ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ಮತಬೇಟೆಯಾಡಲು ರಾಮನಗರ ಜಿಲ್ಲೆಯ ಚನ್ನಪಟ್ಟಣಕ್ಕೆ ಏಪ್ರಿಲ್ 30ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿರುವ ಹಿನ್ನೆಲೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಮೈಸೂರು-ಬೆಂಗಳೂರು ಹೆದ್ದಾರಿ (Bengaluru-Mysuru Expressway) ಮತ್ತು ಚನ್ನಪಟ್ಟಣ-ಮದ್ದೂರು ಸಂಪರ್ಕಿಸುವ ಹೈವೆಯಲ್ಲಿ (Channapatna-Maddur Highway) ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ, ವಾಹನ ಸವಾರರ ಅನುಕೂಲಕ್ಕಾಗಿ ಪರ್ಯಾಯ ಮಾರ್ಗಸೂಚಿಯನ್ನು ಪೊಲೀಸ್ ಇಲಾಖೆ ತಿಳಿಸಿದೆ.
ಮೋದಿ ಚನ್ನಪಟ್ಟಣ ಪ್ರವಾಸ ಹಿನ್ನೆಲೆ ಏಪ್ರಿಲ್ 30ರ ಬೆಳಗ್ಗೆ 11ರಿಂದ ಸಂಜೆ 4 ಗಂಟೆವರೆಗೆ ಮಾರ್ಗ ಬದಲಾವಣೆ ಮಾಡಿ ರಾಮನಗರ ಹಾಗೂ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚನ್ನಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಬಳಿ ಮೋದಿ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಮೈಸೂರು-ಬೆಂಗಳೂರು ಹೆದ್ದಾರಿ ಮತ್ತು ಚನ್ನಪಟ್ಟಣ-ಮದ್ದೂರು ನಡುವೆ ಹೈವೆಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅಂದು ವಾಹನ ದಟ್ಟಣೆ ಹೆಚ್ಚಳ ಹಿನ್ನಲೆ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ.
ಇದನ್ನೂ ಓದಿ: ಮೋದಿ ವಿರುದ್ಧದ ಹೇಳಿಕೆ ವಿವಾದ ಪಡೆಯುತ್ತಿದ್ದಂತೆ ಯುಟರ್ನ್ ಹೊಡೆದ ಮಲ್ಲಿಕಾರ್ಜುನ ಖರ್ಗೆ
ಚನ್ನಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಬಳಿ ಸುಮಾರು ಮೂವತ್ತು ಎಕರೆ ಪ್ರದೇಶದಲ್ಲಿ ಸಮಾವೇಶ ನಡೆಯಲಿದೆ. ಎರಡರಿಂದ ಮೂರು ಲಕ್ಷಕ್ಕೂ ಹೆಚ್ಚು ಜನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ವೇದಿಕೆ ನಿರ್ಮಾಣ ಕಾರ್ಯ ಈಗಾಗಲೇ ಭರದಿಂದ ಸಾಗುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ 8 ಬಾರಿ ಆಗಮಿಸಿದ್ದಾರೆ. ವಿವಿಧ ಅಭಿಬವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಪಕ್ಷದ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.
ಇದೀಗ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಅವರನ್ನು ಸಾಧ್ಯವಾದಷ್ಟು ಬಾರಿ ರಾಜ್ಯಕ್ಕೆ ಕರೆಸಿಕೊಂಡು ಪ್ರಚಾರ ನಡೆಸುವ ಉದ್ದೇಶ ಬಿಜೆಪಿಯದ್ದಾಗಿದೆ. ಮೋದಿ ಅವರ ಜನಪ್ರಿಯತೆಯನ್ನು ಬಳಸಿಕೊಂಡು ರಾಜ್ಯದಲ್ಲಿ ಮರಳಿ ಅಧಿಕಾರ ಹಿಡಿಯಬೇಕೆಂದು ಬಿಜೆಪಿ ಶತಾಯಗತಾಯ ಯತ್ನಿಸುತ್ತಿದೆ. ಇದಕ್ಕಾಗಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿವುಸುವ ಗುರಿಹಾಕಿಕೊಂಡಿದೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:22 pm, Thu, 27 April 23