AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ ಗಾಂಧಿ ರಾಜ್ಯ ಪ್ರವಾಸ ಮುಂದೂಡಿಕೆ: ಏಪ್ರಿಲ್​ 5ರ ಬದಲು 9ಕ್ಕೆ ಕೋಲಾರ ಭೇಟಿ

ಏಪ್ರಿಲ್​ 5 ರಂದು ಕೋಲಾರದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್​ನ ಸತ್ಯಮೇವ ಜಯತೆ ಸಮಾವೇಶವನ್ನು ಮುಂದೂಡಲಾಗಿದ್ದು ಏಪ್ರಿಲ್​ 9 ರಂದು ನಡೆಯಲಿದೆ.

ರಾಹುಲ್​ ಗಾಂಧಿ ರಾಜ್ಯ ಪ್ರವಾಸ ಮುಂದೂಡಿಕೆ: ಏಪ್ರಿಲ್​ 5ರ ಬದಲು 9ಕ್ಕೆ ಕೋಲಾರ ಭೇಟಿ
ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ
ವಿವೇಕ ಬಿರಾದಾರ
|

Updated on:Mar 31, 2023 | 9:09 PM

Share

ಕೋಲಾರ: ಭಾರತ ಜೋಡೋ (Bharth Jodo Yatra) ಯಾತ್ರೆ ನಂತರ ಕಾಂಗ್ರೆಸ್ (Congress)​ ರಾಷ್ಟ್ರೀಯ ನಾಯಕ ರಾಹುಲ್​ ಗಾಂಧಿ (Rahul Gandhi) ಎರಡನೇ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು ಕೋಲಾರದಲ್ಲಿ ನಡೆಯಲಿರುವ “ಸತ್ಯಮೇವ ಜಯತೆ” ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಪೂರ್ವ ನಿಗದಿಯಂತೆ ರಾಹುಲ್​ ಗಾಂಧಿ ಏಪ್ರಿಲ್​ 5 ರಂದು ರಾಜ್ಯಕ್ಕೆ ಆಗಮಿಸಬೇಕಿತ್ತು, ಆದರೆ ಏಪ್ರಿಲ್​ 9ಕ್ಕೆ ಮರುನಿಗದಿಯಾಗಿದೆ. ಇನ್ನು ರಾಹುಲ್​ ಗಾಂಧಿ ಅವರನ್ನು ಅನರ್ಹಗೊಳಿಸಿದ್ದಕ್ಕೆ ಕೋಲಾರದಿಂದಲೇ (Kolar) ಪ್ರತ್ಯುತ್ತರ ನೀಡಲು ಕಾಂಗ್ರೆಸಿಗರು ಮುಂದಾಗಿದ್ದಾರೆ. ರಾಹುಲ್​ ಗಾಂಧಿ ರಾಜ್ಯ ಪ್ರವಾಸ ಭೇಟಿ ಹಿನ್ನೆಲೆ ನಿಗದಿಯಾಗಿದ್ದ ಸಭೆ ಕೂಡ ಮೊಟಕುಗೊಂಡಿದೆ.

ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲ, ಕೆಪಿಸಿಸಿ ಡಿ.ಕೆ.ಶಿವಕುಮಾರ್​, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಡಾ. ಜಿ. ಪರಮೇಶ್ವರ್​, ದಿನೇಶ್ ಗುಂಡೂರಾವ್​, ರಾಮಲಿಂಗಾರೆಡ್ಡಿ, ಜಮೀರ್​ ಅಹ್ಮದ್, ಭೈರತಿ ಸುರೇಶ್​​, ಅಖಂಡ ಶ್ರೀನಿವಾಸ್​ ಮೂರ್ತಿ ಇನ್ನೀತರ ನಾಯಕರು ಭಾಗಿಯಾಗಲಿದ್ದರು. ಇನ್ನು ಪೂರ್ವ ಸಿದ್ದತೆಗಳ ಪರಿಶೀಲನೆಗೆ ನಾಳೆ (ಏ.01) ರಂದು ಕೋಲಾರಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ನಮ್ಮ ಮನೆಯೇ ನಿಮ್ಮ ಮನೆ: ರಾಜ್ಯ ಕಾಂಗ್ರೆಸ್​ ನಾಯಕರಿಂದ ರಾಹುಲ್​ ಗಾಂಧಿಗೆ ಆಹ್ವಾನ

2ನೇ ಹಂತದಲ್ಲಿ ಕಾಂಗ್ರೆಸ್​ನ 100 ಟಿಕೆಟ್ ಕ್ಲಿಯರ್​ ಮಾಡುತ್ತೇವೆ

2ನೇ ಹಂತದಲ್ಲಿ ಕಾಂಗ್ರೆಸ್​ನ 100 ಟಿಕೆಟ್ ಕ್ಲಿಯರ್​ ಮಾಡುತ್ತೇವೆ. ನಿನ್ನೆ ಕಾಂಗ್ರೆಸ್​ನ ಚುನಾವಣಾ ಸಮಿತಿ ಸಭೆ ನಡೆದಿದೆ. 3 ಅಥವಾ 4 ಕ್ಷೇತ್ರ ಬಿಟ್ಟು ಉಳಿದೆಲ್ಲ ಕ್ಷೇತ್ರಗಳನ್ನು ಕ್ಲಿಯರ್ ಮಾಡುವೆ. ಹಾಲಿ ಶಾಸಕರಿಗೆ ಟಿಕೆಟ್ ನೀಡುತ್ತೇವೆ, ಈ ಬಗ್ಗೆ ಚರ್ಚೆ ಆಗುತ್ತಿದೆ. ಟಿಕೆಟ್ ವಿಚಾರದಲ್ಲಿ ಯಾವುದೇ ಊಹಾಪೋಹ ಬೇಡವೆಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 pm, Fri, 31 March 23

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?