AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್‌ 25ರಂದು ಮೈಸೂರಿಗೆ ಪ್ರಿಯಾಂಕಾ ಗಾಂಧಿ; ಕ್ಷೇತ್ರ ಪ್ರವಾಸ ಹೀಗಿದೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಕರ್ನಾಟಕ ಪ್ರವಾಸ ಮಾಡಿದ್ದಾರೆ. ಇದರ ಬೆನ್ನಲ್ಲೇ ಕೈ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮೈಸೂರು ಪ್ರವಾಸಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 25ರಂದು ಪ್ರಿಯಾಂಕಾ ಗಾಂಧಿ ಜಿಲ್ಲಾ ಪ್ರವಾಸ ಮಾಡಲಿದ್ದಾರೆ.

ಏಪ್ರಿಲ್‌ 25ರಂದು ಮೈಸೂರಿಗೆ ಪ್ರಿಯಾಂಕಾ ಗಾಂಧಿ; ಕ್ಷೇತ್ರ ಪ್ರವಾಸ ಹೀಗಿದೆ
ಏಪ್ರಿಲ್ 25ರಂದು ಪ್ರಿಯಾಂಕಾ ಗಾಂಧಿ ಮೈಸೂರು ಜಿಲ್ಲಾ ಪ್ರವಾಸImage Credit source: ANI
Rakesh Nayak Manchi
|

Updated on:Apr 23, 2023 | 10:41 PM

Share

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಬಹುಮತದೊಂದಿಗೆ ಗೆಲುವು ಸಾಧಿಸಿ ಸರ್ಕಾರ ರಚಿಸಲು ಶತಾಯ ಗತಾಯವಾಗಿ ಪ್ರಯತ್ನಿಸುತ್ತಿರುವ ರಾಜ್ಯ ಕಾಂಗ್ರೆಸ್ (Congress)​ ನಾಯಕರಿಗೆ ಶಕ್ತಿ ತುಂಬಲು ಹೈಕಮಾಂಡ್ ನಾಯಕರು ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್ 23) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಿದ್ದಾರೆ. ಇದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ (Priyanka Gandhi) ಮೈಸೂರು ಜಿಲ್ಲಾ ಪ್ರವಾಸಕ್ಕೂ ಮುಹೂರ್ತ ಫಿಕ್ಸ್‌ ಆಗಿದೆ. ಹೌದು, ಏಪ್ರಿಲ್‌ 25ರಂದು ಪ್ರಿಯಾಂಕಾ ಗಾಂಧಿ ಮೈಸೂರು (Mysuru) ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಸಾರ್ವಜನಿಕ‌ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಜಿಲ್ಲೆಯ ಟಿ.ನರಸೀಪುರ ಕ್ಷೇತ್ರದ ಹೆಳವರಹುಂಡಿಯಲ್ಲಿ ಮಧ್ಯಾಹ್ನ 12ರಿಂದ 1 ಗಂಟೆವರೆಗೆ ನಡೆಯುವ ಸಾರ್ವಜನಿಕ‌ ಸಭೆಯಲ್ಲಿ ಪಾಲ್ಗೊಂಡ ನಂತರ ಪ್ರಿಯಾಂಕಾ ಗಾಂಧಿ, ಮಧ್ಯಾಹ್ನ 2.30ಕ್ಕೆ ಹನೂರು ಕ್ಷೇತ್ರಕ್ಕೆ ತೆರಳಲಿದ್ದಾರೆ. ಅಲ್ಲಿ ಗೌರಿಶಂಕರ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿರುವ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3ರಿಂದ ಸಂಜೆ 4 ಗಂಟೆವರೆಗೆ ಮಹಿಳೆಯರ ಜೊತೆ ಸಂವಾದ ನಡೆಸಲಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೆಸರು ಪ್ರಸ್ತಾಪಿಸಿದ ಚಿತ್ತರಗಿ ಶ್ರೀ, ಪೇಚಿಗೆ ಸಿಲುಕಿದ ಸಂಘಟಕರು

ಸಂವಾದ ಕಾರ್ಯಕ್ರಮದ ಬಳಿಕ ಪ್ರಿಯಾಂಕಾ ಗಾಂಧಿ ಅವರು 4.15ಕ್ಕೆ ಕೆ.ಆರ್.ನಗರಕ್ಕೆ ತೆರಳಲಿದ್ದಾರೆ. ಸಂಜೆ 5.30ರಿಂದ 6.30ರವರೆಗೆ ಅಲ್ಲಿ ನಡೆಯುವ ರೋಡ್‌ಶೋನಲ್ಲಿ ಭಾಗಿಯಾಗಲಿದ್ದಾರೆ. ತೋಪಮ್ಮನ ದೇವಸ್ಥಾನದಿಂದ ಸುಮಾರು‌ 2 ಕಿ.ಮೀ. ವರೆಗೆ ಈ ರೋಡ್‌ ಶೋ ನಡೆಯಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:41 pm, Sun, 23 April 23

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!