AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿಗೆ ಯಾವುದೇ ಹೊಡೆತ ಆಗಲ್ಲ; ಪ್ರಲ್ಹಾದ್ ಜೋಶಿ

ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿಗೆ ಯಾವುದೇ ಹೊಡೆತ ಆಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಗಣಪತಿ ಶರ್ಮಾ
|

Updated on:Apr 20, 2023 | 9:14 PM

Share

ಮುಖ್ಯಾಂಶಗಳು

  • ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಮತದಾರರು ಪಕ್ಷ ನೋಡಿ ಮತ ನೀಡುತ್ತಾರೆ; ಜೋಶಿ
  • ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಹಾನಿಯಿಲ್ಲ ಎಂದ ಕೇಂದ್ರ ಸಚಿವ
  • ಕಾಂಗ್ರೆಸ್ 130 ಸ್ಥಾನ ಗೆಲ್ಲಲಿದೆ ಎಂದ ಶೆಟ್ಟರ್

ಬೆಳಗಾವಿ: ಜಗದೀಶ್ ಶೆಟ್ಟರ್ (Jagadish Shettar) ಅವರು ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿಗೆ ಯಾವುದೇ ಹೊಡೆತ ಆಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Josh) ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಮತದಾರರು ಪಕ್ಷ ನೋಡಿ ಮತ ನೀಡುತ್ತಾರೆ. ಹತಾಶೆಯಿಂದ ಶೆಟ್ಟರ್​ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ನಿಪ್ಪಾಣಿಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಯೋಗಿ ಆದಿತ್ಯನಾಥ್​ ಆಗಮಿಸಲಿದ್ದಾರೆ. ಡಬಲ್​ ಎಂಜಿನ್ ಸರ್ಕಾರದ ಕಾರ್ಯಗಳನ್ನು ಜನರು ಅರಿತಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​​ವರು​ ಅಧಿಕಾರಕ್ಕೆ ಬಂದರೆ ಬಿಜೆಪಿ ನೀಡಿರುವ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಮತದಾರರು ಬಿಜೆಪಿ ಪರವಾಗಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್ 130 ಸ್ಥಾನ ಗೆಲ್ಲಲಿದೆ

ಈ ಮಧ್ಯೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ ಶೆಟ್ಟರ್, ಆಂತರಿಕ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಪಕ್ಷ​ 130ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂಬುದು ತಿಳಿದುಬಂದಿದೆ ಎಂದು ಹೇಳಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಾತ್ರವಲ್ಲದೆ ಬೇರೆ ಜಿಲ್ಲೆಗಳಿಂದಲೂ ಚುಣಾವಣಾ ಪ್ರಚಾರಕ್ಕೆ ಆಹ್ವಾನಿಸುತ್ತಿದ್ದಾರೆ. ಕಾಂಗ್ರೆಸ್​ ಪಕ್ಷಕ್ಕೆ ಜನ ಬೆಂಬಲ ದೊಡ್ಡದಾಗಿದೆ. ಧಾರವಾಡ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ.

ಇದನ್ನೂ ಓದಿ: Karnataka Polls: ಲಿಂಗಾಯತ ವಿರೋಧ ಎದುರಿಸಲು ಬಿಜೆಪಿಗೆ ಯಡಿಯೂರಪ್ಪ ಗುರಾಣಿ; ಬೆಳಗಾವಿ ಬಂಡಾಯ ತಣಿಸಿದ ಸಂತೋಷ್ ತಂತ್ರ

ನನ್ನ ಬಗ್ಗೆ ಮಾತನಾಡಲು ಬಿಜೆಪಿಯ ಕೆಎಸ್ ಈಶ್ವರಪ್ಪಗೆ ಒತ್ತಡ ಇರಬಹುದು. ಮೊನ್ನೆ ನನಗೆ ಪತ್ರ ಬರೆದಿದ್ದರು. ಇದು ಪಕ್ಷದ ಒತ್ತಡದಿಂದ ಎಂದು ಶೆಟ್ಟರ್​ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:03 pm, Thu, 20 April 23

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ