AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಸಿದ್ದರಾಮಯ್ಯ ಬದಲಿಗೆ ಬೇರೆ ಅಭ್ಯರ್ಥಿ ರೆಡಿ, ಬಾದಾಮಿಯಲ್ಲಿ ಮತ್ತೆ ಚಿಗುರೊಡೆದ ಸಿದ್ದು ಅಭಿಮಾನಿಗಳ ಆಸೆ

ವರುಣಾದಿಂದ ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ ನೀಡುತ್ತಿದ್ದಂತೆಯೇ ಇತ್ತ ಕೋಲಾರ ಹಾಗೂ ಬಾದಾಮಿಯಲ್ಲಿ ಮಹತ್ವದ ರಾಜಕೀಯವ ಬೆಳವಣಿಗೆಗಳು ನಡೆಯುತ್ತಿವೆ.

ಕೋಲಾರದಲ್ಲಿ ಸಿದ್ದರಾಮಯ್ಯ ಬದಲಿಗೆ ಬೇರೆ ಅಭ್ಯರ್ಥಿ ರೆಡಿ, ಬಾದಾಮಿಯಲ್ಲಿ ಮತ್ತೆ ಚಿಗುರೊಡೆದ ಸಿದ್ದು ಅಭಿಮಾನಿಗಳ ಆಸೆ
ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on: Mar 19, 2023 | 2:03 PM

Share

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ(Karnataka Assembly Elections 2023) ಬಾದಾಮಿ(Badami ಬಿಟ್ಟು ಕೋಲಾರದಿಂದ(Kolar) ಅಖಾಡಕ್ಕಿಳಿಯಲು ಸಿದ್ದರಾಮಯ್ಯ(Siddarmaiah) ತೀರ್ಮಾನಿಸಿದ್ದರು. ಆದ್ರೆ, ರಾಹುಲ್ ಗಾಂಧಿ ಕೋಲಾರದಿಂದ ಬೇಡ, ವರುಣಾದಿಂದಲೇ ಸ್ಪರ್ಧಿಸಿ ಎಂದು ಸಿದ್ದರಾಮಯ್ಯಗೆ ಸಲಹೆ ನೀಡಿದ್ದಾರೆ. ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬೇಡ. ಕೋಲಾರಕ್ಕಿಂತಲೂ ವರುಣಾ ಕ್ಷೇತ್ರವೇ ಸೇಫ್ ಇದೆ. ಆಂತರಿಕ ಸಮೀಕ್ಷೆಗಳಲ್ಲೂ ಕೋಲಾರದಲ್ಲಿ ಗೆಲುವು ಕಷ್ಟ ಅಂತಿದೆ. ಹೀಗಾಗಿ ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದು ಉತ್ತಮ ಎಂದು ರಾಹುಲ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವ ಕ್ಷೆತ್ರದಿಂದ ಸ್ಪರ್ಧಿಸಬೇಕೆಂದು ಸಿದ್ದರಾಮಯ್ಯಗೆ ದಿಕ್ಮುತೋಚದಂತಾಗಿದೆ. ರಾಹುಲ್ ಸಲಹೆ ಬೆನ್ನಲ್ಲೇ ಕೋಲಾರದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದರೆ ಮತ್ತೊಂದೆಡೆ ಬಾದಾಮಿಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಆಸೆ ಮತ್ತೆ ಚಿಗುರೊಡೆದಿದೆ.

ಇದನ್ನೂ ಓದಿ: Siddaramaiah: ಕೋಲಾರ ಕಣದಿಂದ ಹಿಂದೆ ಸರಿದ ಸಿದ್ದರಾಮಯ್ಯ; ಎರಡು ದಿನಗಳಲ್ಲಿ ಅಂತಿಮ ನಿರ್ಧಾರ

ಕೋಲಾರದಲ್ಲಿ ಪರ್ಯಾಯ ಅಭ್ಯರ್ಥಿ ಜತೆ ಡಿಕೆಶಿ ಚರ್ಚೆ

ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುವ ಮುನ್ಸೂನೆಗಳು ಸಿಕ್ಕಿವೆ. ಇದಕ್ಕೆ ಪೂರಕವೆಂಬಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅವರೊಂದಿಗೆ ಮಾತನಾಡಿದ್ದು, ಚುನಾವಣೆಗೆ ಸಿದ್ದವಾಗುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಗೋವಿಂದಗೌಡ ಕೋಲಾರ ಹಾಗೂ ಶಿಡ್ಲಘಟ್ಟ ಕ್ಷೇತ್ರದ ಆಕಾಂಕ್ಷಿಯಾಗಿದ್ದರು. ಆದ್ರೆ, ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆ ಎಂದು ತಿಳಿಯುತ್ತಿದ್ದಂತೆಯೇ ಅವರು ಸೈಡ್​ ಆಗಿದ್ದರು. ಇದೀಗ ರಾಹುಲ್​ ಗಾಂಧಿಯವರು ಕೋಲಾರದಲ್ಲಿ ನಿಲ್ಲದಂತೆ ಸಿದ್ದರಾಮಯ್ಯಗೆ ಸಲಹೆ ನೀಡಿರುವ ಬೆನ್ನಲ್ಲೇ ಗೋವಿಂದಗೌಡ ಅವರು ಕೋಲಾರಿಂದ ಅಖಾಡಕ್ಕಿಳಿಯುಲು ಸಜ್ಜಾಗಿದ್ದಾರೆ.

ಈ ಕುರಿತು ನಮ್ಮ‌ ಪ್ರತಿ‌ನಿಧಿ ರಾಜೇಂದ್ರಸಿಂಹ ಬ್ಯಾಲಹಳ್ಳಿ, ಗೋವಿಂದಗೌಡ ಅವರನ್ನು ಮತನಾಡಿಸಿದ್ದು, ಡಿಕೆಶಿ ಶಿವಕುಮಾರ್ ಅವರು ಎರಡು ದಿನಕ್ಕೊಮ್ಮೆ ನಮ್ಮ ಜೊತೆ ಮಾತನಾಡುತ್ತಾರೆ. ಕಾಂಗ್ರೆಸ್ ಪಕ್ಷ ಗೆಲ್ಲುವುದು ಅವರಿಗೆ ಮುಖ್ಯವಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ‌ ಇನ್ನು ಹಿಂದೆ ಸರಿದಿಲ್ಲ. ಹೈಕಮಾಂಡ್ ಇನ್ನು ಸ್ಪಷ್ಟವಾಗಿ‌ ಎಲ್ಲೂ ಹೇಳಿಲ್ಲ. ನಾನು ಒಬ್ಬ ಅಕಾಂಕ್ಷಿಯಾಗಿದ್ದಾನೆ. ಆದ್ರೆ, ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಿಂದ ರೂಲ್ಡ್​ ಔಟ್ ಆಗಿಲ್ಲ. ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಇಂಗಿತ‌ ನಮ್ಮಗಿದೆ.

ಸಿದ್ದು ಅಭಿಮಾನಿಗಳಲ್ಲಿ ಮತ್ತೆ ಚಿಗುರೊಡೆದ ಆಸೆ

ಈ ಹಿಂದೆ ಬಾದಾಮಿಯಿಂದ ಸ್ಪರ್ಧೆ ಮಾಡುವುದಿಲ್ಲ. ಬದಲಿಗೆ ಕೋಲಾರಿಂದ ಸ್ಪರ್ಧಿಸುವೇ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಬಾದಾಮಿಯಿಂದಲೇ ಮತ್ತೆ ಸ್ಪರ್ಧೆ ಮಾಡಬೇಕು ಎಂದು ಕ್ಷೇತ್ರದ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿ ಆಗ್ರಹಿಸಿದ್ದರು. ಬಾದಾಮಿಯಿಂದ ಸುಮಾರು 250ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಗ್ರಹಿಸಿದ್ದರು. ಇದೀಗ ಕೋಲಾರ ಸೇಫ್ ಅಲ್ಲ ಅಂದ ಮೇಲೆ ಬಾದಾಮಿಯಿಂದ ಸ್ಪರ್ಧೆ ಮಾಡಬೇಕು ಎಂದು ಮತ್ತೆ ಅಭಿಮಾನಿಗಳು ಸಿದ್ದರಾಮಯ್ಯನವರನ್ನು ಒತ್ತಾಯಿಸುತ್ತಿದ್ದಾರೆ.

ಇದರ ಮಧ್ಯೆ ಇದೇ ಮಾರ್ಚ್​ 24 ರಂದು ಸಿದ್ದರಾಮಯ್ಯ ತಮ್ಮ ಬಾದಾಮಿ ಕ್ಷೇತ್ರ ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಅಡಿಗಲ್ಲು ಹಾಕಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಾದಾಮಿ ಎಪಿಎಂಸಿ ಆವರಣದಲ್ಲಿ ಬೃಹತ್​ ಕಾರ್ಯಕ್ರಮದ ಸಿದ್ಧತೆಗಳು ನಡೆದಿವೆ. ಮಾ.24ರಂದು ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಸಿದ್ದರಾಮಯ್ಯ ಮತ್ತೆ ಬಾದಾಮಿಯದ ಸ್ಪರ್ಧೆ ಮಾಡುವಂತೆ ಒತ್ತಡ ಹೇರಲು ಅಭಿಮಾನಿಗಳು ತೀರ್ಮಾನಿಸಿದ್ದಾರೆ. ಒಂದು ವೇಳೆ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೂ ಎರಡನೇ ಕ್ಷೇತ್ರ ಬಾದಾಮಿ ಆಗಲಿ ಎನ್ನುವುದು ಅಭಿಮಾನಿಗಳ ಮಾತಗಳಾಗಿವೆ. ಈ ಬಗ್ಗೆ ಮತ್ತೊಮ್ಮೆ ಬೆಂಗಳೂರಿಗೆ ತೆರಳಿ ಒತ್ತಾಯಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾ. 24 ರಂದು ಸಿದ್ದರಾಮಯ್ಯ ಕೋಲಾರ ಸ್ಪರ್ಧೆ ನಿರ್ಧಾರ ಬದಲಾವಣೆ ಮಾಡುತ್ತಾರಾ ಎನ್ನುವ ಕುತೂಹಲ ಮೂಡಿಸಿದೆ.

ಒಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವುದು ಮತ್ತೆ ಕುತೂಹಲಕ್ಕೆ ಕಾರಣವಾಗಿದೆ.

ಇನ್ನಷ್ಟು ರಾಜಕೀಯ ಹಾಗೂ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ