಂದ್ರ ಚುನಾವಣಾ ಆಯೋಗದ ನಿರ್ಭಂಧನೆಗಳು ಅನ್ವಯ ಮಾಡಲಾಗುತ್ತದೆ. ಪ್ರಧಾನಿ ಭದ್ರತೆಗೆ ಬ್ಲೂ ಬುಕ್ ಮಾರ್ಗಸೂಚಿಯಂತೆ ಮಾರ್ಗಸೂಚಿ ಇರಲಿದೆ. ಈ ಬಗ್ಗೆ ಆಯೋಜಕರಿಗೆ ಇವತ್ತಿನ ಸಭೆಯಲ್ಲಿ ಸೂಚನೆ ನೀಡಲಾಗಿದೆ, ಆಯೋಜಕರು ರಕ್ಷಣೆ ಹಾಗೂ ಭದ್ರತೆ ಸಂಬಂಧ ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಾಳೆ ಮೋದಿ ರೋಡ್ ಶೋ: 34 ರಸ್ತೆಗಳು ಬಂದ್, ಯಾವುವು? ಇಲ್ಲಿದೆ ನೋಡಿ

ರವಿವಾರ 11:30 ರ ಒಳಗೆ ರ್ಯಾಲಿ ಮುಕ್ತಾಯಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ ಗಿರಿನಾಥ್, 11:30 ರೊಳಗೆ ರ್ಯಾಲಿ ಮುಕ್ತಾಯ ಮಾಡಬೇಕಿದೆ. ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು 1 ಗಂಟೆಗೆ ಕೊಠಡಿಗೆ ಹಾಜರಾಗಬೇಕಿದ್ದು, 2ಗಂಟೆಗೆ ಪರೀಕ್ಷೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಕಂಟ್ರೋಲ್ ರೂಮ್ ಮೂಲಕ ಆಂಬ್ಯೂಲೆನ್ಸ್​ಗಳ ನಿರ್ವಹಣೆ

ರೋಡ್ ಶೋ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ 108 ಆಂಬ್ಯೂಲೆನ್ಸ್​ಗಳನ್ನ ಮಾನಿಟರ್ ಮಾಡಲಾಗುತ್ತದೆ ಎಂದು ಗಿರಿನಾಥ್ ಮಾಹಿತಿ ನೀಡಿದ್ದಾರೆ. ಕಂಟ್ರೋಲ್ ರೂಮ್ ಮೂಲಕ ಆಂಂಬುಲೆನ್ಸ್​ಗಳನ್ನು ನಿರ್ವಹಣೆ ಮಾಡಲಾಗುತ್ತದೆ. ತುರ್ತು ಸೆವೆಗಳಿಗೆ ಪರ್ಯಾಯ ಮಾರ್ಗಗಳ ಮೂಲಕ ಆದ್ಯತೆ ನೀಡಲಾಗುತ್ತದೆ. ಮಾದ್ಯಮ ಹಾಗೂ ಸಾಮಾಜಿಕ ಜಾಲತಣದ ಮೂಲಕವೂ ಜನರಿಗೆ ಸಲಹೆ ಸೂಚನೆ ನೀಡಲಾಗುತ್ತದೆ. ರಸ್ತೆ ಬದೀಯ ವ್ಯಾಪರಿಗಳು ಬೀದಿ ಬದಿ ಮುಖ್ಯೆ ರಸ್ತೆಯಲ್ಲಿ ವ್ಯಾಪರ ಮಾಡುವಂತಿಲ್ಲ. ಸಾರ್ವಜನಿಕ ಆಸ್ತಿಗೆ ಹಾನಿಯಾಗದಂತೆ ಸೂಚನೆ ನೀಡಲಾಗಿದೆ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್