AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್ ರಾಜಕಾರಣ ಮುಗಿದಿದೆ, ನನಗೆ ಜವಾಬ್ದಾರಿ ಕೊಟ್ಟ ದಿನದಿಂದ ನಾನೂ ಮಲಗಿಲ್ಲ, ಮಲಗುವುದಕ್ಕೂ ಬಿಟ್ಟಿಲ್ಲ ಎಂದ ಡಿಕೆಶಿವಕುಮಾರ್

ನಾನು ಪಕ್ಷಕ್ಕೆ ಶ್ರಮ ಪಟ್ಟಿದ್ದೀನಿ, ನನಗೆ ಜವಾಬ್ದಾರಿ ಕೊಟ್ಟ ದಿನದಿಂದ ನಾನೂ ಮಲಗಿಲ್ಲ, ಮಲಗುವುದಕ್ಕೂ ಬಿಟ್ಟಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ರೆಸಾರ್ಟ್ ರಾಜಕಾರಣ ಮುಗಿದಿದೆ, ನನಗೆ ಜವಾಬ್ದಾರಿ ಕೊಟ್ಟ ದಿನದಿಂದ ನಾನೂ ಮಲಗಿಲ್ಲ, ಮಲಗುವುದಕ್ಕೂ ಬಿಟ್ಟಿಲ್ಲ ಎಂದ ಡಿಕೆಶಿವಕುಮಾರ್
ಡಿಕೆ ಶಿವಕುಮಾರ್​
ಕಿರಣ್ ಹನುಮಂತ್​ ಮಾದಾರ್
|

Updated on: May 12, 2023 | 11:55 AM

Share

ಬೆಂಗಳೂರು: ‘ನಾನು ಪಕ್ಷಕ್ಕೆ ಶ್ರಮ ಪಟ್ಟಿದ್ದೀನಿ, ರೆಸಾರ್ಟ್​ ರಾಜಕಾರಣ ಮುಗಿದಿದೆ. ನನಗೆ ಜವಾಬ್ದಾರಿ ಕೊಟ್ಟ ದಿನದಿಂದ ನಾನೂ ಮಲಗಿಲ್ಲ, ಮಲಗುವುದಕ್ಕೂ ಬಿಟ್ಟಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ದಿನೇಶ್ ಗುಂಡೂರಾವ್(Dinesh Gundu Rao) ಆಗಲ್ಲವೆಂದು ಬಿಟ್ಟಾಗ ನನಗೆ ಜವಾಬ್ದಾರಿ ಕೊಟ್ಟರು. ನೈತಿಕ ಹೊಣೆ ಹೊತ್ತು ಎಲ್ಲರೂ ರಾಜೀನಾಮೆ ಕೊಟ್ಟಿದ್ರು, ಆಗ ನನಗೆ ಸೋನಿಯ ಗಾಂಧಿಯವರು ಜವಾಬ್ದಾರಿ ಕೊಟ್ಟರು. ಈಗ ಹಿರಿಯರು ಕಿರಿಯರು ಎಲ್ಲರೂ ನಮಗೆ ಈಗ ಸಹಕಾರ ಕೊಡ್ತಾರೆ, ಉತ್ತಮವಾದ ಸರ್ಕಾರ ಕೊಡ್ತೀವಿ ಎಂದರು.

ಎಕ್ಸಿಟ್ ಪೋಲ್ ಸರ್ವೇ ಕುರಿತು ಮಾತನಾಡಿದ ಅವರು ‘ ಈ ಬಗ್ಗೆ ನಂಬಿಕೆ ಇಲ್ಲ, ನನ್ನ ನಂಬಿಕೆ 141 ಸೀಟು, ಎಕ್ಸಿಟ್ ಪೋಲ್ ಸ್ಯಾಂಪಲ್ ಸಂಖ್ಯೆ ಕಡಿಮೆ ಇದ್ದು, ನಮ್ಮ ಸ್ಯಾಂಪಲ್ ಸಂಖ್ಯೆ ಜಾಸ್ತಿ ಇದೆ. ಇನ್ನೂ ಹೆಚ್ಚಿನ ಸಂಖ್ಯೆ ಬರಲಿದ್ದು, ನಿಚ್ಚಳವಾದ ಬಹುಮತ ಕಾಂಗ್ರೆಸ್​ಗೆ ಬರುತ್ತದೆ. ಇದು ನನ್ನ ಅಚಲವಾದ ನಂಬಿಕೆ. ಬಿಜೆಪಿಯವರು ಎಷ್ಟೇ ದುಡ್ಡು ಸುರಿದಿರಬಹುದು. ಬಿಜೆಪಿಯ ಎಷ್ಟೇ ದೊಡ್ಡ ನಾಯಕರು ಬಂದು ಪ್ರಚಾರ ಮಾಡಿರಬಹುದು. ಆದರೆ, ‘ಬ್ಯಾಲೇಟ್ ಈಸ್ ಸ್ಟ್ರಾಂಗರ್ ದೇನ್ ಬುಲೆಟ್’ ಯಾವ ರೀತಿ ಆಡಳಿತ ದುರುಪಯೋಗ ಮಾಡಿಕೊಂಡರು ಎನ್ನೋದು ದೊಡ್ಡ ಕಥೆ ಎಂದರು.

ಇದನ್ನೂ ಓದಿ:ಮೈಸೂರು: ಚುನಾವಣೆ ಗೆಲುವು ಸೋಲಿನ ಮೇಲೆ ಛಾಪಾಕಾಗದದಲ್ಲಿ 5ಲಕ್ಷದ ಬೆಟ್ಟಿಂಗ್ ಅಗ್ರಿಮೆಂಟ್

ಜೆಡಿಎಸ್ ನಾಯಕರು ಕಾರ್ಯಕರ್ತರಿಗೆ ಹೇಳ್ತಾ ಇದ್ದೇನೆ, ಬಂದು ನನ್ನ ಸೇರಿಕೊಳ್ಳಿ

ಹೌದು ತೆರೆಯೂ ಇಲ್ಲ, ಮರೆಯೂ ಇಲ್ಲ. ಎಚ್​ಡಿಕೆ ಏನು ಹೇಳ್ತಾರೆ ಮಾಡ್ತಾರೆ ಗೊತ್ತಿಲ್ಲ. ಮೈತ್ರಿ ಬಗ್ಗೆ ಎಚ್​ಡಿಕೆ ಮಾತು ಗೊತ್ತಿಲ್ಲ. ಕುಮಾರಣ್ಣನ ಕಾರ್ಯಕರ್ತರಿಗೆ ಧೈರ್ಯ ತುಂಬಬೇಕು ಮಾತಾಡ್ತಾರೆ. ನಾನಂತೂ ಈಗಲೇ ರಿಟೈರ್ ಆಗುವವನಲ್ಲ. ನನ್ನ ಕೊನೆ ಉಸಿರು ಇರುವ ತನಕ ಫೈಟ್ ಮಾಡುವವನು, ಜೆಡಿಎಸ್ ನಾಯಕರು ಕಾರ್ಯಕರ್ತರಿಗೆ ಹೇಳ್ತಾ ಇದ್ದೇನೆ, ಬಂದು ನನ್ನ ಸೇರಿಕೊಳ್ಳಿ ಎಂದಿದ್ದಾರೆ. ಇದೇ ವೇಳೆ ಕಪ್ ನಮ್ಮದೇ ಎಂಬ ಆರ್ ಅಶೋಕ್ ಹೇಳಿಕೆ ವಿಚಾರ ‘ಎಷ್ಟೇ ನಂಬರ್​ ಬಂದರೂ ಸರ್ಕಾರ ಮಾಡ್ತೀವಿ ಅಂತಿದ್ದಾರಲ್ಲ. ಕಪ್​​ ಅಶೋಕ್​ ಅವರೇ ಇಟ್ಟುಕೊಳ್ಳಲಿ. ಎಲ್ಲ ಪಕ್ಷದವರು ಅವರವರ ಶಾಸಕರನ್ನು ಹಿಡಿದಿಟ್ಟುಕೊಳ್ತಾರೆ. ಯಾವ ಅಧಿಕಾರ ಹಂಚಿಕೆಯ ಮಾತೂ ಇಲ್ಲ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ, ರಾಹುಲ್ ಗಾಂಧಿ ಹೇಳಿದಂತೆ ನಾವು ಕೇಳ್ತೀವಿ ಎಂದು ಡಿಕೆಶಿ ಟಾಂಗ್ ಕೊಟ್ಟಿದ್ದಾರೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ