AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ವಿಡಿಯೋ ವೈರಲ್: ಇದು ಫೇಕ್​ ಎಂದ ಕಾಂಗ್ರೆಸ್ ನೂತನ ಶಾಸಕ

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ನಿನ್ನೆ(ಮೇ.13) ಹೊರಬಿದ್ದಿದ್ದು, ಬೆಳಗಾವಿ (Belagavi) ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಶಾಸಕ ಆಸೀಫ್ ಸೇಠ್ ಗೆಲುವು ಸಾಧಿಸಿದ್ದರು. ಈ ವೇಳೆ ಪಾಕಿಸ್ತಾನ ಜಿಂದಾಬಾದ್​ ಎನ್ನುವ ವಿಡಿಯೋ ವೈರಲ್​ ಆಗಿದ್ದು, ಬಿಜೆಪಿಯ ಕೆಲವರು ಇಂತಹ ಕೆಲಸ ಮಾಡ್ತಿದ್ದಾರೆ ಎಂದು ಶಾಸಕ ಆಸೀಫ್ ಸೇಠ್ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ವಿಡಿಯೋ ವೈರಲ್: ಇದು ಫೇಕ್​ ಎಂದ ಕಾಂಗ್ರೆಸ್ ನೂತನ ಶಾಸಕ
ಕಾಂಗ್ರೆಸ್​ ಶಾಸಕ ಆಸೀಫ್ ಸೇಠ್
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: May 14, 2023 | 2:35 PM

Share

ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ(Karnataka Assembly Elections 2023 Result)ನಿನ್ನೆ(ಮೇ.13) ಹೊರಬಿದ್ದಿದ್ದು, ಬೆಳಗಾವಿ (Belagavi) ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಶಾಸಕ ಆಸೀಫ್ ಸೇಠ್(Asif Seth) ಗೆಲುವು ಸಾಧಿಸಿದ್ದರು. ಈ ಹಿನ್ನಲೆ ಅವರ ಸಂಭ್ರಮದಲ್ಲಿ ಯಾರೋ ಕಿಡಿಗೇಡಿಗಳು ‘ಪಾಕಿಸ್ತಾನ್​ ಜಿಂದಾಬಾದ್’ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ. ಈ ಕುರಿತು ಕಾಂಗ್ರೆಸ್ ಬೆಂಬಲಿಗರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಸೀಫ್ ಸೇಠ್ ‘ ಆ ವಿಡಿಯೋ ಫೇಕ್, ಬಿಜೆಪಿಯ ಕೆಲವರು ಇಂತಹ ಕೆಲಸ ಮಾಡ್ತಿದ್ದಾರೆ. ಚುನಾವಣೆ ಸಂದರ್ಭದಲ್ಲೂ ಬಿಜೆಪಿಯವರು ಇದನ್ನೇ ಮಾಡಿದ್ರು, ಈ ವಿಷಯ ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಚರ್ಚಿಸುವೆ. ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ನಡೆಸಿದ್ದೇನೆ ಎಂದು ಹೇಳಿದರು.

ಘಟನೆ ವಿವರ

ಇನ್ನು ಶನಿವಾರ (ಮೇ.13) ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಮತ ಎಣಿಕೆ ಕೇಂದ್ರದ ಹೊರಗೆ ಮಧ್ಯಾಹ್ನ ಆಸೀಫ್ ಸೇ‌ಠ್​​ ಗೆಲುವು ಖಾತ್ರಿ ಆಗುತ್ತಿದ್ದಂತೆಯೇ ಅಪಾರ ಸಂಖ್ಯೆಯ ಯುವಕರು ಸುತ್ತ ಸೇರಿದ್ದರು. ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಕುಣಿದಿದ್ದರು. ಈ ವೇಳೆ ಕಾಂಗ್ರೆಸ್‌ ಧ್ವಜ ಹಿಡಿದು ಬಂದ ಕೆಲವರು ಜಿಂದಾಬಾದ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಮೂರು ಬಾರಿ ಘೋಷಣೆ ಮೊಳಗಿಸಿದ್ದರು. ಹತ್ತಿರದಲ್ಲೇ ಇದ್ದ ಕೆಲವು ಪೊಲೀಸರು ಯುವಕರ ಬಳಿ ಹೋಗಿ ತಾಕೀತು ಮಾಡಿದರು. ಈ ರೀತಿ ಬೇರೆ ಮಾತು ತೆಗೆದರೆ ಪರಿಸ್ಥಿತಿ ನೆಟ್ಟಗೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ:ಚುನಾವಣಾ ಆಯೋಗದ ವೆಬ್​ಸೈಟ್​ನಲ್ಲಿ​ ಫಲಿತಾಂಶದ ಅಧಿಕೃತ ಅಂಕಿ-ಸಂಖ್ಯೆ ತಿಳಿಯಿರಿ

ಜಗದೀಶ್ ಶೆಟ್ಟರ್ ಸೋಲು ನನಗೆ ಅತೀವ ಬೇಸರ ತರಿಸಿದೆ

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ‘ಜಗದೀಶ್ ಶೆಟ್ಟರ್ ಸೋಲು ನನಗೆ ಅತೀವ ಬೇಸರ ತರಿಸಿದೆ. ಶೆಟ್ಟರ್​ ನನ್ನ ಪರವಾಗಿಯೂ ಪ್ರಚಾರ ಮಾಡಿದ್ರು, ಬೆಳಗಾವಿಗೆ ಬಂದು ಪ್ರಚಾರ ಮಾಡಿದ್ದರಿಂದ ನಾನು ಗೆದ್ದೆ. ಯಾವಾಗಲೂ ಜಗದೀಶ್ ಶೆಟ್ಟರ್ ಜೊತೆಗೆ ಕಾಂಗ್ರೆಸ್ ಇರುತ್ತೆ. ಕಾಂಗ್ರೆಸ್ ಗೆಲುವಿನಿಂದ ಕರ್ನಾಟಕಕ್ಕೆ ಈಗ ಅಚ್ಛೇದಿನ್​​​ ಬಂತು. ಜೊತೆಗ ಮುಖ್ಯಮಂತ್ರಿ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ. ಸಿದ್ದರಾಮಯ್ಯ, ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಸುರ್ಜೇವಾಲಾ ಪ್ರಯತ್ನದಿಂದ ರಾಜ್ಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗೆದ್ದಿದೆ. ಸಂಜೆ‌ ಬೆಂಗಳೂರಿನಲ್ಲಿ ಸಿಎಲ್‌ಪಿ ಸಭೆ ಇದ್ದು, ಹೀಗಾಗಿ ಹೊರಟಿದ್ದೇವೆ ಎಂದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್