AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rona Election Result: ರೋಣ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾಂಗ್ರೆಸ್​ ಅಭ್ಯರ್ಥಿ‌ ಜಿಎಸ್​ ಪಾಟೀಲ್​ ಗೆಲುವು

Rona Assembly Election Result 2023 Live Counting Updates: ರೋಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಳಕಪ್ಪ ಗುರುಶಾಂತಪ್ಪ ಬಂಡಿ, ಕಾಂಗ್ರೆಸ್​ನಿಂದ​ ಗುರುಪಾದ ಸಂಗನಗೌಡ ಪಾಟೀಲ ಮತ್ತು ಜೆಡಿಎಸ್​ನಿಂದ​ ಮಕ್ತುಮಸಾಬ ಮುಧೋಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Rona Election Result: ರೋಣ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾಂಗ್ರೆಸ್​ ಅಭ್ಯರ್ಥಿ‌ ಜಿಎಸ್​ ಪಾಟೀಲ್​ ಗೆಲುವು
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:May 13, 2023 | 3:46 PM

Rona Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ರೋಣ ವಿಧಾನಸಭಾ ಕ್ಷೇತ್ರದಿಂದ (Rona Assembly Constituency) ಕಾಂಗ್ರೆಸ್​ ಪಕ್ಷ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿಎಸ್​ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದ ಕಳಕಪ್ಪ ಗುರುಶಾಂತಪ್ಪ ಬಂಡಿ ಎರಡನೇ ಸ್ಥಾನದಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್ ಪಾಟೀಲ್ ಗೆಲ್ಲುವು ಬಹುತೇಕ ಖಚಿತವಾಗುತ್ತಿದ್ದಂತೆ, ಮತ ಎಣಿಕೆ ಕೇಂದ್ರದಿಂದ ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿ ಅವರು ಹೊರನಡೆದಿದ್ದಾರೆ.

2018ರ ಚುನಾವಣೆಯಲ್ಲಿ 83 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಕಾಂಗ್ರೆಸ್​​ ಅಭ್ಯರ್ಥಿ ಗುರುಪಾದಗೌಡ ಸಂಗನಗೌಡ ಪಾಟೀಲ ವಿರುದ್ಧ 7 ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಕಳಕಪ್ಪ ಬಂಡಿಯವರಿಗೆ ಬಿಜೆಪಿ ಬಾರಿಯೂ ಟಿಕೆಟ್​ ನೀಡಿತ್ತು. ಕಳಕಪ್ಪ ಬಂಡಿಯ ಅವರ ಪತ್ನಿ ಸಂಯುಕ್ತಾ ಬಂಡಿ ಅವರು ರೋಣ ಪಟ್ಟಣದಲ್ಲಿ ಪತಿ ಪರ ಮತಯಾಚಿಸಿದ್ದರು.

ಕಳೆದ ಬಾರಿ ಚುನಾವಣೆಯಲ್ಲಿ ಜಿ. ಎಸ್​ ಪಾಟೀಲ ಸೋತರೂ ಕಾಂಗ್ರೆಸ್​ ಈ ಬಾರಿ ಮತ್ತೆ ಅವರಿಗೆ ಟಿಕೆಟ್​ ನೀಡಿತ್ತು. ಈ ಭಾರಿ ಗೆಲುವು ಸಾಧಿಸುವ ಮೂಲಕ ಪಕ್ಷದ ವಿಶ್ವಾಸಕ್ಕೆ ಕಾಪಾಡಿಕೊಂಡಿದ್ದಾರೆ. ಕ್ಷೇತ್ರದ ಲಿಂಗಾಯತ ಮತಗಳೊಂದಿಗೆ ಕುರುಬ ಸೇರಿದಂತೆ ಇತರೆ ಮತಗಳು ತಮಗೆ ಬರಬಹುದು ಎಂಬ ನಂಬಿಕೆಯಲಿದ್ದರು.

ಅದೇ ರೀತಿಯಾಗಿ ಆನೇಕಲ್​ ದೊಡ್ಡಯ್ಯ ಅವರು ಆಮ್​ ಆದ್ಮಿ ಪಕ್ಷದಿಂದ ಉಮೇದುವಾರರಾಗಿ ಅಖಾಡಕ್ಕೆ ಧುಮುಕಿದ್ದರು. ರೋಣ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಆಮ್​ ಆದ್ಮಿ ತನ್ನ ಖಾತೆ ತೆರೆಯುವ ಭರವಸೆಯಲ್ಲಿದ್ದರು. ಹೀಗಾಗಿ ಈ ಕ್ಷೇತ್ರದಲ್ಲಿ ನಾಲ್ಕು ಪಕ್ಷಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮತ್ತು ಆಮ್​ ಆದ್ಮಿ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಉಂಟಾಗಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 2:34 am, Sat, 13 May 23

ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ
ಸುದೀಪ್ ವಿರುದ್ಧ ಏಕವಚನ ಬಳಸಿದರೇ ಡಿಸಿಎಂ ಡಿಕೆಶಿ: ವಿಡಿಯೋ ನೋಡಿ
ಸುದೀಪ್ ವಿರುದ್ಧ ಏಕವಚನ ಬಳಸಿದರೇ ಡಿಸಿಎಂ ಡಿಕೆಶಿ: ವಿಡಿಯೋ ನೋಡಿ