AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಭಾವಚಿತ್ರವಿದ್ದ ಲಕ್ಷಾಂತರ ಮೌಲ್ಯದ ಅಡುಗೆ ಸಲಕರಣೆ ಪತ್ತೆ

ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭಗತ್ ಸಿಂಗ್ ನಗರದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಿದ್ದ 7.19 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಸಲಕರಣೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ದಾವಣಗೆರೆ: ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಭಾವಚಿತ್ರವಿದ್ದ ಲಕ್ಷಾಂತರ ಮೌಲ್ಯದ ಅಡುಗೆ ಸಲಕರಣೆ ಪತ್ತೆ
ಶಾಮನೂರು ಶಿವಶಂಕ್ರಪ್ಪ ಭಾವಚಿತ್ರವಿರುವ ಅಡುಗೆ ಸಲಕರಣೆ ಪತ್ತೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 29, 2023 | 7:01 AM

Share

ದಾವಣಗೆರೆ:  ದಾವಣಗೆರೆಯ (Davangere) ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭಗತ್ ಸಿಂಗ್ ನಗರದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಿದ್ದ 7.19 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಸಲಕರಣೆಯನ್ನು ಪೊಲೀಸರು (Police) ಜಪ್ತಿ ಮಾಡಿದ್ದಾರೆ. ಅಡುಗೆ ಸಲಕರಣೆಗಳ ಮೇಲೆ ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಹಾಗೂ ಪುತ್ರ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭಾವಚಿತ್ರವಿದ್ದ ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಡಜ್ಜಿ ಹನಮಂತಪ್ಪ ಎಂಬುವರ ವಿರುದ್ಧ ದೂರು ದಾಖಲಾಗಿದೆ.

ರಕ್ಷಣಾ ಸಿಬ್ಬಂದಿಗಾಗಿ ಮಾರಾಟಕ್ಕಿದ್ದ 4ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ

ಬಳ್ಳಾರಿ: ರಕ್ಷಣಾ ಸಿಬ್ಬಂದಿಗಾಗಿ ಮಾರಾಟಕ್ಕಿರುವ ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ವಿಮ್ಸ್‌ ಹಿಂಭಾಗದಲ್ಲಿನ ವಿದ್ಯಾನಗರದ ನಿವಾಸಿ ಈಶ್ವರ ರವಿಚಂದ್ರ ಮನೆ ಮೇಲೆ, ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ರಕ್ಷಣಾ ಸಿಬ್ಬಂದಿಗಾಗಿ ಮಾರಾಟಕ್ಕಿದ್ದ ದುಬಾರಿ ಬೆಲೆಯ ಒಟ್ಟು 4.01ಲಕ್ಷ ರೂ. ಮೌಲ್ಯದ 142 ಮದ್ಯದ ಬಾಟಲ್‌ಗಳನ್ನು ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ. ದಾಳಿ ವೇಳೆ ಅಬಕಾರಿ ನಿರೀಕ್ಷ ಕರಾದ ಜ್ಯೋತಿಬಾಯಿ, ಉಪನಿರೀಕ್ಷಕ ರುದ್ರೇಗೌಡ, ಗೌಡಪ್ಪ, ಪೇದೆಗಳಾದ ಖಾಜಾ ಹುಸೇನ್‌ ಪೀರನ್‌, ಸದ್ದಾಂ ಹುಸೇನ್‌, ವಾಹನ ಚಾಲಕಿ ಗಾಯತ್ರಿ ಇದ್ದರು.

ಇದನ್ನೂ ಓದಿ: ಲಕ್ಷಾಂತರ ಮೌಲ್ಯದ ಹೆಲ್ಮೆಟ್​, ಕ್ರೀಡಾ ಕಿಟ್​ ಪತ್ತೆ: ಕಾಂಗ್ರೆಸ್​ ನಾಯಕನಿಗೆ ಸೇರಿದ ದಾಖಲೆ ಇಲ್ಲದ ಹಣ ಜಪ್ತಿ

ಸಕ್ಕರೆ ಕಾರ್ಖಾನೆಯ ಗೋದಾಮಿನಲ್ಲಿ ರಾಶಿ ರಾಶಿ ಟೀ-ಶರ್ಟ್​ ಮತ್ತು ವಿವಿಧ ವಸ್ತುಗಳು ಪತ್ತೆ​

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಯರಗಲ್ ಮದರಿ ಬಳಿಯ ಬಾಲಾಜಿ ಸಕ್ಕರೆ ಕಾರ್ಖಾನೆ ಗೋದಾಮಿನಲ್ಲಿ ಪರವಾನಿಗೆ ಪಡೆಯದೆ ಸಂಗ್ರಹಿಸಿಟ್ಟಿದ್ದ ರಾಶಿ ರಾಶಿ ಟೀ-ಶರ್ಟ್ ಹಾಗೂ ಹಾಗೂ ಗೋಡೆ ಗಡಿಯಾರ​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾಜಿ ವಿಧಾನ ಪರಿಷತ್ ಸದಸ್ಯಎಸ್ ಆರ್ ಪಾಟೀಲ್ ಭಾವಚಿತ್ರ ಇರುವ ಗೋಡೆ ಗಡಿಯಾರಗಳು ಮತ್ತು ಎಸ್​.ಆರ್​.ಪಿ ಭಾವಚಿತ್ರವಿರುವ ಟಿ-ಶರ್ಟ್​ಗಳು ಪತ್ತೆಯಾಗಿವೆ. ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹಾಗೂ ಎಸ್ಪಿ ಹೆಚ್​.ಡಿ ಆನಂದಕುಮಾರ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಅಂದಾಜು ಎರಡೂವರೆ ಕೋಟಿ ರೂಪಾಯಿ ಮೌಲ್ಯದ 36,800 ಗೋಡೆ ಗಡಿಯಾರ, 50,000 ಟೀ-ಶರ್ಟ್ ಪತ್ತೆಯಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 am, Wed, 29 March 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ