ಜಗದೀಶ್ ಶೆಟ್ಟರ್ ಸೋಲಿಸಲು ಬಿಜೆಪಿ ಪಣ, ಮಾಜಿ ಸಿಎಂಗೆ ಮೊದಲ ಶಾಕ್ ಕೊಟ್ಟ ಪ್ರಲ್ಹಾದ್ ಜೋಶಿ

ಕಾಂಗ್ರೆಸ್ ಸೇರಿದ ಬಳಿಕ ಬಿಎಲ್​ ಸಂತೋಷ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಅವರನ್ನು ಸೋಲಿಸಲು ಬಿಜೆಪಿ ಪಣ ತೊಟ್ಟಿದ್ದು, ಇದರ ಭಾಗವಾಗಿ ಶೆಟ್ಟರ್​ಗೆ ಮೊದಲ ಶಾಕ್ ಕೊಟ್ಟಿದ್ದಾರೆ.

ಜಗದೀಶ್ ಶೆಟ್ಟರ್ ಸೋಲಿಸಲು ಬಿಜೆಪಿ ಪಣ, ಮಾಜಿ ಸಿಎಂಗೆ ಮೊದಲ ಶಾಕ್ ಕೊಟ್ಟ ಪ್ರಲ್ಹಾದ್ ಜೋಶಿ
ಜಗದೀಶ್​ ಶೆಟ್ಟರ್​
Follow us
|

Updated on: Apr 27, 2023 | 12:03 PM

ಹುಬ್ಬಳ್ಳಿ: ಕಾಂಗ್ರೆಸ್ ಸೇರ್ಪಡೆಯಾಗಿರುವ ಜಗದೀಶ್​ ಶೆಟ್ಟರ್(Jagadish Shettar) ಅವರನ್ನು ಈ ಬಾರಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್​ ಕ್ಷೇತ್ರದಲ್ಲಿ ಸೋಲಿಸಲು ಬಿಜೆಪಿ ನಾಯಕರು ನಾನಾ ತಂತ್ರಗಳನ್ನು ರೂಪಿಸುತ್ತಿದ್ದಾರೆ.  ಜಗದೀಶ್ ಶೆಟ್ಟರ್​ ಕಾಂಗ್ರೆಸ್ ಸೇರ್ಪಡೆಯಾದ ಕೇವಲ ಹತ್ತೇ ದಿನದಲ್ಲಿ ಹುಬ್ಬಳ್ಳಿ ಘಟಾನುಘಟಿ ನಾಯಕರುಗಳು ಭೇಟಿ ನೀಡಿ ಸರಣಿ ಸಭೆಗಳನ್ನು ಮಾಡಿದ್ದು, ಶೆಟ್ಟರ್​ ಸೋಲಿಸಲು ಬೇಕಾದ ಎಲ್ಲಾ ರಣತಂತ್ರಗಳನ್ನು ಹೆಣೆದಿದ್ದಾರೆ.  ಹುಬ್ಬಳ್ಳಿ-ಧಾರವಾಡ ಪಾಲಿಕೆ ಸದಸ್ಯರನ್ನು ಹಾಗೂ ಪಕ್ಷದ ಪದಾಧಿಕಾರಿಗಳನ್ನು ಜಗದೀಶ್ ಶೆಟ್ಟರ್​ ಹಿಂದೆ ಹೋಗದಂತೆ ಹಿಡಿದಿಟ್ಟುಕೊಂಡಿದ್ದಾರೆ. ಅಲ್ಲದೇ ಸ್ಥಳೀಯ ಕಾಂಗ್ರೆಸ್​​ ಮುಖಂಡರಿಗೆ ಗಾಳ ಹಾಕುತ್ತಿದ್ದು,  ಅಲ್ಲದೇ  ಮೊದಲ ಹಂತವಾಗಿ ಹುಬ್ಬಳ್ಳಿ-ಧಾರವಾಡ ಪಾಲಿಕೆ ಮಾಜಿ ಮೇಯರ್​ ಪ್ರಕಾಶ್ ಕ್ಯಾರಕಟ್ಟಿ ಅವರನ್ನು ಬಿಜೆಪಿಗೆ ಸೆಳೆಯುವ ಮೂಲಕ ಜಗದೀಶ್ ಶೆಟ್ಟರ್​ಗೆ ಶಾಕ್ ಕೊಟ್ಟಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಪರೇಶನ್ ಕಮಲ ಯಶಸ್ವಿಯಾಗಿದೆ.

ಇದನ್ನೂ ಓದಿ: ಜಗದೀಶ್​ ಶೆಟ್ಟರ್​ ಸೋಲಿಸಲು ಯಡಿಯೂರಪ್ಪನವರನ್ನೇ ಕಣಕ್ಕಿಳಿಸಿದ ಹೈಕಮಾಂಡ್​, ಲಿಂಗಾಯತ ಮುಖಂಡರ ಸಭೆಯಲ್ಲಿ ಬಿಎಸ್​ವೈ ಹೇಳಿದ್ದೇನು?

ಹೌದು… ಹುಬ್ಬಳ್ಳಿ-ಧಾರವಾಡ ಪಾಲಿಕೆ ಮಾಜಿ ಮೇಯರ್​ ಪ್ರಕಾಶ್ ಕ್ಯಾರಕಟ್ಟಿ ಅವರು ಇಂದು ಕಾಂಗ್ರೆಸ್​ ತೊರೆದು ಬಿಜೆಪಿ ಸೇರ್ಪಡೆಯಾದರು. ಹುಬ್ಬಳ್ಳಿ ಶ್ರೀನಿವಾಸ ಗಾರ್ಡನ್​ಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಗೋವಿಂದ ಕಾರಜೋಳ ಸಮ್ಮುಖದಲ್ಲಿ ಪ್ರಕಾಶ್ ಕ್ಯಾರಕಟ್ಟಿ ಬಿಜೆಪಿ ಸೇರ್ಪಡೆಯಾದರು. ಇದೇ ವೇಳೆ ಸದಾಶಿವ ಕಾರಡಗಿ, ಹನುಮಂತ ಸಾ ನಿರಂಜನ್ ಸಹ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಸದರು. ಈ ಮೂಲಕ ಜಗದೀಶ್ ಶೆಟ್ಟರ್​ಗೆ ಚುನಾವಣೆಗೂ ಮುನ್ನವೇ ಶಾಕ್ ಕೊಟ್ಟಿದ್ದಾರೆ.

ಜಗದೀಶ್ ಶೆಟ್ಟರ್ ಸೋಲಿಸಲು ಬಿಜೆಪಿ ಪಣ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಜಗದೀಶ್ ಶೆಟ್ಟರ್​ ಅವರನ್ನು ಸೋಲಿಸಲು ಪ್ರಲ್ಹಾದ್ ಜೋಶಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹೈಕಮಾಂಡ್ ನಾಯಕರು ಸಹ ತಣ ತೊಟ್ಟಿದ್ದಾರೆ. ಹೀಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರನ್ನು ಗೆಲ್ಲಿಸಿಕೊಳ್ಳಲು ಬಿಜೆಪಿ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಜಾತಿ, ಸಿದ್ಧಾಂತ, ಸಂಘ ಪರಿವಾರ, ಹಿಂದುತ್ವ ಹೀಗೆ ನಾನಾ ಅಸ್ತ್ರಗಳನ್ನು ಜಗದೀಶ್ ಶೆಟ್ಟರ್ ವಿರುದ್ಧ ಪ್ರಯೋಗಳನ್ನು ನಡೆಸಿದ್ದಾರೆ.

ಹೈಕಮಾಂಡ್ ನಾಯಕರು ಶೆಟ್ಟರ್ ಕಾಂಗ್ರೆಸ್ ಸೇರಿದನ್ನು ಎಷ್ಟರ ಮಟ್ಟಿಗೆ ತಲೆ ಕೆಡಿಸಿಕೊಂಡಿದ್ದಾರೆ ಎಂದರೆ 10 ದಿನದ ಅವಧಿಯಲ್ಲಿ ಬರೋಬ್ಬರಿ 9 ಜನ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಹುಬ್ಬಳ್ಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರ ಜೊತೆ ಸರಣಿ ಸಭೆಗಳನ್ನು ಮಾಡಿದ್ದಾರೆ.

ಈ 10 ದಿನದಲ್ಲಿ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಸೇರಿ 8 ಜನ ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್​ ಸೋಲಿಸಲು ಸಭೆ ಮೇಲೆ ಸಭೆ ಮಾಡಿ ಚುನಾವಣೆ ತಂತ್ರಗಳನ್ನು ರೂಪಿಸಿದ್ದಾರೆ. ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬಳಿಕ ಮೊದಲ ಬಾರಿಗೆ ಬಂದಿದ್ದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಲಿಂಗಾಯತ ಡ್ಯಾಮೇಜ್ ಕಂಟ್ರೋಲ್ ಗೆ ಕೈಹಾಕಿದ್ದರು. ಲಿಂಗಾಯತ ಮತಗಳ ಭೇಟಿ ಮೂಲಕ ನಡ್ಡಾ ಲಿಂಗಾಯತ ನಾಯಕರಿಗೆ ಅನ್ಯಾಯ ಮಾಡಿಲ್ಲ ಎನ್ನುವ ಸಂದೇಶ ರವಾನೆ ಮಾಡಿದ್ದರು.

ಅದಾದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ಹುಬ್ಬಳ್ಳಿಗೆ ಬಂದು ಶೆಟ್ಟರ್ ಗೆ ಅನ್ಯಾಯ ಆಗಿಲ್ಲ ಎನ್ನುವುದನ್ನು ಸಾರಿ ಸಾರಿ ಹೇಳಿದ್ದರು. ನಡ್ಡಾ,ಅಮಿತ್ ಶಾ,ಬಸವರಾಜ ಬೊಮ್ಮಾಯಿ,ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲು,ಈಶ್ವರಪ್ಪ ರಹಸ್ಯವಾಗಿ ಬಂದು ಸ್ಥಳೀಯ ನಾಯಕರೊಂದಿಗೆ ಚರ್ಚಿಸಿ ಹೋಗಿದ್ದಾರೆ. ಬಿಎಲ್ ಸಂತೋಷ್, ಕೇಂದ್ರ ಸಚಿವ ಕೈಲಾಸ್ ಚೌಧರಿ, ಸಚಿವೆ ಸ್ಮೃತಿ ಇರಾನಿ ಕೂಡ ಹುಬ್ಬಳ್ಳಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಗೆಲ್ಲಿಸುವಂತೆ ಕರೆ ಕೊಟ್ಟಿದ್ದಾರೆ. ಇನ್ನು ಶೆಟ್ಟರ್ ಸೋಲಿಸಲು ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಪಥ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ