Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಭಾವಚಿತ್ರವಿದ್ದ ಲಕ್ಷಾಂತರ ಮೌಲ್ಯದ ಅಡುಗೆ ಸಲಕರಣೆ ಪತ್ತೆ

ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭಗತ್ ಸಿಂಗ್ ನಗರದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಿದ್ದ 7.19 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಸಲಕರಣೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ದಾವಣಗೆರೆ: ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಭಾವಚಿತ್ರವಿದ್ದ ಲಕ್ಷಾಂತರ ಮೌಲ್ಯದ ಅಡುಗೆ ಸಲಕರಣೆ ಪತ್ತೆ
ಶಾಮನೂರು ಶಿವಶಂಕ್ರಪ್ಪ ಭಾವಚಿತ್ರವಿರುವ ಅಡುಗೆ ಸಲಕರಣೆ ಪತ್ತೆ
Follow us
ವಿವೇಕ ಬಿರಾದಾರ
|

Updated on:Mar 29, 2023 | 7:01 AM

ದಾವಣಗೆರೆ:  ದಾವಣಗೆರೆಯ (Davangere) ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭಗತ್ ಸಿಂಗ್ ನಗರದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಿದ್ದ 7.19 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಸಲಕರಣೆಯನ್ನು ಪೊಲೀಸರು (Police) ಜಪ್ತಿ ಮಾಡಿದ್ದಾರೆ. ಅಡುಗೆ ಸಲಕರಣೆಗಳ ಮೇಲೆ ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಹಾಗೂ ಪುತ್ರ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭಾವಚಿತ್ರವಿದ್ದ ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಡಜ್ಜಿ ಹನಮಂತಪ್ಪ ಎಂಬುವರ ವಿರುದ್ಧ ದೂರು ದಾಖಲಾಗಿದೆ.

ರಕ್ಷಣಾ ಸಿಬ್ಬಂದಿಗಾಗಿ ಮಾರಾಟಕ್ಕಿದ್ದ 4ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ

ಬಳ್ಳಾರಿ: ರಕ್ಷಣಾ ಸಿಬ್ಬಂದಿಗಾಗಿ ಮಾರಾಟಕ್ಕಿರುವ ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ವಿಮ್ಸ್‌ ಹಿಂಭಾಗದಲ್ಲಿನ ವಿದ್ಯಾನಗರದ ನಿವಾಸಿ ಈಶ್ವರ ರವಿಚಂದ್ರ ಮನೆ ಮೇಲೆ, ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ರಕ್ಷಣಾ ಸಿಬ್ಬಂದಿಗಾಗಿ ಮಾರಾಟಕ್ಕಿದ್ದ ದುಬಾರಿ ಬೆಲೆಯ ಒಟ್ಟು 4.01ಲಕ್ಷ ರೂ. ಮೌಲ್ಯದ 142 ಮದ್ಯದ ಬಾಟಲ್‌ಗಳನ್ನು ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ. ದಾಳಿ ವೇಳೆ ಅಬಕಾರಿ ನಿರೀಕ್ಷ ಕರಾದ ಜ್ಯೋತಿಬಾಯಿ, ಉಪನಿರೀಕ್ಷಕ ರುದ್ರೇಗೌಡ, ಗೌಡಪ್ಪ, ಪೇದೆಗಳಾದ ಖಾಜಾ ಹುಸೇನ್‌ ಪೀರನ್‌, ಸದ್ದಾಂ ಹುಸೇನ್‌, ವಾಹನ ಚಾಲಕಿ ಗಾಯತ್ರಿ ಇದ್ದರು.

ಇದನ್ನೂ ಓದಿ: ಲಕ್ಷಾಂತರ ಮೌಲ್ಯದ ಹೆಲ್ಮೆಟ್​, ಕ್ರೀಡಾ ಕಿಟ್​ ಪತ್ತೆ: ಕಾಂಗ್ರೆಸ್​ ನಾಯಕನಿಗೆ ಸೇರಿದ ದಾಖಲೆ ಇಲ್ಲದ ಹಣ ಜಪ್ತಿ

ಸಕ್ಕರೆ ಕಾರ್ಖಾನೆಯ ಗೋದಾಮಿನಲ್ಲಿ ರಾಶಿ ರಾಶಿ ಟೀ-ಶರ್ಟ್​ ಮತ್ತು ವಿವಿಧ ವಸ್ತುಗಳು ಪತ್ತೆ​

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಯರಗಲ್ ಮದರಿ ಬಳಿಯ ಬಾಲಾಜಿ ಸಕ್ಕರೆ ಕಾರ್ಖಾನೆ ಗೋದಾಮಿನಲ್ಲಿ ಪರವಾನಿಗೆ ಪಡೆಯದೆ ಸಂಗ್ರಹಿಸಿಟ್ಟಿದ್ದ ರಾಶಿ ರಾಶಿ ಟೀ-ಶರ್ಟ್ ಹಾಗೂ ಹಾಗೂ ಗೋಡೆ ಗಡಿಯಾರ​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾಜಿ ವಿಧಾನ ಪರಿಷತ್ ಸದಸ್ಯಎಸ್ ಆರ್ ಪಾಟೀಲ್ ಭಾವಚಿತ್ರ ಇರುವ ಗೋಡೆ ಗಡಿಯಾರಗಳು ಮತ್ತು ಎಸ್​.ಆರ್​.ಪಿ ಭಾವಚಿತ್ರವಿರುವ ಟಿ-ಶರ್ಟ್​ಗಳು ಪತ್ತೆಯಾಗಿವೆ. ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹಾಗೂ ಎಸ್ಪಿ ಹೆಚ್​.ಡಿ ಆನಂದಕುಮಾರ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಅಂದಾಜು ಎರಡೂವರೆ ಕೋಟಿ ರೂಪಾಯಿ ಮೌಲ್ಯದ 36,800 ಗೋಡೆ ಗಡಿಯಾರ, 50,000 ಟೀ-ಶರ್ಟ್ ಪತ್ತೆಯಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 am, Wed, 29 March 23

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ