AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿಗೆ ಯಾವುದೇ ಹೊಡೆತ ಆಗಲ್ಲ; ಪ್ರಲ್ಹಾದ್ ಜೋಶಿ

ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿಗೆ ಯಾವುದೇ ಹೊಡೆತ ಆಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಗಣಪತಿ ಶರ್ಮಾ
|

Updated on:Apr 20, 2023 | 9:14 PM

Share

ಮುಖ್ಯಾಂಶಗಳು

  • ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಮತದಾರರು ಪಕ್ಷ ನೋಡಿ ಮತ ನೀಡುತ್ತಾರೆ; ಜೋಶಿ
  • ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಹಾನಿಯಿಲ್ಲ ಎಂದ ಕೇಂದ್ರ ಸಚಿವ
  • ಕಾಂಗ್ರೆಸ್ 130 ಸ್ಥಾನ ಗೆಲ್ಲಲಿದೆ ಎಂದ ಶೆಟ್ಟರ್

ಬೆಳಗಾವಿ: ಜಗದೀಶ್ ಶೆಟ್ಟರ್ (Jagadish Shettar) ಅವರು ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿಗೆ ಯಾವುದೇ ಹೊಡೆತ ಆಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Josh) ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಮತದಾರರು ಪಕ್ಷ ನೋಡಿ ಮತ ನೀಡುತ್ತಾರೆ. ಹತಾಶೆಯಿಂದ ಶೆಟ್ಟರ್​ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ನಿಪ್ಪಾಣಿಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಯೋಗಿ ಆದಿತ್ಯನಾಥ್​ ಆಗಮಿಸಲಿದ್ದಾರೆ. ಡಬಲ್​ ಎಂಜಿನ್ ಸರ್ಕಾರದ ಕಾರ್ಯಗಳನ್ನು ಜನರು ಅರಿತಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​​ವರು​ ಅಧಿಕಾರಕ್ಕೆ ಬಂದರೆ ಬಿಜೆಪಿ ನೀಡಿರುವ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಮತದಾರರು ಬಿಜೆಪಿ ಪರವಾಗಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್ 130 ಸ್ಥಾನ ಗೆಲ್ಲಲಿದೆ

ಈ ಮಧ್ಯೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ ಶೆಟ್ಟರ್, ಆಂತರಿಕ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಪಕ್ಷ​ 130ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂಬುದು ತಿಳಿದುಬಂದಿದೆ ಎಂದು ಹೇಳಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಾತ್ರವಲ್ಲದೆ ಬೇರೆ ಜಿಲ್ಲೆಗಳಿಂದಲೂ ಚುಣಾವಣಾ ಪ್ರಚಾರಕ್ಕೆ ಆಹ್ವಾನಿಸುತ್ತಿದ್ದಾರೆ. ಕಾಂಗ್ರೆಸ್​ ಪಕ್ಷಕ್ಕೆ ಜನ ಬೆಂಬಲ ದೊಡ್ಡದಾಗಿದೆ. ಧಾರವಾಡ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ.

ಇದನ್ನೂ ಓದಿ: Karnataka Polls: ಲಿಂಗಾಯತ ವಿರೋಧ ಎದುರಿಸಲು ಬಿಜೆಪಿಗೆ ಯಡಿಯೂರಪ್ಪ ಗುರಾಣಿ; ಬೆಳಗಾವಿ ಬಂಡಾಯ ತಣಿಸಿದ ಸಂತೋಷ್ ತಂತ್ರ

ನನ್ನ ಬಗ್ಗೆ ಮಾತನಾಡಲು ಬಿಜೆಪಿಯ ಕೆಎಸ್ ಈಶ್ವರಪ್ಪಗೆ ಒತ್ತಡ ಇರಬಹುದು. ಮೊನ್ನೆ ನನಗೆ ಪತ್ರ ಬರೆದಿದ್ದರು. ಇದು ಪಕ್ಷದ ಒತ್ತಡದಿಂದ ಎಂದು ಶೆಟ್ಟರ್​ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:03 pm, Thu, 20 April 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ