AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ರಾಹುಲ್ ಗಾಂಧಿ ಪಾದಯಾತ್ರೆ ಸಾಗಿದ ಬಹುತೇಕ ಕಡೆ ಕಾಂಗ್ರೆಸ್ ಗೆದ್ದಿದೆ: ರಣದೀಪ್ ಸುರ್ಜೆವಾಲ

Randeep Surjewala: ರಾಹುಲ್ ಗಾಂಧಿ ದೇಶಾದ್ಯಂತ ಕೈಗೊಂಡ ಭಾರತ್ ಜೋಡೋ ಯಾತ್ರೆ ಸಾಗಿದ ಬಹುತೇಕ ಕಡೆಯಲ್ಲೆಲ್ಲಾ ಕಾಂಗ್ರೆಸ್ ಗೆಲುವು ಸಾಧಿಸುತ್ತಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ಅಭಿಪ್ರಾಯಪಟ್ಟಿದ್ದಾರೆ.

Rahul Gandhi: ರಾಹುಲ್ ಗಾಂಧಿ ಪಾದಯಾತ್ರೆ ಸಾಗಿದ ಬಹುತೇಕ ಕಡೆ ಕಾಂಗ್ರೆಸ್ ಗೆದ್ದಿದೆ: ರಣದೀಪ್ ಸುರ್ಜೆವಾಲ
ರಾಹುಲ್ ಗಾಂಧಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2023 | 8:00 PM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​ನ ಹಿರಿಯ ನಾಯಕರು ಶನಿವಾರ ಸಂಜೆ ವಿಜಯೋತ್ಸವ ಆಚರಿಸಿದರು. ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ವರಿಷ್ಠ ರಣದೀಪ್ ಸುರ್ಜೆವಾಲ, ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ದಕ್ಷಿಣ ಭಾರತವು ಬಿಜೆಪಿಮುಕ್ತವಾಗಿದೆ ಎಂದು ಹೇಳಿದ್ದಾರೆ. ಈ ಗೆಲುವು ಕರ್ನಾಟಕದ ಮತದಾರರ ಗೆಲುವಾಗಿದೆ. ಬ್ರ್ಯಾಂಡ್ ಕರ್ನಾಟಕ ಗೆದ್ದಿದೆ ಎಂದ ಸುರ್ಜೆವಾಲ, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಶ್ರಮ ಒಂದು ಪ್ರಮುಖ ಕಾರಣ ಎಂಬುದನ್ನೂ ಹೇಳಲು ಮರೆಯಲಿಲ್ಲ.

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಎಫೆಕ್ಟ್?

ರಾಹುಲ್ ಗಾಂಧಿ ಅವರು ದೇಶಾದ್ಯಂತ ಭಾರತ್ ಜೋಡೋ ಯಾತ್ರೆ ಮೂಲಕ ಸಾಗಿದ ಪ್ರದೇಶಗಳಲ್ಲಿ ಬಹುತೇಕ ಎಲ್ಲಾ ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಜ್ಯದಲ್ಲಿ ಯಾತ್ರೆ ಹೋದ ಶೇ. 80ರಷ್ಟು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ರಣದೀಪ್ ಸುರ್ಜೆವಾಲ ಹೇಳಿದ್ದಾರೆ.

ಇದನ್ನೂ ಓದಿಟಿಕೆಟ್ ಸಿಗದೇ ಬಂಡೆದ್ದು ಬೇರೆ-ಬೇರೆ ಪಕ್ಷಕ್ಕೆ ಹೋಗಿದ್ದ ಜಂಪಿಂಗ್ ಸ್ಟಾರ್ಸ್ ಗೆದ್ರಾ? ಸೋತ್ರಾ? ಇಲ್ಲಿದೆ ವಿವರ

ಇನ್ನು, ಸೋನಿಯಾ ಗಾಂಧಿ ರಾಜ್ಯ ಕಾಂಗ್ರೆಸ್ ಪಾಲಿಗೆ ಅದೃಷ್ಟದ ವ್ಯಕ್ತಿ ಎನಿಸಿದ್ದಾರೆ. ಅವರ ಆಶೀರ್ವಾದದಿಂದಲೇ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಗೆಲುವು ಸಾಧ್ಯವಾಗಿದೆ ಎಂದು ಮಾಧ್ಯಮಗೋಷ್ಠಿ ವೇಳೆ ರಣದೀಪ್ ಸುರ್ಜೆವಾಲ ಅಭಿಪ್ರಾಯಪಟ್ಟಿದ್ದಾರೆ.

ಇಂದಿರಾ ಗಾಂಧಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಉಪಸ್ಥಿತರಿದ್ದರು.

ಕರ್ನಾಟಕ ವಿಧಾನಸಭಾ ಚುನಾವಣೆಗೆ 2023 ಮೇ 10ರಂದು ಮತದಾನವಾಗಿತ್ತು. ಇಂದು ಮೇ 13ರಂದು ಫಲಿತಾಂಶ ಪ್ರಕಟವಾಗಿದ್ದು 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 137 ಸ್ಥಾನಗಳನ್ನು ಗೆದ್ದಿದೆ. ಬಹುಮತಕ್ಕೆ ಬೇಕಾದ 113 ಸ್ಥಾನಗಳ ಗಡಿಯನ್ನು ಕಾಂಗ್ರೆಸ್ ಸುಲಭವಾಗಿ ದಾಟಿ ಹೋಗಿದ್ದು 5 ವರ್ಷ ಕಾಲ ಸುಭದ್ರ ಸರ್ಕಾರ ಸ್ಥಾಪಿಸುವ ಖಚಿತತೆ ಸಿಕ್ಕಿದೆ. ಆಡಳಿತಾರೂಢ ಬಿಜೆಪಿ 64 ಸ್ಥಾನಗಳಿಗೆ ತೃಪ್ತಿಪಡಬೇಕಿದೆ. 30ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಪಕ್ಷ 20 ಸ್ಥಾನಗಳಿಗೆ ತೃಪ್ತಿ ಪಡುವಂತಾಗಿದೆ. ಸ್ವಂತ ಪಕ್ಷ ಕಟ್ಟಿದ್ದ ಜನಾರ್ಧನ ರೆಡ್ಡಿಗೆ ನಿರಾಸೆಯಾಗಿದೆ.

ವಿಧಾನಸಭಾ ಚುನಾವಣೆಯ ಇನ್ನಷ್ಟು ಸುದ್ದಿಗಳು

Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?