AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಕಳ ಕ್ಷೇತ್ರ ಬಿಟ್ಟು ಹೋಗುವಂತೆ ಸಚಿವ ಸುನಿಲ್ ಕುಮಾರ್​ಗೆ ಮನವಿಯೊಂದಿಗೆ ಸವಾಲ್ ಹಾಕಿದ ಮುತಾಲಿಕ್

ಕಾರ್ಕಳ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಕ್ಷೇತ್ರ ಬಿಟ್ಟು ಹೋಗುವಂತೆ ಸಚಿವ ಸುನಿಲ್ ಕುಮಾರ್​​ಗೆ ಹೇಳಿದ್ದಾರೆ.

ಕಾರ್ಕಳ ಕ್ಷೇತ್ರ ಬಿಟ್ಟು ಹೋಗುವಂತೆ ಸಚಿವ ಸುನಿಲ್ ಕುಮಾರ್​ಗೆ ಮನವಿಯೊಂದಿಗೆ ಸವಾಲ್ ಹಾಕಿದ ಮುತಾಲಿಕ್
ಸಚಿವ ಸುನಿಲ್ ಕುಮಾರ್ ಮತ್ತು ಪ್ರಮೋದ್ ಮುತಾಲಿಕ್
TV9 Web
| Edited By: |

Updated on:Dec 13, 2022 | 6:32 PM

Share

ಉಡುಪಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಈಗಾಗಲೇ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (pramod muthalik) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಬಿಜೆಪಿ ಶಾಸಕ, ಬೊಮ್ಮಾಯಿ ಸಂಪುಟದಲ್ಲಿ ಇಂಧನ ಸಚಿವರಾಗಿರಾಗಿರುವ ಸುನಿಲ್ ಕುಮಾರ್​ಗೆ(sunil kumar) ತಮ್ಮ ಕಾರ್ಕಳ ಕ್ಷೇತ್ರವನ್ನು(karkala Assembly constituency )ಬಿಟ್ಟುಕೊಡುವಂತೆ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲೂ ಗುಜರಾತ್ ಮಾದರಿ ಎಲೆಕ್ಷನ್: ಏನಿದು ಗುಜರಾತ್ ಮಾಡೆಲ್? ಹೇಗಿರುತ್ತೆ ಕಾರ್ಯ ತಂತ್ರ? ಇಲ್ಲಿದೆ ಮಾಹಿತಿ

ಈ ಬಗ್ಗೆ ಉಡುಪಿಯ ಕಾರ್ಕಳದಲ್ಲಿ ಇಂದು(ಡಿಸೆಂಬರ್ 13) ಮಾತನಾಡಿದ ಪ್ರಮೋದ್ ಮುತಾಲಿಕ್, ಪ್ರಮೋದ್ ಮುತಾಲಿಕ್ ಹಿಂದುತ್ವ ಮತ್ತು ನಿಮ್ಮ ಹಿಂದುತ್ವ ಒಂದೇ ತಕ್ಕಡಿಯಲ್ಲಿ ಇಡೋಣ. ಯಾರು ಹಿಂದುತ್ವ ಸಲುವಾಗಿ ಇದ್ದಾರೆ ಎನ್ನುವುದನ್ನು ಜನರ ಮುಂದೆ ಇಡೋಣ. ನನ್ನನ್ನು ಬೆಳೆಸಿದ ಗುರುಗಳು ಬಂದಿದ್ದಾರೆ ಎಂದು ಕ್ಷೇತ್ರ ತ್ಯಾಗ ಮಾಡಿ ಬೇರೆ ಕಡೆ ಎಲ್ಲಾದರೂ ಚುನಾವಣೆಗೆ ಸ್ಪರ್ಧಿಸಿ ಎಂದು ಸುನಿಲ್ ಕುಮಾರ್​ಗೆ ಸಲಹೆ ನೀಡಿದರು.

ನಿಮ್ಮಲ್ಲಿ ನಿಜವಾಗಿ ಹಿಂದುತ್ವ , ಆರ್​ಎಸ್​ಎಸ್ ಇದ್ದರೆ ಕ್ಷೇತ್ರ ತ್ಯಾಗ ಮಾಡಿ. ಕ್ಷೇತ್ರ ನನಗೆ ಬಿಟ್ಟು ಕೊಡಿ. ನಾನು ಹಿಂದುತ್ವ ಏನೆಂದು ತೋರಿಸುತ್ತೇನೆ. ಐದು ವರ್ಷದ ನಂತರ ಮತ್ತೆ ನಿಮ್ಮನ್ನು ನಿಲ್ಲಿಸುತ್ತೇನೆ. ಯಾವ ದಾರಿಯಲ್ಲಿ ನಡೆಯಬೇಕೆಂದು ನಾನು ತೋರಿಸಿಕೊಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಟಿಕೆಟ್ ಕೊಟ್ಟರೆ ಬಿಜೆಪಿಯಿಂದ ಸ್ಪರ್ಧೆ, ಇಲ್ಲವೇ ಪಕ್ಷೇತರವಾಗಿ ಕಣಕ್ಕೆ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್

ಈಗ ನಡೆದದ್ದು ಮತ್ತು ಗಳಿಸಿದ್ದು ಸಾಕು. ತಾತ ಮುತ್ತಾತನಿಂದ ಮರಿ ಮೊಮ್ಮಗನ ತನಕ ಗಳಿಸಿದ್ದು ಸಾಕು. ತಲವಾರು ಹಿಡಿದುಕೊಂಡು ಬಂದವರ ಮುಂದೆ ಹೋರಾಟ ಮಾಡಿದವನು ನಾನು. ಭಯಾನಕವಾದ ತುರ್ತುಪರಿಸ್ಥಿತಿಯಲ್ಲಿ ಹೋರಾಟ ಮಾಡಿದ ಗಂಡುಗಲಿ ನಾನು. ಫೋನ್ ಮಾಡಿಸಿ ನನಗೆ ಭಯಪಡಿಸುವ ಚಿಲ್ಲರೆ ಕೆಲಸ ಮಾಡಬೇಡಿ. ಹಿಂದುತ್ವದ ವೇದಿಕೆಯಲ್ಲಿ ಇಬ್ಬರು ನಿಂತು ಚರ್ಚೆ ಮಾಡೋಣ, ಚರ್ಚೆಗೆ ಬರುವ ತಾಕತ್ತು ಇದೆಯಾ ಎಂದು ಸುನಿಲ್ ಕುಮಾರ್​ಗೆ ಸವಾಲು ಹಾಕಿದರು.

ಕಾರ್ಯಕರ್ತರನ್ನು ಹೆದರಿಸುತ್ತಾರೆ. ದುಡ್ಡು ಅಹಂಕಾರ ಸೊಕ್ಕು ದರ್ಪ ಬಿಟ್ಟುಬಿಡಿ. ಹತ್ತು ಪಟ್ಟು ಜನ ನನ್ನ ಜೊತೆ ಬರುತ್ತಾರೆ ಎಂದರು. ಈ ಮೂಲಕ ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರವನ್ನು ನನಗೆ ಬಿಟ್ಟುಕೊಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಮುತಾಲಿಕ್, ಸುನಿಲ್ ಕುಮಾರ್​ಗೆ ತಾಕೀತು ಮಾಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:24 pm, Tue, 13 December 22

Follow Us
TV9 Web
TV9 Web

TV9 Kannada

Read More
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ