Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ ಗಾಂಧಿ ರಾಜ್ಯ ಪ್ರವಾಸ ಮುಂದೂಡಿಕೆ: ಏಪ್ರಿಲ್​ 5ರ ಬದಲು 9ಕ್ಕೆ ಕೋಲಾರ ಭೇಟಿ

ಏಪ್ರಿಲ್​ 5 ರಂದು ಕೋಲಾರದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್​ನ ಸತ್ಯಮೇವ ಜಯತೆ ಸಮಾವೇಶವನ್ನು ಮುಂದೂಡಲಾಗಿದ್ದು ಏಪ್ರಿಲ್​ 9 ರಂದು ನಡೆಯಲಿದೆ.

ರಾಹುಲ್​ ಗಾಂಧಿ ರಾಜ್ಯ ಪ್ರವಾಸ ಮುಂದೂಡಿಕೆ: ಏಪ್ರಿಲ್​ 5ರ ಬದಲು 9ಕ್ಕೆ ಕೋಲಾರ ಭೇಟಿ
ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ
Follow us
ವಿವೇಕ ಬಿರಾದಾರ
|

Updated on:Mar 31, 2023 | 9:09 PM

ಕೋಲಾರ: ಭಾರತ ಜೋಡೋ (Bharth Jodo Yatra) ಯಾತ್ರೆ ನಂತರ ಕಾಂಗ್ರೆಸ್ (Congress)​ ರಾಷ್ಟ್ರೀಯ ನಾಯಕ ರಾಹುಲ್​ ಗಾಂಧಿ (Rahul Gandhi) ಎರಡನೇ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು ಕೋಲಾರದಲ್ಲಿ ನಡೆಯಲಿರುವ “ಸತ್ಯಮೇವ ಜಯತೆ” ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಪೂರ್ವ ನಿಗದಿಯಂತೆ ರಾಹುಲ್​ ಗಾಂಧಿ ಏಪ್ರಿಲ್​ 5 ರಂದು ರಾಜ್ಯಕ್ಕೆ ಆಗಮಿಸಬೇಕಿತ್ತು, ಆದರೆ ಏಪ್ರಿಲ್​ 9ಕ್ಕೆ ಮರುನಿಗದಿಯಾಗಿದೆ. ಇನ್ನು ರಾಹುಲ್​ ಗಾಂಧಿ ಅವರನ್ನು ಅನರ್ಹಗೊಳಿಸಿದ್ದಕ್ಕೆ ಕೋಲಾರದಿಂದಲೇ (Kolar) ಪ್ರತ್ಯುತ್ತರ ನೀಡಲು ಕಾಂಗ್ರೆಸಿಗರು ಮುಂದಾಗಿದ್ದಾರೆ. ರಾಹುಲ್​ ಗಾಂಧಿ ರಾಜ್ಯ ಪ್ರವಾಸ ಭೇಟಿ ಹಿನ್ನೆಲೆ ನಿಗದಿಯಾಗಿದ್ದ ಸಭೆ ಕೂಡ ಮೊಟಕುಗೊಂಡಿದೆ.

ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲ, ಕೆಪಿಸಿಸಿ ಡಿ.ಕೆ.ಶಿವಕುಮಾರ್​, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಡಾ. ಜಿ. ಪರಮೇಶ್ವರ್​, ದಿನೇಶ್ ಗುಂಡೂರಾವ್​, ರಾಮಲಿಂಗಾರೆಡ್ಡಿ, ಜಮೀರ್​ ಅಹ್ಮದ್, ಭೈರತಿ ಸುರೇಶ್​​, ಅಖಂಡ ಶ್ರೀನಿವಾಸ್​ ಮೂರ್ತಿ ಇನ್ನೀತರ ನಾಯಕರು ಭಾಗಿಯಾಗಲಿದ್ದರು. ಇನ್ನು ಪೂರ್ವ ಸಿದ್ದತೆಗಳ ಪರಿಶೀಲನೆಗೆ ನಾಳೆ (ಏ.01) ರಂದು ಕೋಲಾರಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ನಮ್ಮ ಮನೆಯೇ ನಿಮ್ಮ ಮನೆ: ರಾಜ್ಯ ಕಾಂಗ್ರೆಸ್​ ನಾಯಕರಿಂದ ರಾಹುಲ್​ ಗಾಂಧಿಗೆ ಆಹ್ವಾನ

2ನೇ ಹಂತದಲ್ಲಿ ಕಾಂಗ್ರೆಸ್​ನ 100 ಟಿಕೆಟ್ ಕ್ಲಿಯರ್​ ಮಾಡುತ್ತೇವೆ

2ನೇ ಹಂತದಲ್ಲಿ ಕಾಂಗ್ರೆಸ್​ನ 100 ಟಿಕೆಟ್ ಕ್ಲಿಯರ್​ ಮಾಡುತ್ತೇವೆ. ನಿನ್ನೆ ಕಾಂಗ್ರೆಸ್​ನ ಚುನಾವಣಾ ಸಮಿತಿ ಸಭೆ ನಡೆದಿದೆ. 3 ಅಥವಾ 4 ಕ್ಷೇತ್ರ ಬಿಟ್ಟು ಉಳಿದೆಲ್ಲ ಕ್ಷೇತ್ರಗಳನ್ನು ಕ್ಲಿಯರ್ ಮಾಡುವೆ. ಹಾಲಿ ಶಾಸಕರಿಗೆ ಟಿಕೆಟ್ ನೀಡುತ್ತೇವೆ, ಈ ಬಗ್ಗೆ ಚರ್ಚೆ ಆಗುತ್ತಿದೆ. ಟಿಕೆಟ್ ವಿಚಾರದಲ್ಲಿ ಯಾವುದೇ ಊಹಾಪೋಹ ಬೇಡವೆಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 pm, Fri, 31 March 23

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ