AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi Rally: ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಯಲ್ಲಿ ಇಂದು ರಾಹುಲ್ ಗಾಂಧಿ ಮತಬೇಟೆ

ಕಾಂಗ್ರೆಸ್,​ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿಯಿಟ್ಟುಕೊಂಡಿದ್ದು, ಆದ್ದರಿಂದಲೇ ಇಂದು (ಏ.28) ವಿಶೇಷ ವಿಮಾನದ ಮೂಲಕ ಮಂಗಳೂರಿನಿಂದ ಕಲಬುರಗಿಗೆ ರಾಹುಲ್​ ಗಾಂಧಿ ಆಗಮಿಸಲಿದ್ದಾರೆ.

Rahul Gandhi Rally: ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಯಲ್ಲಿ ಇಂದು ರಾಹುಲ್ ಗಾಂಧಿ ಮತಬೇಟೆ
ರಾಹುಲ್​ ಗಾಂಧಿ
ಕಿರಣ್ ಹನುಮಂತ್​ ಮಾದಾರ್
|

Updated on:Apr 28, 2023 | 7:20 AM

Share

ಕಲಬುರಗಿ: ವಿಧಾನಸಭೆ ಚುನಾವಣೆ(Karnataka Assembly Election)ಗೆ ಇನ್ನು ಸರಿಯಾಗಿ 12 ದಿನಗಳಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರಕ್ಕೀಳಿದಿದೆ. ಈ ಮಧ್ಯೆ ಕಾಂಗ್ರೆಸ್,​ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿಯಿಟ್ಟುಕೊಂಡಿದೆ. ಆದ್ದರಿಂದಲೇ ಇಂದು (ಏ.28) ವಿಶೇಷ ವಿಮಾನದ ಮೂಲಕ ಮಂಗಳೂರಿನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ರಾಹುಲ್​ ಗಾಂಧಿ(Rahul Gandhi) ಆಗಮಿಸಲಿದ್ದಾರೆ. ಇಂದು ಮುಂಜಾನೆ 10.45 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ಹೆಲಿಕಾಪ್ಟರ್ ಮೂಲಕ ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ ತೆರಳಲಿದ್ದಾರೆ.

ಜೇವರ್ಗಿ ತಾಲೂಕು ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಸಮಾವೇಶ

ಹೌದು ಅಬ್ಬರದ ಪ್ರಚಾರ ಕೈಗೊಂಡಿರುವ ಕಾಂಗ್ರೆಸ್, ಜೇವರ್ಗಿ ತಾಲೂಕು ಕ್ರೀಡಾಂಗಣದಲ್ಲಿ ಬೃಹತ್​ ಸಮಾವೇಶ ಏರ್ಪಡಿಸಿದ್ದು, ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಇನ್ನು ಕಾರ್ಯಕ್ರಮಕ್ಕೆ ಜಿಲ್ಲೆಯ ಒಂಬತ್ತು ಕ್ಷೇತ್ರಗಳಿಂದ ಐವತ್ತು ಸಾವಿರಕ್ಕೂ ಹೆಚ್ಚು ಜನ ಸೇರಿಸಿ ಕೈ ಕಾರ್ಯಕರ್ತರು ಬೃಹತ್ ಸಮಾವೇಶ ಏರ್ಪಡಿಸಿದ್ದಾರೆ. ಇನ್ನು ಸಮಾವೇಶ ಮುಗಿಸಿಕೊಂಡು ಮಧ್ಯಾಹ್ನ 1.10 ಕ್ಕೆ ಜೇವರ್ಗಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ವಿಶೇಷ ವಿಮಾನದ ಮೂಲಕ ರಾಹುಲ್ ಗಾಂಧಿ ಬಳ್ಳಾರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ:ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ: ರಾಜಕೀಯ ಅಸ್ತ್ರವಾಗಿಸಿಕೊಂಡ ಬಿಜೆಪಿ ನಾಯಕರು

ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಇಂದು(ಏ.28) ರೋಡ್ ಶೋ ನಡೆಸಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

ಕಲಬುರಗಿ: ಇಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಮಾವೇಶದ ಮಧ್ಯೆ, ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರೋಡ್ ಶೋ ನಡೆಸಲಿದ್ದಾರೆ. ವಿಶೇಷ ವಿಮಾನ ಮೂಲಕ 10.45 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬೊಮ್ಮಾಯಿ ಆಗಮಿಸಲಿದ್ದಾರೆ. ಬಳಿಕ ಅಲ್ಲಿಂದ ಸೇಡಂ ಪಟ್ಟಣಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ತೆರಳಿ 11. 30 ಕ್ಕೆ ಸೇಡಂ ಪಟ್ಟಣದಲ್ಲಿ ಸೇಡಂ ಬಿಜೆಪಿ ಅಭ್ಯರ್ಥಿ ರಾಜಕುಮಾರ ಪಾಟೀಲ್ ತೇಲ್ಕೂರ್ ಪರ ರೋಡ್ ಶೋ ನಡೆಸಲಿದ್ದಾರೆ. ನಂತರ ಸೇಡಂನಿಂದ ಯಾದಗಿರಿ ಜಿಲ್ಲೆಯ ಶಹಪೂರ್ ಪಟ್ಟಣಕ್ಕೆ ಹೋಗಲಿದ್ದು, ಮಧ್ಯಾಹ್ನ 1.30 ಕ್ಕೆ ಶಹಾಪುರ ಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದು, ಬಳಿಕ ಮಧ್ಯಾಹ್ನ 3.30 ಕ್ಕೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸಂಜೆ 5ರಿಂದ ಕಲಬುರಗಿ ನಗರದ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ರೋಡ್ ಶೋ ಮತ್ತು ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಜಿಲ್ಲೆಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಜಿಲ್ಲೆಯಲ್ಲಿ ಇಂದು ಮಾಜಿ ಸಿಎಂ ಯಡಿಯೂರಪ್ಪ ಪ್ರಚಾರ

ಕಲಬುರಗಿ: ಜಿಲ್ಲೆಯಲ್ಲಿ ಇಂದು ಮಾಜಿ ಸಿಎಂ ಯಡಿಯೂರಪ್ಪ ಪ್ರಚಾರ ಮಾಡಲಿದ್ದಾರೆ. ಒಂದು ಕಡೆ ಸಿಎಂ ಬಸವರಾಜ ಬೊಮ್ಮಾಯಿ ರೋಡ್​ ಶೋ ಮಾಡುತ್ತಿದ್ದರೆ, ಇತ್ತ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರದಲ್ಲಿ ಯಡಿಯೂರಪ್ಪ ಪ್ರಚಾರ ಮಾಡಲಿದ್ದಾರೆ. ಇಂದು ಮುಂಜಾನೆ 10 ಗಂಟೆಗೆ ಕಮಲಾಪುರ ಪಟ್ಟಣದಲ್ಲಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮಡು ಪರ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ 12 ಕ್ಕೆ ಅಫಜಲಪುರದಲ್ಲಿ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿಯಾಗಿ, ಮಧ್ಯಾಹ 2.30 ಕ್ಕೆ ಜೇವರ್ಗಿ ಕ್ಷೇತ್ರದ ಯಡ್ರಾಮಿ ಪಟ್ಟಣದಲ್ಲಿ ಸಭೆ ಮಾಡಿ, ನಂತರ ಸಂಜೆ 5 ಕ್ಕೆ ಆಳಂದ ಪಟ್ಟಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:03 am, Fri, 28 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ