ಮೇ 10ರ ಮತದಾನದಂದು ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ, ಮತ ಹಾಕಿದವರಿಗೆ ಮಾತ್ರ ವಾಹನದಲ್ಲಿ ಪರ್ಮಿಷನ್

ಮತದಾರರು ತಪ್ಪದೇ ಮತ ಚಲಾಯಿಸುವ ಉದ್ದೇಶದಿಂದ ಸರ್ಕಾರ ರಜಾ ಘೋಷಣೆ ಮಾಡಿದೆ. ಆದ್ರೆ ಕೆಲ ಮತದಾರರು ಮತ ಚಲಾಯಿಸದೆ ತಮಗೆ ಸಿಕ್ಕ ರಜೆಯನ್ನು ಮಜಾ ಮಾಡುವ ಉದ್ದೇಶದಿಂದ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಹೀಗಾಗಿ ಕೆಲ ಪ್ರಮುಖ ಪ್ರವಾಸಿ ತಾಣಗಳಿಗೆ ಮತದಾನದ ದಿನದಂದು ನಿರ್ಬಂಧ ಹೇರಲಾಗಿದೆ.

ಮೇ 10ರ ಮತದಾನದಂದು ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ, ಮತ ಹಾಕಿದವರಿಗೆ ಮಾತ್ರ ವಾಹನದಲ್ಲಿ ಪರ್ಮಿಷನ್
ನಂದಿ ಹಿಲ್ಸ್ (ಸಂಗ್ರಹ ಚಿತ್ರ)
Follow us
| Updated By: Digi Tech Desk

Updated on:May 09, 2023 | 9:53 AM

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಶುರುವಾಗಿದೆ(Karnataka Assembly Elections 2023). ಮೇ 10ರಂದು ನಡೆಯುವ ಚುನಾವಣೆಗೆ ಮತದಾರರು ತಪ್ಪದೇ ಮತ ಚಲಾಯಿಸುವ ಉದ್ದೇಶದಿಂದ ಸರ್ಕಾರ ರಜಾ ಘೋಷಣೆ ಮಾಡಿದೆ. ಆದ್ರೆ ಕೆಲ ಮತದಾರರು ಮತ ಚಲಾಯಿಸದೆ ತಮಗೆ ಸಿಕ್ಕ ರಜೆಯನ್ನು ಮಜಾ ಮಾಡುವ ಉದ್ದೇಶದಿಂದ ಪ್ರವಾಸಿ ತಾಣಗಳಿಗೆ(Tourist Spot) ಭೇಟಿ ನೀಡುತ್ತಾರೆ. ಹೀಗಾಗಿ ಕೆಲ ಪ್ರಮುಖ ಪ್ರವಾಸಿ ತಾಣಗಳಿಗೆ ಮತದಾನದ ದಿನದಂದು ನಿರ್ಬಂಧ ಹೇರಲಾಗಿದೆ. ಅಲ್ಲದೆ ಮತದಾನ‌ ಮಾಡಿ ಬಂದವರಿಗೆ ಮಾತ್ರ ಪ್ರವಾಸಿ ವಾಹನಗಳಲ್ಲಿ ಪ್ರಯಾಣಿಸಲು ಅಥವಾ ಬಳಸಲು ಅವಕಾಶ ನೀಡಬೇಕೆಂದು ಮೈಸೂರು ಜಿಲ್ಲಾ ಟ್ರ್ಯಾವಲ್ಸ್ ಮಾಲೀಕರು ನಿರ್ಧರಿಸಿದ್ದಾರೆ.

ಮೈಸೂರು ಪ್ರವಾಸಿಗರ ಸ್ವರ್ಗ. ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಮೈಸೂರು ಟ್ರ್ಯಾವಲ್ಸ್ ಮಾಲೀಕರು ಕಡ್ಡಾಯ ಮತದಾನಕ್ಕೆ ಸಾಥ್ ನೀಡಿದ್ದು ಮತದಾನದ ದಿನದಂದು ಮತ ಚಲಾಯಿಸಿದವರಿಗೆ ಮಾತ್ರ ಪ್ರವಾಸಿ ವಾಹನದಲ್ಲಿ ಪ್ರಯಾಣಿಸಲು ಅಥವಾ ಬಳಸಲು ಅವಕಾಶ ನೀಡಲು ಮುಂದಾಗಿದ್ದಾರೆ. ಇದು ನಾಳೆ ಮೈಸೂರು ಪ್ರವಾಸಿ ತಾಣಗಳಿಗೆ ಬರುವ ನಮ್ಮ ರಾಜ್ಯದ ಪ್ರವಾಸಿಗರಿಗೆ ಅನ್ವಯವಾಗುತ್ತದೆ.

ಇದನ್ನೂ ಓದಿ: ಮತದಾನ ಸಾಂವಿಧಾನಿಕ ಹಕ್ಕು, ಅರ್ಹ ನಾಯಕರನ್ನು ಆಯ್ಕೆ ಮಾಡಲು ಇರುವ ಅವಕಾಶ

ಮತದಾನ ಮಾಡಿದ ಗುರುತು ತೋರಿಸಿದರೆ ಮಾತ್ರ ವಾಹನ ನೀಡಲಾಗುತ್ತೆ. ಇಲ್ಲವಾದರೆ ವಾಹನ ನೀಡವುದಿಲ್ಲ. ಮತದಾನ ಪ್ರಜಾಪ್ರಭುತ್ವದ ಹಬ್ಬ ಎಲ್ಲರೂ ಅದರಲ್ಲಿ ಭಾಗವಹಿಸಬೇಕು. ಈ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಬಹುತೇಕರು ಮತದಾನದ ದಿನದ ರಜೆಯಲ್ಲಿ ಪ್ರವಾಸ ಹೋಗುತ್ತಾರೆ. ಮೈಸೂರು ಪ್ರವಾಸಿಗರ ಸ್ವರ್ಗ, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಅದಕ್ಕಾಗಿ ಈಗಲೇ ಈ ಬಗ್ಗೆ ಮಾಹಿತಿ ನೀಡಿದ್ದೇವೆ. ಮತದಾನ ಯಶಸ್ವಿಗೊಳಿಸಲು ನಮ್ಮ ಸಹಕಾರ ಎಂದು ಟಿವಿ9ಗೆ ಮೈಸೂರು ಟ್ರ್ಯಾವಲ್ಸ್ ಮಾಲೀಕ ಜಯಕುಮಾರ್ ತಿಳಿಸಿದರು.

ನಾಳೆ ಬನ್ನೇರುಘಟ್ಟ ಪಾರ್ಕ್ ಬಂದ್

ಬೆಂ ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ನಾಳೆ ಮತದಾನ ದಿನವಾದ ಹಿನ್ನೆಲೆ ಬಂದ್ ಮಾಡಲಾಗುತ್ತೆ. ಈ ಬಗ್ಗೆ ಟಿವಿ9ಗೆ ED‌ ಸುನೀಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಮತದಾನ‌ದ ಕಾರಣ ಪಾರ್ಕ್ ಬಂದ್ ಮಾಡಲಾಗುತ್ತೆ ಎಂದರು.

ಮತದಾನದಂದು ನಂದಿಗಿರಿಧಾಮ ಬಂದ್

ನಾಳೆ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಹೀಗಾಗಿ ಮೇ 10ರ ಮುಂಜಾನೆ 5ರಿಂದ ರಾತ್ರಿ 8 ಗಂಟೆವರೆಗೆ ನಂದಿಗಿರಿಧಾಮ ಬಂದ್ ಮಾಡಿ ಚಿಕ್ಕಬಳ್ಳಾಪುರ ಡಿಸಿ ನಾಗರಾಜ್​​ ಆದೇಶ ಹೊರಡಿಸಿದ್ದಾರೆ. ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಮೇ 10ರಂದು ಜೋಗಜಲಪಾತಕ್ಕೆ ನಿರ್ಬಂಧ

ಮೇ 10ಅಂದ್ರೆ ನಾಳೆ ಮತದಾನ ಇರುವುದರಿಂದ ಅಂದು ವಿಶ್ವ ವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರಿಗೆ ಪ್ರವೇಶ ನಿಷೇಧ ಇದೆ. ಮತದಾನ ದಿನದಂದು ಬಹಳಷ್ಟುಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸುವುದನ್ನು ಬಿಟ್ಟು ರಜಾ ಮಜಾ ಸವಿಯಲು ಪ್ರವಾಸಿ ತಾಣಗಳಿಗೆ ಹೋಗುವ ಪರಿಪಾಠ ಬೆಳೆಸಿಕೊಂಡು ಬಂದಿದ್ದಾರೆ. ಇದಕ್ಕೆ ಬ್ರೇಕ್‌ ಹಾಕುವ ಉದ್ದೇಶದಿಂದ ಚುನಾವಣೆ ದಿನದಂದು ಜೋಗ ಜಲಪಾತ ವೀಕ್ಷಣೆಗೆ ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ನಿರ್ಬಂಧ ವಿಧಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮೊದಲ ಬಾರಿಗೆ ಮತಚಲಾಯಿಸುವವರ ಸಂಖ್ಯೆ ಎಷ್ಟು ಗೊತ್ತಾ? ಇಲ್ಲಿದೆ ಓದಿ

ಮತದಾನದಿಂದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರದೆ ಇದ್ದರೆ ಬರುವ ಪ್ರವಾಸಿಗರಿಗಾಗಿ ನಿರ್ವಹಣಾ ಪ್ರಾಧಿಕಾರ ಸಿಬ್ಬಂದಿ ಕರ್ತವ್ಯಪಾಲನೆ ಮಾಡಬೇಕಾಗುತ್ತದೆ. ಇವರಿಗೆ ಪೂರಕವಾಗಿ ಸ್ಥಳೀಯವಾಗಿರುವ ವ್ಯಾಪಾರಸ್ಥರು, ಛಾಯಚಿತ್ರಗಾರರು, ಬೀದಿ ಬದಿ ವ್ಯಾಪಾರಿಗಳು, ಗೈಡ್‌ಗಳು, ಆಟೋಚಾಲಕರು, ಟ್ಯಾಕ್ಸಿ ಚಾಲಕರು ಭದ್ರತಾ ಸಿಬ್ಬಂದಿ ಸೇರಿದಂತೆ ಅನೇಕರು ಮತದಾನದಿಂದ ಹೊರಗುಳಿಯುವ ಸಾಧ್ಯತೆ ಇದೆ. ಈ ಹಿಂದೆ ಮತದಾನ ದಿನಗಳಂದು ಜೋಗ ನಿರ್ವಹಣಾ ಪ್ರಾಧಿಕಾರದಲ್ಲಿ ದಾಖಲಾದ ಪ್ರವಾಸಿಗರ ಸಂಖ್ಯೆ ಅಂಕಿ ಅಂಶಗಳನ್ನು ಪರಿಗಣಿಸಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:16 am, Tue, 9 May 23

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು