AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿಗೆ ಯಾವುದೇ ಹೊಡೆತ ಆಗಲ್ಲ; ಪ್ರಲ್ಹಾದ್ ಜೋಶಿ

ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿಗೆ ಯಾವುದೇ ಹೊಡೆತ ಆಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

Ganapathi Sharma
|

Updated on:Apr 20, 2023 | 9:14 PM

Share

ಬೆಳಗಾವಿ: ಜಗದೀಶ್ ಶೆಟ್ಟರ್ (Jagadish Shettar) ಅವರು ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿಗೆ ಯಾವುದೇ ಹೊಡೆತ ಆಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Josh) ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಮತದಾರರು ಪಕ್ಷ ನೋಡಿ ಮತ ನೀಡುತ್ತಾರೆ. ಹತಾಶೆಯಿಂದ ಶೆಟ್ಟರ್​ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ನಿಪ್ಪಾಣಿಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಯೋಗಿ ಆದಿತ್ಯನಾಥ್​ ಆಗಮಿಸಲಿದ್ದಾರೆ. ಡಬಲ್​ ಎಂಜಿನ್ ಸರ್ಕಾರದ ಕಾರ್ಯಗಳನ್ನು ಜನರು ಅರಿತಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​​ವರು​ ಅಧಿಕಾರಕ್ಕೆ ಬಂದರೆ ಬಿಜೆಪಿ ನೀಡಿರುವ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಮತದಾರರು ಬಿಜೆಪಿ ಪರವಾಗಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್ 130 ಸ್ಥಾನ ಗೆಲ್ಲಲಿದೆ

ಈ ಮಧ್ಯೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ ಶೆಟ್ಟರ್, ಆಂತರಿಕ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಪಕ್ಷ​ 130ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂಬುದು ತಿಳಿದುಬಂದಿದೆ ಎಂದು ಹೇಳಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಾತ್ರವಲ್ಲದೆ ಬೇರೆ ಜಿಲ್ಲೆಗಳಿಂದಲೂ ಚುಣಾವಣಾ ಪ್ರಚಾರಕ್ಕೆ ಆಹ್ವಾನಿಸುತ್ತಿದ್ದಾರೆ. ಕಾಂಗ್ರೆಸ್​ ಪಕ್ಷಕ್ಕೆ ಜನ ಬೆಂಬಲ ದೊಡ್ಡದಾಗಿದೆ. ಧಾರವಾಡ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ.

ಇದನ್ನೂ ಓದಿ: Karnataka Polls: ಲಿಂಗಾಯತ ವಿರೋಧ ಎದುರಿಸಲು ಬಿಜೆಪಿಗೆ ಯಡಿಯೂರಪ್ಪ ಗುರಾಣಿ; ಬೆಳಗಾವಿ ಬಂಡಾಯ ತಣಿಸಿದ ಸಂತೋಷ್ ತಂತ್ರ

ನನ್ನ ಬಗ್ಗೆ ಮಾತನಾಡಲು ಬಿಜೆಪಿಯ ಕೆಎಸ್ ಈಶ್ವರಪ್ಪಗೆ ಒತ್ತಡ ಇರಬಹುದು. ಮೊನ್ನೆ ನನಗೆ ಪತ್ರ ಬರೆದಿದ್ದರು. ಇದು ಪಕ್ಷದ ಒತ್ತಡದಿಂದ ಎಂದು ಶೆಟ್ಟರ್​ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:03 pm, Thu, 20 April 23

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ