AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಾಳೆ ಮೋದಿ ರೋಡ್ ಶೋ: 34 ರಸ್ತೆಗಳು ಬಂದ್, ಯಾವುವು? ಇಲ್ಲಿದೆ ನೋಡಿ

ಪ್ರಧಾನಿ ನರೇಂದ್ರ ಮೋದಿ ಅವರು ಮೇ 6 ಹಾಗೂ 7 ರಂದು ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ (ಶನಿವಾರ) ರೋಡ್ ಶೋ ಸಾಗುವ ಒಟ್ಟು 34 ರಸ್ತೆಗಳನ್ನು ಬಳಸದಂತೆ ವಾಹನ ಸವಾರರಿಗೆ ಬೆಂಗಳೂರು ಟ್ರಾಫಿಕ್ ಪೊಲೀಸ್​ ಸೂಚಿಸಿದೆ. ಹಾಗಾದ್ರೆ, ಯಾವೆಲ್ಲ ರಸ್ತೆಗಳು ಬಂದ್ ಆಗಲಿವೆ ಎನ್ನುವುದು ಇಲ್ಲಿದೆ ಮಾಹಿತಿ.

ಬೆಂಗಳೂರಿನಲ್ಲಿ ನಾಳೆ ಮೋದಿ ರೋಡ್ ಶೋ: 34 ರಸ್ತೆಗಳು ಬಂದ್, ಯಾವುವು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿImage Credit source: PIB Photo
Follow us
ರಮೇಶ್ ಬಿ. ಜವಳಗೇರಾ
|

Updated on:May 05, 2023 | 3:07 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ದಿನ ಸಮೀಪಿಸುತ್ತಿದ್ದಂತೆಯೇ ಪ್ರಚಾರದ ಭರಾಟೆ ಮತ್ತೋರ್ವ ಜೋರಾಗಿದೆ. ಅದರಲ್ಲೂ ಮೋದಿ ಪ್ರಚಾರ ರಾಜ್ಯದ ಮೂಲೆ ಮೂಲೆಗಳಲ್ಲಿ ಓಡಾಡುತ್ತಿದ್ದಾರೆ. ಮೇ 8ರಂದು ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾಗಿದ್ದರಿಂದ ಮೋದಿ, ಕೊನೆ ಕ್ಷಣದಲ್ಲಿ ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ಮಾಡಲಿದ್ದಾರೆ. 28 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಂಗಳೂರು ನಗರದಲ್ಲಿ ಎರಡು ಹಂತಗಳಲ್ಲಿ ಸುಮಾರು 30ರಿಂದ 35 ಕಿ.ಮೀ. ರೋಡ್​ ಶೋ ನಡೆಸಲಿದ್ದಾರೆ. ಮೇ 06(ಶನಿವಾರ) ಹಾಗೂ ಮೇ 07(ಭಾನುವಾರ) ರೋಡ್ ಶೋ ಇರುವುದರಿಂದ ಹಲವು ರಸ್ತೆಗಳಲ್ಲಿ ಸಂಚಾರ ಬಂದ್ ಆಗಲಿದೆ. ಈ ಬಗ್ಗೆ ನಗರ ಸಂಚಾರಿ ಪೊಲೀಸ್ ಮಾರ್ಗ ಸೂಚಿ ಬಿಡುಗಡೆ ಮಾಡಿದ್ದುಮ ಶನಿವಾರ ಒಟ್ಟು ಮೂವತ್ತನಾಲ್ಕು ರಸ್ತೆಗಳನ್ನು ಬಳಸದಂತೆ ಸೂಚಿಸಿದ್ದಾರೆ. ಯಾವೆಲ್ಲ ರಸ್ತೆಗಳು ಬಳಸಬಾರದು ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಇದನ್ನು ಓದಿ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಮತ್ತೆ ಬದಲಾವಣೆ: ಇಲ್ಲಿದೆ ಹೊಸ ರೂಟ್ ಮ್ಯಾಪ್​

ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಹಿನ್ನಲೆಯಲ್ಲಿ ಒಟ್ಟು 34 ರಸ್ತೆಗಳನ್ನು ಬಳಸದಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಚಿಸಿದ್ದು, ಶನಿವಾರ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆ ರವರೆಗೆ ಬದಲಿ ರಸ್ತೆ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಸಲಹೆ ನೀಡಿದೆ.

ಶನಿವಾರ ಯಾವೆಲ್ಲ ರಸ್ತೆಗಳು ಬಂದ್?

  •  ರಾಜ ಭವನ ರಸ್ತೆ.  ರಮಣ ಮಹರ್ಷಿ ರಸ್ತೆ,  ಮೇಖ್ರಿ ವೃತ್ತ, ಆರ್ ಬಿ ಐ ಲೇಔಟ್ ಜೆಪಿ ನಗರ,  ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ,  ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್, ಆಮುರ್ಗಂ ಸರ್ಕಲ್, ಬುಲ್  ಟೆಂಪಲ್ ರೋಡ್,  ರಾಮಕೃಷ್ಣಾಶ್ರಮ,  ಉಮಾ ಟಾಕೀಸ್,  ಟಿಆರ್ ಮಿಲ್,  ಚಾಮಾರಾಜಪೇಟೆ ಮುಖ್ಯ ರಸ್ತೆ. ಬಾಳೆಕಾಯಿ ಮಂಡಿ, ಕೆ ಪಿ ಅಗ್ರಹಾರ.
  • ಮಾಗಡಿ ರೋಡ್,  ಚೇಳೂರುಪಾಳ್ಯ ರೋಡ್,  ಎಂಸಿ ಸರ್ಕಲ್,  ವೆಸ್ಟ್ ಆಫ್ ಕಾರ್ಡ್ ರೋಡ್,  ಎಂ ಸಿ ಲೇಔಟ್ , ನಾಗರ ಭಾವಿ ಮುಖ್ಯ ರಸ್ತೆ,  ಬಿಜಿಎಸ್ ಮೈದಾನ, ಹಾವನೂರು ಸರ್ಕಲ್,  ಎಂಟನೇ ಮುಖ್ಯರಸ್ತೆ ಬಸವೇಶ್ವರ ನಗರ, ಬಸವೇಶ್ವರ ನಗರ ಹದಿನೈದನೇ ಮುಖ್ಯ ರಸ್ತೆ, ಶಂಕರ್ ಮಠ, ಮೋದಿ ಅಸ್ಪತ್ರೆ ರೋಡ್, ನವರಂಗ್ ರಸ್ತೆ, ಎಂ ಕೆಕೆ ರಸ್ತೆ, ಮಲ್ಲೇಶ್ವರಂ ಸರ್ಕಲ್,  ಸಂಪಿಗೆ ರಸ್ತೆ, ಸ್ಯಾಂಕಿ ರಸ್ತೆ.

ಈ ಮೇಲಿನ ರಸ್ತೆಗಳನ್ನು ಬಳಸದೆ ಬೇರೆ ಪರಿಯಾಗ ಮಾರ್ಗ ಗಳನ್ನು ಬಳಸುವಂತೆ  ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:23 pm, Fri, 5 May 23

ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ