AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾರರ ಬಳಿಗೆ ಹೋಗುವ ಮುನ್ನ ಕರ್ನಾಟಕದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ನಾಳೆ ಮೋದಿ ಮಾತು!

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮತದಾರರನ್ನು ಸೆಳೆಯಲು ಬಿಜೆಪಿಯ ರಾಷ್ಟ್ರೀಯ , ರಾಜ್ಯ ನಾಯಕರು ಭರ್ಜರಿ ಪ್ರಚಾರಕ್ಕೆ ಸಜ್ಜಾಗಿದ್ದಾರೆ. ಜೊತೆಗೆ ಮುಖ್ಯವಾಗಿ ಬೂತ್​ ಮಟ್ಟದಲ್ಲಿ ಕಾರ್ಯಕರ್ತರ ಪಾತ್ರ ಬಹುಮುಖ್ಯವಾಗಿರುತ್ತದೆ. ಇದನ್ನು ಅರಿತ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ವಿನೂತನ ಪ್ರಯತ್ನಕ್ಕೆ ಕೈಹಾಕಿದ್ದಾರೆ.

ಮತದಾರರ ಬಳಿಗೆ ಹೋಗುವ ಮುನ್ನ ಕರ್ನಾಟಕದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ನಾಳೆ  ಮೋದಿ ಮಾತು!
ರಮೇಶ್ ಬಿ. ಜವಳಗೇರಾ
|

Updated on:Apr 26, 2023 | 1:24 PM

Share

ಬೆಂಗಳೂರು: ಕರ್ನಾಟಕದಲ್ಲಿ (Karnataka) ಮತ್ತೊಮ್ಮೆ ಅಧಿಕಾರ ಹಿಡಿಯುವ ಕಸರತ್ತಿನಲ್ಲಿರುವ ಬಿಜೆಪಿ(BJP)ನಾಯಕರು ನಾನಾ ಮತದಾರರನ್ನು ಸೆಳೆಯಲು ನಾನಾ ಪ್ರಯೋಗಳನ್ನು ಮಾಡುತ್ತಿದ್ದಾರೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು  ಏಪ್ರಿಲ್ 29ರಿಂದ ಮೇ 7ರ ವರೆಗೂ ಕರ್ನಾಟಕದ ನಾನಾ ಭಾಗಗಳಲ್ಲಿ ರೋಡ್ ಶೋ, ಸಮಾವೇಶಗಳನ್ನು ಮಾಡುವ ಮೂಲಕ ಮತಬೇಟೆ ನಡೆಸಲಿದ್ದಾರೆ. ತಮ್ಮ ವರ್ಚಸ್ಸಿನ ಮೂಲಕ ಕರ್ನಾಟಕದ ಮತದಾರರನ್ನು  ಸೆಳೆಯಲಿದ್ದಾರೆ. ಇನ್ನು ತಾವು ಪ್ರಚಾರ ಮಾಡುವುದರ ಜೊತೆಗೆ ಮತ್ತೊಂದು ಪ್ರಯತ್ನಕ್ಕೆ ಪ್ರಧಾನಿ ಕೈ ಹಾಕಿದ್ದಾರೆ. .ಮತದಾರರ ಬಳಿಗೆ ಹೋಗುವ ಮುನ್ನ ಪ್ರಧಾನಿ ಮೋದಿ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ತಮ್ಮ ಮನದ ಮಾತುಗಳನ್ನು ಹಂಚಿಕೊಳ್ಳಲಿದ್ದಾರೆ. ಹೌದು. ನಾಳೆ ಅಂದರೆ ಏಪ್ರಿಲ್‌ 27ರಂದು 50 ಲಕ್ಷ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ಇದರಿಂದ ಕಾರ್ಯಕರ್ತರಲ್ಲಿಉತ್ಸಾಹ ಹೆಚ್ಚಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮೋದಿ, ಯೋಗಿ, ಅಮಿತ್ ಶಾ, ಜೆಪಿ ನಡ್ಡಾ ಪ್ರಚಾರ: ಯಾವಾಗ, ಎಲ್ಲೆಲ್ಲಿ? ಇಲ್ಲಿದೆ ದಿಗ್ಗಜರ ವೇಳಾಪಟ್ಟಿ

1680 ಜಿಲ್ಲಾ ಪಂಚಾಯತ್‌ ಮಟ್ಟದಲ್ಲಿ ವರ್ಚುವಲ್‌ ಸಂವಾದ

ಬೂತ್​ ಮಟ್ಟದಲ್ಲಿ ಕಾರ್ಯಕರ್ತರ ಪಾತ್ರ ಬಹುಮುಖ್ಯವಾಗಿರುತ್ತದೆ. ಇದನ್ನು ಅರಿತ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಸಂವಾದ ಮಾಡುವ ಮೂಲಕ ವಿನೂತನ ಪ್ರಯತ್ನಕ್ಕೆ ಕೈಹಾಕಿದ್ದು,  ಏಪ್ರಿಲ್ 27 ರಂದು ಬೆಳಗ್ಗೆ 9.30ಕ್ಕೆ ಕರ್ನಾಟಕದಲ್ಲಿ ವರ್ಚುವಲ್ ಆಗಿ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದತ್ಮಕ ಸಭೆ ನಡೆಸಲಿದ್ದಾರೆ. ಇದರಲ್ಲಿ 58,112 ಬೂತ್‌ಗಳ ಪಕ್ಷದ ಕಾರ್ಯಕರ್ತರು ಸೇರಲಿದ್ದಾರೆ. 1680 ಜಿಲ್ಲಾ ಪಂಚಾಯತ್‌ ಮಟ್ಟದಲ್ಲಿ ವರ್ಚುವಲ್‌ ಸಂವಾದ ವ್ಯವಸ್ಥೆ ಇರಲಿದ್ದು, ಬೆಂಗಳೂರು ಸೇರಿದಂತೆ ನಾನಾ ಜಿಲ್ಲೆಗಳ 15 ಕಡೆ ಪ್ರಧಾನಿಯವರು ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

24 ಲಕ್ಷ ಮಂದಿ ಆ್ಯಪ್‌ ಡೌನ್‌ಲೋಡ್‌

ಬೂತ್‌ ಮಟ್ಟದಲ್ಲಿ 58,000 ಸ್ಥಳಗಳಲ್ಲಿಈ ಆ್ಯಪ್‌ ಮೂಲಕ ಕಾರ್ಯಕರ್ತರು ಆ್ಯಪ್‌ ಡೌನ್‌ಲೋಡ್‌ ಮಾಡಿ ಸಂವಾದ ವೀಕ್ಷಿಸಲಿದ್ದಾರೆ. ಎಲ್‌ಇಡಿ ಪರದೆ ಅಳವಡಿಸುವ ಕಡೆ 1,000 ಹಾಗೂ ಬೂತ್‌ಗಳಲ್ಲಿ200 ಕಾರ್ಯಕರ್ತರನ್ನು ಸಂಯೋಜಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನಮೋ ಆ್ಯಪ್‌ 5,000 ಮಂದಿ ಡೌನ್‌ಲೋಡ್‌ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದ್ದು, ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳ 15 ಕಡೆ ಪ್ರಧಾನಿ ಮೋದಿ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

ಚುನಾವಣೆಗಳಲ್ಲಿ ಸಂದರ್ಭದಲ್ಲಿ ನಾಯಕರು ಬಂದು ಭಾಷಣ, ರೋಡ್ ಶೋ ಮಾಡಿ ಹೋಗುತ್ತಾರೆ. ಆದ್ರೆ, ಎಲೆಕ್ಷನ್​ ಮುಗಿಯುವವರೆಗೂ ಬೂತ್​ ಮಟ್ಟದಲ್ಲಿ ಕಾರ್ಯಕರ್ತರ ಕೆಲಸ ಬಹಳ ಮುಖ್ಯವಾಗಿರುತ್ತದೆ. ಸ್ಥಳೀಯವಾಗಿ ಹಳ್ಳಿ, ಪಟ್ಟಣ, ಏರಿಯಾ, ಓಣಿಗಳಲ್ಲಿ ಸರ್ಕಾರ ಜನಪ್ರಿಯ ಯೋಜನೆಗಳ ಬಗ್ಗೆ ಮನೆ ಮನೆಗೆ ಮನವರಿಕೆ ಮಾಡಿಕೊಡುವುದು ಕಾರ್ಯಕರ್ತರ ಕೆಲಸವಾಗಿರುತ್ದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಾರ್ಯಕರ್ತರನ್ನು ಚುನಾವಣೆಗಾಗಿ ಅಣಿಗೊಳಿಸಲು ಸಂವಾದದ  ಹುರಿದುಂಬಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಇನ್ನೊಂದೆಡೆ ಕಾರ್ಯಕರ್ತರು ಸಹ ತಮ್ಮ ನೆಚ್ಚಿನ ನಾಯಕನ ಮಾತುಗಳನ್ನು ಆಲಿಸಲು ಉತ್ಸುಕರಾಗಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Wed, 26 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ