AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಭೇಟಿ: ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ, ಇಲ್ಲಿದೆ ಪರ್ಯಾಯ ಮಾರ್ಗ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇಂದು(ಮೇ.3) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದು, ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ ಹೀಗಿದೆ.

ಪ್ರಧಾನಿ ಮೋದಿ ಭೇಟಿ: ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ, ಇಲ್ಲಿದೆ ಪರ್ಯಾಯ ಮಾರ್ಗ
ಪ್ರಧಾನಿ ಮೋದಿ ಪ್ರಚಾರ ಹಿನ್ನಲೆ ಮಾರ್ಗ ಬದಲಾವಣೆ
ಕಿರಣ್ ಹನುಮಂತ್​ ಮಾದಾರ್
|

Updated on: May 03, 2023 | 8:19 AM

Share

ದಕ್ಷಿಣ ಕನ್ನಡ: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Election) ಹಿನ್ನಲೆ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ(BJP) ಗೆಲುವು ಸಾಧಿಸಲು ಶಥಾಯ ಗತಾಯ ಪ್ರಯತ್ನ ಮಾಡುತ್ತಿದ್ದು, ಅದರಂತೆ ಇಂದು(ಮೇ.3)ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಮೂಡಬಿದಿರೆ ಕ್ಷೇತ್ರದ ಮುಲ್ಕಿಯಲ್ಲಿ ಮೋದಿ ಮತಬೇಟೆ ನಡೆಸಲಿದ್ದಾರೆ. ಈ ಹಿನ್ನಲೆ ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದ್ದು, ಹೀಗಿದೆ.

ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ

ಹೌದು ಪ್ರಧಾನಿ ಮೋದಿ ಪ್ರಚಾರ ಹಿನ್ನಲೆ ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದ್ದು, ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು, ಮುಲ್ಕಿ ವಿಜಯ ಸನ್ನಿಧಿಯ ಬಳಿ ಎಡಕ್ಕೆ ಚಲಸಿ ಕಿನ್ನಿಗೋಳಿ, ಕಟೀಲು, ಬಜಪೆ, ಕಾವೂರು ಮೂಲಕ ಮಂಗಳೂರು ಕಡೆ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. ಇನ್ನು ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳು ಕೆ.ಪಿ.ಟಿ ಜಂಕ್ಷನ್​ನಲ್ಲಿ ಬಲಕ್ಕೆ ಚಲಿಸಿ ಕಾವೂರು, ಬಜಪೆ, ಕಟೀಲು, ಕಿನ್ನಿಗೋಳಿ, ಮುಲ್ಕಿ ಕಡೆಗೆ ಅಥವಾ ಕೂಳೂರು ಜಂಕ್ಷನ್‌ನಿಂದ ಬಲಕ್ಕೆ ಚಲಸಿ ಕಾವೂರು, ಬಜಪೆ, ಕಟೀಲು, ಕಿನ್ನಿಗೋಳಿ ಮಾರ್ಗವಾಗಿ ಮುಲ್ಕಿ ಕಡೆಗೆ ಸಂಚರಿಸಬಹುದು. ಜೊತೆಗೆ ಮಂಗಳೂರು, ಸುರತ್ಕಲ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು, ಹಳೆಯಂಗಡಿ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆ, ಎಸ್-ಕೋಡಿ ಮಾರ್ಗವಾಗಿ ಮುಲ್ಕಿ ಕಡೆಗೆ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:Karnataka Assembly Elction: ಮೇ.05ರಿಂದ ಪ್ರಧಾನಿ ಮೋದಿ ಮೂರು ದಿನ ರಾಜ್ಯ ಪ್ರವಾಸ; ಇಲ್ಲಿದೆ ವೇಳಾಪಟ್ಟಿ

ಕರಾವಳಿ ಚುನಾವಣಾ ಅಖಾಡದಲ್ಲಿ ಇಂದು ಮೋದಿ ಪ್ರಚಾರ

ಮಂಗಳೂರಿನ ಮುಲ್ಕಿಯಿಂದ ಇಂದಿನ ಮೋದಿ ಪ್ರಚಾರ ಆರಂಭವಾಗಲಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡದ 13 ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಮಂಗಳೂರಿನ ಮುಲ್ಕಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೋದಿ ಕೇಸರಿ ಕಲರವ ಎಬ್ಬಿಸಲಿದ್ದಾರೆ. ಎರಡು ಜಿಲ್ಲೆಗಳಿಂದ ಎರಡೂವರೆ ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದ್ದು, ಬಿಜೆಪಿ ಪ್ರಧಾನಿ ಸಮಾವೇಶಕ್ಕೆ ಪ್ರತಿ ಬೂತ್ ಮಟ್ಟದಲ್ಲಿ ಸಭೆ ನಡೆಸಿದೆ. ಇನ್ನು ಪ್ರಚಾರದ ವೇಳೆ ಪ್ರವೀಣ್ ನೆಟ್ಟಾರ್ ಹತ್ಯೆ ವಿಷಯ, ಬಜರಂಗ ದಳ ,ಪಿಎಫ್ ಐ ಬ್ಯಾನ್ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಯಿದೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ