AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಹನುಮನ ಜನಿಸಿದ ನಾಡಲ್ಲೇ ಮತ್ತೆ ಬಜರಂಗಬಲಿ ಘೋಷಣೆ; ಪ್ರಧಾನಿ ಮೋದಿ ತಂತ್ರಗಾರಿಕೆ ಏನು?

ಪ್ರತಿಪಕ್ಷ ಕಾಂಗ್ರೆಸ್​ನ ಟೀಕೆ, ಆರೋಪಗಳನ್ನೇ ಚುನಾವಣೆಗಳಲ್ಲಿ ತಮ್ಮ ಪಕ್ಷಕ್ಕೆ ಪೂರಕವಾಗಿ ಬಳಸಿಕೊಳ್ಳುವ ಕಲೆ ಕರಗತ ಮಾಡಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಇದೀಗ ಹನುಮಂತ ಜನಿಸಿದ ನಾಡಿನಲ್ಲೇ ‘ಬಜರಂಗಬಲಿ’ ದಾಳ ಉರುಳಿಸಿದ್ದಾರೆ.

Narendra Modi: ಹನುಮನ ಜನಿಸಿದ ನಾಡಲ್ಲೇ ಮತ್ತೆ ಬಜರಂಗಬಲಿ ಘೋಷಣೆ; ಪ್ರಧಾನಿ ಮೋದಿ ತಂತ್ರಗಾರಿಕೆ ಏನು?
ಪ್ರಧಾನಿ ನರೇಂದ್ರ ಮೋದಿ
Ganapathi Sharma
|

Updated on: May 05, 2023 | 4:47 PM

Share

ಬಳ್ಳಾರಿ: ಪ್ರತಿಪಕ್ಷ ಕಾಂಗ್ರೆಸ್​ನ ಟೀಕೆ, ಆರೋಪಗಳನ್ನೇ ಚುನಾವಣೆಗಳಲ್ಲಿ ತಮ್ಮ ಪಕ್ಷಕ್ಕೆ ಪೂರಕವಾಗಿ ಬಳಸಿಕೊಳ್ಳುವ ಕಲೆ ಕರಗತ ಮಾಡಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ಹನುಮಂತ ಜನಿಸಿದ ನಾಡಿನಲ್ಲೇ ‘ಬಜರಂಗಬಲಿ’ ದಾಳ ಉರುಳಿಸಿದ್ದಾರೆ. ಆ ಮೂಲಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಹೆಚ್ಚು ಮತ ಸೆಳೆಯುವ ತಂತ್ರಗಾರಿಕೆ ರೂಪಿಸಿದ್ದಾರೆ. ಇದಕ್ಕೆ ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದಿದ್ದ ಬಿಜೆಪಿ ಸಮಾವೇಶವೇ ಸಾಕ್ಷಿಯಾಗಿತ್ತು. ಈಗ ಮತ್ತೊಮ್ಮೆ ಬಳ್ಳಾರಿಯಲ್ಲಿಯೂ ಮೋದಿ ಅದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹನುಮಂತ ಜನಿಸಿದ ಸ್ಥಳ ಎಂದು ಪರಿಗಣಿಸಲಾಗುವ ಅಂಜನಾದ್ರಿಗೆ ಸನಿಹದಲ್ಲಿರುವ ಎರಡೂ ಪ್ರದೇಶಗಳ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮೋದಿ ‘ಬಜರಂಗಬಲಿ’ ವಿಚಾರ ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್​ ಪಕ್ಷವು ಬಜರಂಗದಳ ನಿಷೇಧದ ಕುರಿತು ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದ ದಿನವೇ ಮೋದಿ, ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ್ದರು. ಅಲ್ಲಿ ಅವರು, ‘ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ. ಕಾಂಗ್ರೆಸ್​​ನ ಈ​ ಪ್ರಣಾಳಿಕೆಯಲ್ಲಿ ಹೊಸ ತಂತ್ರ ಅಡಗಿದೆ. ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಿಬರುವುದಿಲ್ಲ’ ಎಂದು ಕಾಂಗ್ರೆಸ್​ ಪ್ರಣಾಳಿಕೆಗೆ ತಿರುಗೇಟು ನೀಡಿದ್ದರು.

ಇದೀಗ ಮತ್ತೆ ‘ಬಜರಂಗಬಲಿ’ ಘೋಷಣೆ ಮಾಡಿ ಗಮನ ಸೆಳೆದಿದ್ದಾರೆ. ನಿರ್ದಿಷ್ಟ ಸಮುದಾಯದ ತುಷ್ಟೀಕರಣ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇರುವುದು ಎದ್ದು ಕಾಣುತ್ತಿದೆ. ನಾವು ಆ ಸಂಘಟನೆಯನ್ನು ನಿಷೇಧಿಸುತ್ತೇವೆ, ಇದನ್ನು ನಿಷೇಧಿಸುತ್ತೇವೆ ಎಂದು ಹೇಳುವ ಮೂಲಕ ಓಲೈಕೆ ರಾಜಕಾರಣ ಮಾಡುತ್ತಿದೆ. ನಾನು ಭಜರಂಗಬಲಿ ಘೋಷಣೆ ಮಾಡುತ್ತಿದ್ದಂತೆಯೇ ಅವರ ಬುಡ ಅಲುಗಾಡಲಾರಂಭಿಸಿದೆ. ಕಾಂಗ್ರೆಸ್ಸಿಗೆ ಭಯ ಉಂಟಾಗಿದೆ ಎಂದು ಮೋದಿ ಹೇಳಿದ್ದಾರೆ.

ಮೋದಿ ತಂತ್ರವೇನು?

ಆಂಜನೇಯನ ಜನ್ಮಸ್ಥಳ ವಿಚಾರ ಇತ್ತೀಚೆಗೆ ವಿವಾದಕ್ಕೆ ಸೃಷ್ಟಿಯಾಗಿತ್ತು. ಹಂಪಿಯ ಅಂಜನಾದ್ರಿಯನ್ನು ಹನುಮಂತ ಜನಿಸಿದ ನಾಡು ಎಂದು ಪರಿಗಣಿಸಲಾಗಿದ್ದರೆ, ಅತ್ತ ತಿರುಮಲದ ಅಂಜನಾದ್ರಿಯೇ ವಾಯುಪುತ್ರನ ಜನ್ಮಸ್ಥಾನ ಎಂದು ಕೆಲವು ಮಂದಿ ವಾದಿಸಿದ್ದರು. ಬಿಜೆಪಿ ನಾಯಕರು ಹಂಪಿಯ ಅಂಜನಾದ್ರಿಯೇ ಆಂಜನೇಯ ಹುಟ್ಟಿದ ಸ್ಥಳ ಎಂದು ಪ್ರತಿಪಾದಿಸಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಅಂಜನಾದ್ರಿಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಶೇಷ ಅನುದಾನವನ್ನೂ ಘೋಷಿಸಿದ್ದರು.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಬ್ಯಾನ್​ಗೆ ಒತ್ತಾಯಿಸುವ ಮೂಲಕ, ಕಾಂಗ್ರೆಸ್ ಭಯೋತ್ಪಾದಕರೊಟ್ಟಿಗೆ ನಿಂತಿದೆ: ಪ್ರಧಾನಿ ಮೋದಿ

ಈ ಎಲ್ಲ ಬೆಳವಣಿಗೆಗಳ ನಂತರ ಅಂಜನಾದ್ರಿಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲೂ ಗಣನೀಯ ಹೆಚ್ಚಳ ಕಂಡುಬಂದಿತ್ತು. ಕೇರಳದ ಶಬರಿಮಲೆ ದೇಗುಲಕ್ಕೆ ಯಾತ್ರೆ ಮಾಡುವ ರೀತಿಯಲ್ಲೇ ಭಕ್ತರು ಅಂಜನಾದ್ರಿಗೂ ವ್ರತದೊಂದಿಗೆ ತೆರಳಲು ಆರಂಭಿಸಿದ್ದರು. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿರುವ ಮೋದಿಗೆ ಕಾಂಗ್ರೆಸ್​​ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ ಅಂಶವೂ ಸರಿಯಾದ ಸಮಯದಲ್ಲೇ ಹೊಸ ಅಸ್ತ್ರ ಸಿಕ್ಕಂತೆ ಮಾಡಿತು. ಅದನ್ನವರು ಸೂಕ್ತ ಸಮಯದಲ್ಲೇ ಪ್ರಯೋಗ ಮಾಡಲು ಆರಂಭಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಮೋದಿ ಮತ್ತೊಂದು ಅಸ್ತ್ರ ‘ದಿ ಕೇರಳ ಸ್ಟೋರಿ’ ಸಿನಿಮಾ

ಕಾಂಗ್ರೆಸ್​​ ತುಷ್ಟೀಕರಣ ನೀತಿ ಹಾಗೂ ಅಲ್ಪಸಂಖ್ಯಾತರ ಓಲೈಕೆ ವಿರುದ್ಧ ಮೋದಿ ಬಳಸಿದ ಮತ್ತೊಂದು ಪ್ರಬಲ ಅಸ್ತ್ರ ಇಂದು (ಮೇ 05) ಬಿಡುಗಡೆ ಆಗಿರುವ ವಿವಾದಾತ್ಮಕ ‘ದಿ ಕೇರಳ ಸ್ಟೋರಿ‘ ಸಿನಿಮಾ. ಇದರ ಬಗ್ಗೆ ಉಲ್ಲೇಖಿಸಿರುವ ಮೋದಿ, ಸಿನಿಮಾವು ಸುಂದರ ರಾಜ್ಯ ಕೇರಳದಲ್ಲಿ ನಡೆದಿರುವ ಕರಾಳ ಘಟನೆಗಳನ್ನು ಆಧರಿಸಿದೆ. ಆದರೆ ಕಾಂಗ್ರೆಸ್​ನವರು ಆ ಸಿನಿಮಾವನ್ನು ನಿಷೇಧಿಸಲು ಒತ್ತಾಯಿಸುವ ಮೂಲಕ ಭಯೋತ್ಪಾದಕರ ಜೊತೆಗೆ ನಿಂತಿದ್ದಾರೆ ಎಂದು ಟೀಕಿಸಿದ್ದಾರೆ. ಈ ಮೂಲಕ ಕಾಂಗ್ರೆಸ್​ ತೋರುವ ಪ್ರತಿರೋಧಗಳನ್ನೇ ತಮ್ಮ ಮತಬೇಟೆಯ ಅಸ್ತ್ರಗಳನ್ನಾಗಿಸಿಕೊಳ್ಳುತ್ತಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ