AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rona Election Result: ರೋಣ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾಂಗ್ರೆಸ್​ ಅಭ್ಯರ್ಥಿ‌ ಜಿಎಸ್​ ಪಾಟೀಲ್​ ಗೆಲುವು

Rona Assembly Election Result 2023 Live Counting Updates: ರೋಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಳಕಪ್ಪ ಗುರುಶಾಂತಪ್ಪ ಬಂಡಿ, ಕಾಂಗ್ರೆಸ್​ನಿಂದ​ ಗುರುಪಾದ ಸಂಗನಗೌಡ ಪಾಟೀಲ ಮತ್ತು ಜೆಡಿಎಸ್​ನಿಂದ​ ಮಕ್ತುಮಸಾಬ ಮುಧೋಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Rona Election Result: ರೋಣ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾಂಗ್ರೆಸ್​ ಅಭ್ಯರ್ಥಿ‌ ಜಿಎಸ್​ ಪಾಟೀಲ್​ ಗೆಲುವು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:May 13, 2023 | 3:46 PM

Share

Rona Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ರೋಣ ವಿಧಾನಸಭಾ ಕ್ಷೇತ್ರದಿಂದ (Rona Assembly Constituency) ಕಾಂಗ್ರೆಸ್​ ಪಕ್ಷ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿಎಸ್​ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದ ಕಳಕಪ್ಪ ಗುರುಶಾಂತಪ್ಪ ಬಂಡಿ ಎರಡನೇ ಸ್ಥಾನದಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್ ಪಾಟೀಲ್ ಗೆಲ್ಲುವು ಬಹುತೇಕ ಖಚಿತವಾಗುತ್ತಿದ್ದಂತೆ, ಮತ ಎಣಿಕೆ ಕೇಂದ್ರದಿಂದ ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿ ಅವರು ಹೊರನಡೆದಿದ್ದಾರೆ.

2018ರ ಚುನಾವಣೆಯಲ್ಲಿ 83 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಕಾಂಗ್ರೆಸ್​​ ಅಭ್ಯರ್ಥಿ ಗುರುಪಾದಗೌಡ ಸಂಗನಗೌಡ ಪಾಟೀಲ ವಿರುದ್ಧ 7 ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಕಳಕಪ್ಪ ಬಂಡಿಯವರಿಗೆ ಬಿಜೆಪಿ ಬಾರಿಯೂ ಟಿಕೆಟ್​ ನೀಡಿತ್ತು. ಕಳಕಪ್ಪ ಬಂಡಿಯ ಅವರ ಪತ್ನಿ ಸಂಯುಕ್ತಾ ಬಂಡಿ ಅವರು ರೋಣ ಪಟ್ಟಣದಲ್ಲಿ ಪತಿ ಪರ ಮತಯಾಚಿಸಿದ್ದರು.

ಕಳೆದ ಬಾರಿ ಚುನಾವಣೆಯಲ್ಲಿ ಜಿ. ಎಸ್​ ಪಾಟೀಲ ಸೋತರೂ ಕಾಂಗ್ರೆಸ್​ ಈ ಬಾರಿ ಮತ್ತೆ ಅವರಿಗೆ ಟಿಕೆಟ್​ ನೀಡಿತ್ತು. ಈ ಭಾರಿ ಗೆಲುವು ಸಾಧಿಸುವ ಮೂಲಕ ಪಕ್ಷದ ವಿಶ್ವಾಸಕ್ಕೆ ಕಾಪಾಡಿಕೊಂಡಿದ್ದಾರೆ. ಕ್ಷೇತ್ರದ ಲಿಂಗಾಯತ ಮತಗಳೊಂದಿಗೆ ಕುರುಬ ಸೇರಿದಂತೆ ಇತರೆ ಮತಗಳು ತಮಗೆ ಬರಬಹುದು ಎಂಬ ನಂಬಿಕೆಯಲಿದ್ದರು.

ಅದೇ ರೀತಿಯಾಗಿ ಆನೇಕಲ್​ ದೊಡ್ಡಯ್ಯ ಅವರು ಆಮ್​ ಆದ್ಮಿ ಪಕ್ಷದಿಂದ ಉಮೇದುವಾರರಾಗಿ ಅಖಾಡಕ್ಕೆ ಧುಮುಕಿದ್ದರು. ರೋಣ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಆಮ್​ ಆದ್ಮಿ ತನ್ನ ಖಾತೆ ತೆರೆಯುವ ಭರವಸೆಯಲ್ಲಿದ್ದರು. ಹೀಗಾಗಿ ಈ ಕ್ಷೇತ್ರದಲ್ಲಿ ನಾಲ್ಕು ಪಕ್ಷಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮತ್ತು ಆಮ್​ ಆದ್ಮಿ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಉಂಟಾಗಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 2:34 am, Sat, 13 May 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್