AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elction: ಮೇ.05ರಿಂದ ಪ್ರಧಾನಿ ಮೋದಿ ಮೂರು ದಿನ ರಾಜ್ಯ ಪ್ರವಾಸ; ಇಲ್ಲಿದೆ ವೇಳಾಪಟ್ಟಿ

ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ವಿಧಾನಸಭೆ ಚುನಾವಣಾ ಅಖಾಡಕ್ಕೆ ಇಳಿದಿದ್ದು, ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂಬ ಘೋಷವಾಖ್ಯದೊಂದಿಗೆ ರಾಜ್ಯ ಪರ್ಯಟನೆ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರ ಮುಂದಿನ ರಾಜ್ಯ ಪ್ರವಾಸದ ವೇಳಾಪಟ್ಟಿ ಇಲ್ಲಿದೆ

Karnataka Assembly Elction: ಮೇ.05ರಿಂದ ಪ್ರಧಾನಿ ಮೋದಿ ಮೂರು ದಿನ ರಾಜ್ಯ ಪ್ರವಾಸ; ಇಲ್ಲಿದೆ ವೇಳಾಪಟ್ಟಿ
ಪ್ರಧಾನಿ ನರೇಂದ್ರ ಮೋದಿ
ವಿವೇಕ ಬಿರಾದಾರ
|

Updated on:May 03, 2023 | 10:34 AM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elction) ಕಾವು ಜೋರಾಗಿದೆ. ರಣರಂಗಕ್ಕೆ ಬಿಜೆಪಿ (BJP) ಕೇಂದ್ರ ನಾಯಕರು ಪ್ರವೇಶಿಸಿದ್ದಾರೆ. ಈಗಾಗಲೆ ಪಕ್ಷದ ಕೇಂದ್ರ ನಾಯಕರಾದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಗೃಹ ಸಚಿವ ಅಮಿತ್ (Amit Shah)​ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಹೀಗೆ ಹಲವು ನಾಯಕರು ರಾಜ್ಯದಲ್ಲಿ ಮತಯಾಚನೆ ಮಾಡುತ್ತಿದ್ದಾರೆ. ಇನ್ನು ಪ್ರಧಾನಿ ಮೋದಿಯವರು ಅಖಾಡದಲ್ಲಿ ಘರ್ಜಿಸುತ್ತಿದ್ದು, ಕಾಂಗ್ರೆಸ್ (Congress)​ ಮತ್ತು ಜೆಡಿಎಸ್ (JDS)​​ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೇ ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ಎಲ್ಲಡೆ ಘೋಷವಾಕ್ಯವನ್ನು ಮೊಳಗಿಸುತ್ತಿದ್ದಾರೆ. ವೇಳಾಪಟ್ಟಿ ಪ್ರಕಾರ ಮೇ 5, 6 ಮತ್ತು 7 ರಂದು ಮತ್ತೆ ಮೂರು ದಿನಗಳ‌ ಕಾಲ‌ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ‌ಪ್ರಚಾರ ನಡೆಸಲಿದ್ದಾರೆ.

ಮೇ 5, 6 ಮತ್ತು 7 ಪ್ರಧಾನಿ ಮೋದಿ ರಾಜ್ಯ ಪ್ರವಾಸ

ಮೇ. 05 ರಂದು ಮಧ್ಯಾಹ್ನ 2.30 ಕ್ಕೆ ಬಳ್ಳಾರಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ತುಮಕೂರಿನಲ್ಲಿ ಮತಯಾಚಿಸಲಿದ್ದಾರೆ. ಅಂದು ರಾತ್ರಿ ಬೆಂಗಳೂರಿನ ರಾಜ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮೇ 6 ರಂದು ಇಡೀ ದಿನ ಬೆಂಗಳೂರಿನಲ್ಲಿ 2 ರೋಡ್ ಶೋ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೊದಲ ರೋಡ್ ಶೋ ನಡೆಯಲಿದ್ದು, ಸಿ.ವಿ. ರಾಮನ್ ನಗರದ ಕೆಂಪೇಗೌಡ ಪ್ರತಿಮೆಯಿಂದ ಬ್ರಿಗೇಡ್ ರೋಡ್ ವಾರ್ ಮೆಮೋರಿಯಲ್​ವರೆಗೆ ಮೆರವಣಿಗೆ ಸಾಗುತ್ತದೆ.

ಮಧ್ಯಾಹ್ನ 3 ಗಂಟೆಗೆ ಎರಡನೇ ರೋಡ್​ ಶೋ ಆರಂಭವಾಗಲಿದ್ದು, ರಾತ್ರಿ 8.30 ರವರೆಗೆ ನಡೆಯುತ್ತದೆ. ಕೋಣನಕುಂಟೆ, ಬ್ರಿಗೇಡ್ ಮಿಲೇನಿಯಂನಿಂದ, ಸ್ಯಾಂಕಿ ಟ್ಯಾಂಕ್​​ವರೆಗೆ ನಡೆಯಲಿದೆ. ಐದೂವರೆ ಗಂಟೆಗಳ ಕಾಲ ರೋಡ್ ಶೋ ನಡೆಯಲಿದೆ. ಮೇ 6 ರಂದು ರಾತ್ರಿ ರಾಜಭವನದಲ್ಲಿ ತಂಗಲಿದ್ದಾರೆ.

ಇದನ್ನೂ ಓದಿ: ಮೋದಿ ಸೇರಿದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್​ ನಾಯಕರ ಪ್ರಚಾರ: ಇಂದು ಯಾರು ಎಲ್ಲೆಲ್ಲಿ ಮತಬೇಟೆ? ಇಲ್ಲಿದೆ ಮಾಹಿತಿ

ಮೇ 7 ರಂದು ಬೆಳಗ್ಗೆ 11 ಗಂಟೆಗೆ ಬಾದಾಮಿಯಲ್ಲಿ ನಡೆಯುವ ಸಾರ್ವಜನಿಕ ಸಾಮೇಶದಲ್ಲಿ ಭಾಗಿಯಾಗುತ್ತಾರೆ. ಮಧ್ಯಾಹ್ನ 1 ಗಂಟೆಗೆ ಹಾವೇರಿಯಲ್ಲಿ, 3 ಗಂಟೆಗೆ ಶಿವಮೊಗ್ಗ ಗ್ರಾಮಾಂತರ, ಸಂಜೆ 5.45ಕ್ಕೆ ನಂಜನಗೂಡಿನಲ್ಲಿ ಮತಯಾಚಿಸಲಿದ್ದಾರೆ. ರಾತ್ರಿ 7 ಗಂಟೆಗೆ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ರಾತ್ರಿ 8 ಗಂಟೆಗೆ ಮೈಸೂರಿನಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ.

ಪ್ರಧಾನಿ ಮೋದಿ ಇಂದಿನ ರಾಜ್ಯ ಪ್ರವಾಸ

ಇಂದು (ಮೇ.03) ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೂಡಬಿದಿರೆ ಕ್ಷೇತ್ರದ ಮುಲ್ಕಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಯಲಿದೆ. ಮಧ್ಯಾಹ್ನ 1.15 ಕ್ಕೆ ಅಂಕೋಲಾದಲ್ಲಿ, ಮಧ್ಯಾಹ್ನ 3.15 ಕ್ಕೆ ಬೈಲಹೊಂಗಲದಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ ಸಂಜೆ 4.40ಕ್ಕೆ ಬೆಳಗಾವಿಯಿಯಿಂದ ದೆಹಲಿಗೆ ಮೋದಿ ನಿರ್ಗಮಿಸಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:09 am, Wed, 3 May 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು