ನಾಲ್ಕು ಜಿಲ್ಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತಬೇಟೆ; ಕೋಲಾರದ ಹಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಪ್ರಧಾನಿ ಮೋದಿ ಇಂದು ನಾಲ್ಕು ಜಿಲ್ಲೆಗಳಲ್ಲಿ ಮತಬೇಟೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕೋಲಾರದಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ.

ನಾಲ್ಕು ಜಿಲ್ಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತಬೇಟೆ; ಕೋಲಾರದ ಹಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧ
ಪ್ರಧಾನಿ ನರೇಂದ್ರ ಮೋದಿ
Follow us
|

Updated on:Apr 30, 2023 | 7:10 AM

ಕೋಲಾರ: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಮೊದಲ ದಿನದ ಮತಬೇಟೆ ಭರ್ಜರಿಯಾಗಿ ನೆರವೇರಿದೆ. ಇಂದು 4 ಜಿಲ್ಲೆಗಳಲ್ಲಿ ಮೋದಿ ಮತಶಿಕಾರಿ ನಡೆಯಲಿದೆ. ಕಾಂಗ್ರೆಸ್(Congress), ಜೆಡಿಎಸ್​ಗೆ(JDS) ಶಾಕ್ ಮೇಲೆ ಶಾಕ್ ಕೊಡಲು ಮೋದಿ ಸಜ್ಜಾಗಿದ್ದಾರೆ. ಇನ್ನು ಮತ್ತೊಂದೆಡೆ ಇಂದು ಕೋಲಾರದಲ್ಲಿ ಮೋದಿ ಪ್ರಚಾರ ನಡೆಸಲಿದ್ದು ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಕೋಲಾರದ ಹಲವು ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

4 ಜಿಲ್ಲೆಗಳಲ್ಲಿ ಪ್ರಧಾನಿ ಮೋದಿ ಮತಬೇಟೆ

ಪ್ರಧಾನಿ ಮೋದಿ ಇಂದು ನಾಲ್ಕು ಜಿಲ್ಲೆಗಳಲ್ಲಿ ಮತಬೇಟೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕೋಲಾರದಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2ಗಂಟೆ ಜೆಡಿಎಸ್ ಭದ್ರಕೋಟೆ, ಮಾಜಿ ಸಿಎಂ ಕುಮಾರಸ್ವಾಮಿ ಅವರ ಕ್ಷೇತ್ರ ಚನ್ನಪಟ್ಟಣದಲ್ಲಿ ಮೋದಿ ಪ್ರಚಾರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಹಾಸನ ಜಿಲ್ಲೆ ಬೇಲೂರಿನಲ್ಲಿ ಮೋದಿ ಮತ್ತೊಂದು ಪ್ರಚಾರ ಸಭೆ ನಡೆಸಲಿದ್ದಾರೆ. ಸಂಜೆ 5.45ಕ್ಕೆ ಮೈಸೂರಿನಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ವಿದ್ಯಾಪೀಠ ವೃತ್ತದಿಂದ ಶುರುವಾಗುವ ಮೋದಿ ಅವರ ರೋಡ್ ಶೋ, ಬನ್ನಿಮಂಟಪ ರಸ್ತೆ LIC ವೃತ್ತದವರೆಗೆ ನಡೆಯಲಿದೆ. 45 ನಿಮಿಷ ಈ ರೋಡ್​ಶೋ ನಡೆಯಲಿದೆ.

ಇದನ್ನೂ ಓದಿ: PM Modi Mysuru Visit: ನಾಳೆ ಮೈಸೂರಿನ ಜಂಬೂ ಸವಾರಿ ಮಾರ್ಗದಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಕೋಲಾರದ ಹಲವು ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧ

ಇಂದು ಕೋಲಾರದಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ ಹಿನ್ನೆಲೆ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಕೋಲಾರದ ಹಲವು ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗುತ್ತೆ. ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಹೆದ್ದಾರಿ ಪಕ್ಕದಲ್ಲೇ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಸಮಾವೇಶಕ್ಕೆ ಸಾವಿರಾರು ಜನ ಬರುವ ಹಿನ್ನೆಲೆ ಸಂಚಾರ ದಟ್ಟಣೆ ಸಾಧ್ಯತೆ. ಹೀಗಾಗಿ ಬೆಂಗಳೂರಿನಿಂದ ಚೆನ್ನೈಗೆ ಹೋಗುವ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: PM Narendra Modi: ನಾಳೆಯೂ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಪ್ರಧಾನಿ ಮೋದಿ: ಇಲ್ಲಿದೆ ಮೋದಿ ಯೋಜನೆಯ ಸಂಪೂರ್ಣ ಮಾಹಿತಿ

ಬೆಂಗಳೂರು ಕಡೆಯಿಂದ ಬರುವ ವಾಹನಗಳು ಬೆಳ್ಳೂರು, ನರಸಾಪುರ, ವೇಮಗಲ್‌, ಕೋಲಾರ ನಗರ, ಟಮಕ ಮಾರ್ಗವಾಗಿ ತೆರಳಲು ಸೂಚಿಸಲಾಗಿದೆ. ಬೆಂಗಳೂರಿಗೆ ಹೋಗುವ ವಾಹನಗಳಿಗೆ ಪರ್ಯಾಯ ರಸ್ತೆ ವ್ಯವಸ್ಥೆ ಮಾಡಲಾಗಿದೆ. ಕೋಲಾರ ಹೊರವಲಯದ ಪವನ್ ಕಾಲೇಜು ಸರ್ವೀಸ್ ರಸ್ತೆ ಮೂಲಕ ಅಮ್ಮೇರಹಳ್ಳಿ, ವಕ್ಕಲೇರಿ ಗ್ರಾಮದ ಮೂಲಕ ದೊಡ್ಡಶಿವಾರದ ಕಡೆಯಿಂದ ನರಸಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ – ಸಮಾರಂಭ ಮುಗಿಯವರೆಗೂ ಬದಲಿ ರಸ್ತೆಯಲ್ಲಿ ಸಂಚಾರ ಮಾಡುವಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:10 am, Sun, 30 April 23

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?