AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸವಾರರ ಗಮನಕ್ಕೆ: ಇಂದು ಸಂಜೆ ಬೆಂಗಳೂರಿಗೆ ಮೋದಿ, ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗ ಅನುಸರಿಸುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.

ವಾಹನ ಸವಾರರ ಗಮನಕ್ಕೆ: ಇಂದು ಸಂಜೆ ಬೆಂಗಳೂರಿಗೆ ಮೋದಿ, ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ
ರಮೇಶ್ ಬಿ. ಜವಳಗೇರಾ
|

Updated on:May 05, 2023 | 9:41 AM

Share

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karnataka Assembly Elections 2023) ಕಾವು ರಂಗೇರಿದ್ದು, ಮೂರು ಪಕ್ಷಗಳು ಬಿಡುವಿಲ್ಲದೆ ಅಬ್ಬರದ ಪ್ರಚಾರ ಮಾಡುತ್ತಿವೆ. ಸದ್ಯ ಬಿಜೆಪಿ ಕೂಡ ಅಖಾಡದಲ್ಲಿ ಜೋರಾಗಿ ಪ್ರಚಾರ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಏಪ್ರಿಲ್ 29ರಿಂದ ರಾಜ್ಯದಲ್ಲಿ ಸರಣಿ ಸಮಾವೇಶ, ರೋಡ್ ಶೋಗಳ ಮೂಲಕ ಕೊನೆ ಕ್ಷಣದಲ್ಲಿ ಗೇಮ್ ಚೇಂಜ್ ಮಾಡಲು ಹೊರಟಿದ್ದಾರೆ. ನಿನ್ನೆ(ಮೇ 04) ರಾಜ್ಯದಲ್ಲಿ ಪ್ರಚಾರಕ್ಕೆ ಬಿಡುವು ನೀಡಿದ್ದ ಪ್ರಧಾನಿ ಇಂದು(ಮೇ 05 ಮತ್ತೆ ಮತಬೇಟೆಯ ಅಖಾಡಕ್ಕೆ ಇಳಿಯುತ್ತಿದ್ದಾರೆ. ತಮಕೂರು, ಬಳ್ಳಾರಿಯಲ್ಲಿ ಸಮಾವೇಶ ಮುಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಬೆಂಗಳೂರಿಗೆ (Bengaluru) ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲ ರಸ್ತೆಗಳಲ್ಲಿ ವಾಹನನ ಸಂಚಾರ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: odi Road Show: ಶನಿವಾರ ಮಾತ್ರವಲ್ಲ ಭಾನುವಾರವೂ ಬೆಂಗಳೂರಿನಲ್ಲಿ ಮೋದಿ ರೋಡ್​ ಶೋ: ಇಲ್ಲಿದೆ ರೂಟ್​ ಮ್ಯಾಪ್

ಮೇ   7ರಂದು ರೋಡ್​ ಶೋ ಮಾಡಲು ಇಂದು ಸಂಜೆ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೀಗಾಗಿ ಇಂದು ಸಾಯಂಕಾಲ 5.30ರಿಂದ ರಾತ್ರಿ 7 ಗಂಟೆ ವರೆಗೆ ಈ ಕೆಳಕಂಡ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಬೆಂಗಳೂರು ನಗರ ಸಂಚಾರಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಯಾವೆಲ್ಲ ರಸ್ತೆಗಳು ನಿರ್ಬಂಧ?

  • ಹಳೆ ವಿಮಾನ ನಿಲ್ದಾಣ ರಸ್ತೆ
  • ಕೇಂಬ್ರಡ್ಜ್ ಲೇಔಟ್ ರಸ್ತೆ
  • ಇಂದಿರಾ ನಗರ 100 ಅಡಿ ರಸ್ತೆ
  • ಅರಳಿ ಕಟ್ಟೆ
  • ಎ.ಎಸ್.ಸಿ ಸೆಂಟರ್
  • ಟ್ರಿನಿಟಿ ವೃತ್ತ
  • ರಾಜಭವನ ರಸ್ತೆ​
  • ಎಂಜಿ ರಸ್ತೆ
  • ಡಿಕನ್​ಸನ್​ ರಸ್ತೆ
  • ಮಣಿಪಾಲ್ ಸೆಂಟರ್
  • ಕಬ್ಬನ್ ರಸ್ತೆ
  • ಬಿಆರ್​ವಿ ಜಂಕ್ಷನ್
  • ಸಿಟಿಓ ಜಂಕ್ಷನ್
  • ಇನ್​ಫೆಂಟ್ರಿ ರಸ್ತೆ

ಮೇಲಿನ ಎಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂದಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಟ್ರಾಫಿಕ್ ಪೊಲೀಸ್ ಮನವಿ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:31 am, Fri, 5 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ