ರಾಹುಲ್​ ಗಾಂಧಿ ರಾಜ್ಯ ಪ್ರವಾಸ ಮುಂದೂಡಿಕೆ: ಏಪ್ರಿಲ್​ 5ರ ಬದಲು 9ಕ್ಕೆ ಕೋಲಾರ ಭೇಟಿ

ಏಪ್ರಿಲ್​ 5 ರಂದು ಕೋಲಾರದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್​ನ ಸತ್ಯಮೇವ ಜಯತೆ ಸಮಾವೇಶವನ್ನು ಮುಂದೂಡಲಾಗಿದ್ದು ಏಪ್ರಿಲ್​ 9 ರಂದು ನಡೆಯಲಿದೆ.

ರಾಹುಲ್​ ಗಾಂಧಿ ರಾಜ್ಯ ಪ್ರವಾಸ ಮುಂದೂಡಿಕೆ: ಏಪ್ರಿಲ್​ 5ರ ಬದಲು 9ಕ್ಕೆ ಕೋಲಾರ ಭೇಟಿ
ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ
Follow us
|

Updated on:Mar 31, 2023 | 9:09 PM

ಕೋಲಾರ: ಭಾರತ ಜೋಡೋ (Bharth Jodo Yatra) ಯಾತ್ರೆ ನಂತರ ಕಾಂಗ್ರೆಸ್ (Congress)​ ರಾಷ್ಟ್ರೀಯ ನಾಯಕ ರಾಹುಲ್​ ಗಾಂಧಿ (Rahul Gandhi) ಎರಡನೇ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು ಕೋಲಾರದಲ್ಲಿ ನಡೆಯಲಿರುವ “ಸತ್ಯಮೇವ ಜಯತೆ” ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಪೂರ್ವ ನಿಗದಿಯಂತೆ ರಾಹುಲ್​ ಗಾಂಧಿ ಏಪ್ರಿಲ್​ 5 ರಂದು ರಾಜ್ಯಕ್ಕೆ ಆಗಮಿಸಬೇಕಿತ್ತು, ಆದರೆ ಏಪ್ರಿಲ್​ 9ಕ್ಕೆ ಮರುನಿಗದಿಯಾಗಿದೆ. ಇನ್ನು ರಾಹುಲ್​ ಗಾಂಧಿ ಅವರನ್ನು ಅನರ್ಹಗೊಳಿಸಿದ್ದಕ್ಕೆ ಕೋಲಾರದಿಂದಲೇ (Kolar) ಪ್ರತ್ಯುತ್ತರ ನೀಡಲು ಕಾಂಗ್ರೆಸಿಗರು ಮುಂದಾಗಿದ್ದಾರೆ. ರಾಹುಲ್​ ಗಾಂಧಿ ರಾಜ್ಯ ಪ್ರವಾಸ ಭೇಟಿ ಹಿನ್ನೆಲೆ ನಿಗದಿಯಾಗಿದ್ದ ಸಭೆ ಕೂಡ ಮೊಟಕುಗೊಂಡಿದೆ.

ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲ, ಕೆಪಿಸಿಸಿ ಡಿ.ಕೆ.ಶಿವಕುಮಾರ್​, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಡಾ. ಜಿ. ಪರಮೇಶ್ವರ್​, ದಿನೇಶ್ ಗುಂಡೂರಾವ್​, ರಾಮಲಿಂಗಾರೆಡ್ಡಿ, ಜಮೀರ್​ ಅಹ್ಮದ್, ಭೈರತಿ ಸುರೇಶ್​​, ಅಖಂಡ ಶ್ರೀನಿವಾಸ್​ ಮೂರ್ತಿ ಇನ್ನೀತರ ನಾಯಕರು ಭಾಗಿಯಾಗಲಿದ್ದರು. ಇನ್ನು ಪೂರ್ವ ಸಿದ್ದತೆಗಳ ಪರಿಶೀಲನೆಗೆ ನಾಳೆ (ಏ.01) ರಂದು ಕೋಲಾರಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ನಮ್ಮ ಮನೆಯೇ ನಿಮ್ಮ ಮನೆ: ರಾಜ್ಯ ಕಾಂಗ್ರೆಸ್​ ನಾಯಕರಿಂದ ರಾಹುಲ್​ ಗಾಂಧಿಗೆ ಆಹ್ವಾನ

2ನೇ ಹಂತದಲ್ಲಿ ಕಾಂಗ್ರೆಸ್​ನ 100 ಟಿಕೆಟ್ ಕ್ಲಿಯರ್​ ಮಾಡುತ್ತೇವೆ

2ನೇ ಹಂತದಲ್ಲಿ ಕಾಂಗ್ರೆಸ್​ನ 100 ಟಿಕೆಟ್ ಕ್ಲಿಯರ್​ ಮಾಡುತ್ತೇವೆ. ನಿನ್ನೆ ಕಾಂಗ್ರೆಸ್​ನ ಚುನಾವಣಾ ಸಮಿತಿ ಸಭೆ ನಡೆದಿದೆ. 3 ಅಥವಾ 4 ಕ್ಷೇತ್ರ ಬಿಟ್ಟು ಉಳಿದೆಲ್ಲ ಕ್ಷೇತ್ರಗಳನ್ನು ಕ್ಲಿಯರ್ ಮಾಡುವೆ. ಹಾಲಿ ಶಾಸಕರಿಗೆ ಟಿಕೆಟ್ ನೀಡುತ್ತೇವೆ, ಈ ಬಗ್ಗೆ ಚರ್ಚೆ ಆಗುತ್ತಿದೆ. ಟಿಕೆಟ್ ವಿಚಾರದಲ್ಲಿ ಯಾವುದೇ ಊಹಾಪೋಹ ಬೇಡವೆಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 pm, Fri, 31 March 23

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ