AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Elections: ಚುನಾವಣಾ ಡ್ಯೂಟಿಗಾಗಿ ನಡುರಸ್ತೆಯಲ್ಲೇ ಸರ್ಕಾರಿ ವಾಹನ ವಶಕ್ಕೆ ಪಡೆಯುತ್ತಿರುವ ಪೊಲೀಸರು, ಆರ್​ಟಿಓ ಅಧಿಕಾರಿಗಳು!

ಪೊಲೀಸರು ಮತ್ತು ಆರ್​ಟಿಓ ಅಧಿಕಾರಿಗಳು ಗೂಂಡಗಳಂತೆ ವರ್ತಿಸಿದ್ದಾರೆ. ಮಾನಸಿಕವಾಗಿ ನಮಗೆ ಹಿಂಸೆ ಆಗುತ್ತದೆ. ದಯವಿಟ್ಟು ಖಾಸಗಿ ವಾಹನಗಳನ್ನು ಬಳಸಿಕೊಳ್ಳಿ ನಮ್ಮನ್ನು ಬಿಟ್ಟು ಬಿಡಿ ಎಂದು ಸರ್ಕಾರಿ ವಾಹನ ಚಾಲಕರ ಸಂಘ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮನವಿ ಮಾಡಿದೆ.

Karnataka Elections: ಚುನಾವಣಾ ಡ್ಯೂಟಿಗಾಗಿ ನಡುರಸ್ತೆಯಲ್ಲೇ ಸರ್ಕಾರಿ ವಾಹನ ವಶಕ್ಕೆ ಪಡೆಯುತ್ತಿರುವ ಪೊಲೀಸರು, ಆರ್​ಟಿಓ ಅಧಿಕಾರಿಗಳು!
ಚುನಾವಣಾ ಆಯೋಗಕ್ಕೆ ದೂರು ನೀಡಿದ ಕರ್ನಾಟಕ ರಾಜ್ಯ ಸರ್ಕಾರಿ ವಾಹನ ಚಾಲಕರ ಸಂಘ (ಎಡ ಚಿತ್ರ)
Rakesh Nayak Manchi
|

Updated on:Apr 05, 2023 | 10:23 PM

Share

ಬೆಂಗಳೂರು: ಚುನಾವಣೆ (Karnataka Assembly Elections 2023) ಸಮಯದಲ್ಲಿ ಪೋಲಿಸರು ಮತ್ತು ಆರ್​ಟಿಓ (RTO) ಅಧಿಕಾರಿಗಳು ಸರ್ಕಾರಿ ವಾಹನ ಚಾಲಕರ ಮೇಲೆ ದೌರ್ಜನ್ಯ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಚುನಾವಣಾ ಡ್ಯೂಟಿಗೆ ಕಾರು ಬೇಕು ‌ಎಂದು ನಡು ರಸ್ತೆಯಲ್ಲಿ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ವಾಹನ ಕೊಡಲ್ಲವೆಂದರೆ ಹೆದರಿಸಿ ಬೆದರಿಸಿ ಕೀ ಕಸಿದುಕೊಂಡು ಕಳಿಸುತ್ತಿದ್ದಾರೆ. ಈ ವೇಳೆ ಪೊಲೀಸರು ಮತ್ತು ಆರ್​ಟಿಓ ಅಧಿಕಾರಿಗಳು ಚಾಲಕರಿಗೆ ಅವಾಚ್ಯ ಪದಗಳನ್ನು ಬಳಿಸಿ ರೌಡಿಗಳಂತೆ ವರ್ತಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸರ್ಕಾರಿ ವಾಹನ ಚಾಲಕರ ಸಂಘವು (Karnataka Government Vehicle Drivers Association) ಚುನಾವಣಾ ಆಯೋಗಕ್ಕೆ (Elections Commission) ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.

ಪೊಲೀಸರು ಮತ್ತು ಆರ್​ಟಿಓ ಅಧಿಕಾರಿಗಳು ಕೇಳಿದಾಗ ವಾಹನ ನೀಡದಿದ್ದರೆ ಪೊಲೀಸರು ‌ಮತ್ತು ಆರ್​ಟಿಓ ಅಧಿಕಾರಿಗಳು ಬಿಡಲ್ಲ, ವಾಹನ ಕೊಟ್ಟರೆ ತಮ್ಮ ಇಲಾಖೆ ಮತ್ತು ಅಧಿಕಾರಿಗಳಿಂದ ಶಿಕ್ಷೆ ಎದುರಿಸಬೇಕಾಗಿದೆ. ವಾಹನಗಳನ್ನು ತೆಗೆದುಕೊಂಡು ಹೋದರೆ ಊಟ, ವಸತಿ ಕೊಡಲ್ಲ. ಡ್ಯೂಟಿ ಮಾಡಲು ಹೋದರೆ ಎಲೆಕ್ಷನ್ ಕಮೀಷನ್ ನೀಡುವ ಸಂಭಾವನೆಯನ್ನು ಇವರೇ ಹೊಡೆದು ತಿನ್ನುತ್ತಾರೆ. ಇದರಿಂದ ಮಾನಸಿಕವಾಗಿ ನಮಗೆ ಹಿಂಸೆ ಆಗುತ್ತದೆ. ದಯವಿಟ್ಟು ಖಾಸಗಿ ವಾಹನಗಳನ್ನು ಬಳಸಿಕೊಳ್ಳಿ ನಮ್ಮನ್ನು ಬಿಟ್ಟುಬಿಡಿ ಎಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರಕ್ಕಿಳಿದ ಕಿಚ್ಚ ಸುದೀಪ್: ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್​ಗೆ ಡ್ಯಾಮೇಜ್!

ನಮ್ಮ ಮೇಲೆ ದೈಹಿಕ ದೌರ್ಜನ್ಯದ ಜೊತೆಗೆ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ ಅಂತ ಕಿಡಿ ಕಾರಿದ್ದು, ನಿಯಮಗಳ ಪ್ರಕಾರ ಚುನಾವಣಾ ಸಮಯದಲ್ಲಿ ಸರ್ಕಾರಿ ವಾಹನಗಳ ಸದ್ಬಳಕೆ ಆಗಬೇಕು. ಆದರೆ ಸಂಬಂಧ ಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಪತ್ರ ಬರೆದು ಆ ಮೂಲಕ ವಾಹನಗಳನ್ನು ಬಳಕೆ ಮಾಡಿಕೊಳ್ಳಬೇಕು. ಅದು ಬಿಟ್ಟು ಏಕಾಏಕಿ ಗೂಂಡಾಗಳ ಹಾಗೇ ನಡು ರಸ್ತೆಯಲ್ಲಿ ವಾಹನಗಳನ್ನು ತಡೆದು ವಶಪಡಿಸಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೇ ಅವಾಚ್ಯ ಶಬ್ದಗಳಿಂದ ನಮ್ಮನ್ನು ನಿಂದನೆ ಮಾಡಿ ಅವಮಾನಿಸಿದ್ದಾರೆ. ಹೀಗಾಗಿ ಬೈಸಿಕೊಂಡು ವಾಹನ ನೀಡಬೇಕಿದೆ. ಕಳೆದ ಒಂದೂವರೆ ತಿಂಗಳಿನಿಂದ ಎಲೆಕ್ಷನ್ ಡ್ಯೂಟಿ ಹೆಸರಲ್ಲಿ ನಮಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಎಂದು ರಾಜ್ಯ ಸರ್ಕಾರ ಹಾಗೂ ಸ್ವಾಮ್ಯ ಸಂಫ ಸಂಸ್ಥೆಗಳ ವಾಹನ ಚಾಲಕರ ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ್ ಅವರು ಅಸಮಾಧಾನ ಹೊರಹಾಕಿದ್ದಾರೆ.

ಒಂದೆಡೆ, ಖಾಸಗಿ ವಾಹನ ಚಾಲಕರ ಸಂಘವು ನಮ್ಮ ವಾಹನಗಳನ್ನು ಮುಟ್ಟಬೇಡಿ ಬಲವಂತವಾಗಿ ನೀವು ರೋಡ್​ಗಳಲ್ಲಿ ನಮ್ಮ ಕ್ಯಾಬ್​ಗಳನ್ನು ವಶಕ್ಕೆ ತೆಗೆದುಕೊಂಡರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರೆ, ಇನ್ನೊಂದೆಡೆ ಸರ್ಕಾರಿ ವಾಹನ ಚಾಲಕರ ಸಂಘವು ನಮ್ಮ ವಾಹನಗಳನ್ನು ಮುಟ್ಟಬೇಡಿ ಖಾಸಗಿ ವಾಹನಗಳನ್ನು ತೆಗೆದುಕೊಂಡು ಎಲೆಕ್ಷನ್ ಮಾಡಿ ಅಂತಿವೆ. ಆದರೆ ಆರ್​ಟಿಓ ಅಧಿಕಾರಿಗಳು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

ವರದಿ: ಕಿರಣ್ ಸೂರ್ಯ, ಟಿವಿ9 ಬೆಂಗಳೂರು

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:23 pm, Wed, 5 April 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!