AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore: ಹೆಚ್ ಡಿ ಕೋಟೆ: ಮತದಾರರ ಕೈ ಸೇರಬೇಕಿದ್ದ 50 ಲಕ್ಷ ರೂ ಚುನಾವಣಾಧಿಕಾರಿಗಳ ಕೈ ವಶವಾಯ್ತು!

ಮೈಸೂರಿನ ಹೆಚ್​ಡಿ ಕೋಟೆ ತಾಲೂಕಿನ ಮನೆಯೊಂದರಲ್ಲಿ ಚುನಾವಣಾಧಿಕಾರಿಗಳು ಹುಡುಕಾಡಿದಾಗ 50 ಲಕ್ಷ ರೂ. ಪತ್ತೆಯಾಗಿದೆ. ಮನೆ ಬಳಿ ಇದ್ದ ಎಂ ಸ್ಯಾಂಡ್ ರಾಶಿಯೊಳಗೆ ಹಣ ಇರುವ ಶಂಕೆ ಹಿನ್ನೆಲೆ ಜೆಸಿಬಿ ಮೂಲಕ ಅಗೆಯಲಾಯಿತು. ಆದರೆ ಸಿಕ್ಕಿದ್ದೇನು ಗೊತ್ತಾ?

Mysore: ಹೆಚ್ ಡಿ ಕೋಟೆ: ಮತದಾರರ ಕೈ ಸೇರಬೇಕಿದ್ದ 50 ಲಕ್ಷ ರೂ ಚುನಾವಣಾಧಿಕಾರಿಗಳ ಕೈ ವಶವಾಯ್ತು!
ಮೈಸೂರಿನ ಹೆಚ್​ಡಿ ಕೋಟೆ ತಾಲೂಕಿನ ಮನೊಯೊಂದರಲ್ಲಿ ಸಿಕ್ಕಿದ 50 ಲಕ್ಷ ರೂಪಾಯಿ
Rakesh Nayak Manchi
|

Updated on:May 09, 2023 | 8:53 PM

Share

ಮೈಸೂರು: ಕರ್ನಾಟಕ ಚುನಾವಣೆ (Karnataka Assembly Elections 2023) ಹಿನ್ನೆಲೆ ಮತದಾರರಿಗೆ ಹಂಚಲು ಲಕ್ಷಾಂತರ ರೂಪಾಯಿ, ಕೋಟ್ಯಾಂತರ ರೂಪಾಯಿ ಹಣ ದಾಖಲೆಗಳಿಲ್ಲದೆಯೇ ಸಾಗಾಟ ಮಾಡಲಾಗುತ್ತಿದೆ. ಕೆಲವರು ಚುನಾವಣಾಧಿಕಾರಿಗಳು ಜಪ್ತಿ ಮಾಡಬಾರದು ಎಂದು ಹಣವನ್ನು ಗೌಪ್ಯವಾಗಿ ಇಡಲಾಗುತ್ತಿದೆ. ಜಿಲ್ಲೆಯ ಹೆಚ್​ಡಿ ಕೋಟೆ ತಾಲೂಕಿನ ದೇವಲಾಪುರ ಕಾಲೋನಿ ತೋಟದ ಮನೆಯೊಂದರಲ್ಲಿ ಚುನಾವಣಾಧಿಕಾರಿಗಳು ಶೋಧ ನಡೆಸಿದಾಗ 50 ಲಕ್ಷ ರೂಪಾಯಿ (Money Found) ಪತ್ತೆಯಾಗಿದೆ.

ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಚುನಾವಣಾಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ತೋಟದ ಮನೆಗೆ ಬಂದ ಅಧಿಕಾರಿಗಳೊಂದಿಗೆ ಸ್ಥಳೀಯರು ಮಾತಿಗಿಳಿದಿದ್ದಾರೆ. ಈ ನಡುವೆಯೂ ಶೋಧ ನಡೆಸಿದ ಅಧಿಕಾರಿಗಳು ಮನೆಯೊಳಗೆ ಬ್ಯಾಗ್ ಪತ್ತೆಯಾಗಿದ್ದು, ಇದರಲ್ಲಿ ಕಂತೆಕಂತೆ ನೋಟುಗಳು ಪತ್ತೆಯಾಗಿವೆ.

ಇದನ್ನೂ ಓದಿ: 2018ರ ವಿಧಾನಸಭಾ ಚುನಾವಣೆಗಿಂತ 4.5 ಪಟ್ಟು ಹೆಚ್ಚು ಹಣ ಜಪ್ತಿ: ಕೇಂದ್ರ ಚುನಾವಣಾ ಆಯೋಗ ಮಾಹಿತಿ

ಬ್ಯಾಗ್​ನಲ್ಲಿ 50 ಲಕ್ಷ ರೂ. ಇರುವುದು ತಿಳಿದುಬಂದಿದೆ. ಇದನ್ನು ವಶಕ್ಕೆ ಪಡೆದ ಅಧಿಕಾರಿಗಳ ಕಣ್ಣು ಮನೆಯ ಪಕ್ಕದಲ್ಲೇ ಇದ್ದ ಎಂ ಸ್ಯಾಂಡ್ ರಾಶಿ ಮೇಲೆ ಬಿದ್ದಿದೆ. ಈ ರಾಶಿಯಲ್ಲಿ ಹಣ ಬಚ್ಚಿಟ್ಟಿರುವ ಸಾಧ್ಯತೆ ಹಿನ್ನೆಲೆ ಜೆಸಿಬಿ ತಂದು ಅಗೆದಿದ್ದಾರೆ. ಆದರೆ ಅಗೆದಿದ್ದೇ ಬಂತೇ ಹೊರತು ರಾಶಿಯೊಳಗೆ ಏನೂ ಸಿಕ್ಕಿಲ್ಲ. ಸದ್ಯ ಮನೆಯಲ್ಲಿ ಪತ್ತೆಯಾದ ಹಣದ ಬಗ್ಗೆ ಚುನಾವಣಾಧಿಕಾರಿಗಳು ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:49 pm, Tue, 9 May 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು