AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹೊಸಿಲಲ್ಲಿ ಮತ ಕ್ರೋಡೀಕರಣಕ್ಕೆ ಮತ್ತೊಂದು ಅಸ್ತ್ರ: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಗೆ ಬಿಜೆಪಿ ಸರ್ಕಾರ ಚಿಂತನೆ

ವರದಿಯ ಪ್ರಕಾರ ಎಸ್​ಸಿ ಬಲಗೈ ಸಮುದಾಯಗಳಿಗೆ ಶೇ 5, ಎಸ್​ಸಿ ಎಡಗೈ ಸಮುದಾಯಗಳಿಗೆ ಶೇ 6ರ ಮೀಸಲಾತಿ ನಿಗದಿಪಡಿಸಲಾಗಿದೆ.

ಚುನಾವಣೆ ಹೊಸಿಲಲ್ಲಿ ಮತ ಕ್ರೋಡೀಕರಣಕ್ಕೆ ಮತ್ತೊಂದು ಅಸ್ತ್ರ: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಗೆ ಬಿಜೆಪಿ ಸರ್ಕಾರ ಚಿಂತನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 15, 2022 | 11:46 AM

Share

ಬೆಂಗಳೂರು: ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಳ ಬಳಿಕ ಮತ ಕ್ರೋಡೀಕರಣಕ್ಕಾಗಿ ಕರ್ನಾಟಕದ ಬಿಜೆಪಿ ಸರ್ಕಾರವು ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಈಗಾಗಲೇ ಎಸ್​ಸಿ ಒಳ ಮೀಸಲಾತಿ ವಿಚಾರವಾಗಿ ನ್ಯಾಯಮೂರ್ತಿ ಸದಾಶಿವ ಆಯೋಗವು ವರದಿ ಸಲ್ಲಿಸಿದ್ದು, ಆಯೋಗದ ವರದಿ ಜಾರಿಗೊಳಿಸಬೇಕೆಂಬ ಬೇಡಿಕೆ ಕೇಳಿಬಂದಿದೆ. ವರದಿಯ ಪ್ರಕಾರ ಎಸ್​ಸಿ ಬಲಗೈ ಸಮುದಾಯಗಳಿಗೆ ಶೇ 5, ಎಸ್​ಸಿ ಎಡಗೈ ಸಮುದಾಯಗಳಿಗೆ ಶೇ 6ರ ಮೀಸಲಾತಿ ನಿಗದಿಪಡಿಸಲಾಗಿದೆ. ಬೋವಿ ಮತ್ತು ಬಂಜಾರಾ ಸಮುದಾಯಗಳಿಗೆ ಶೇ 1 ಹಾಗೂ ಇತರರಿಗೆ ಶೇ 3ರ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ವರದಿಯು ಶಿಫಾರಸು ಮಾಡಿದೆ. ಹೆಚ್ಚುವರಿ ಮೀಸಲಾತಿಗೆ ಅನುಗುಣವಾಗಿ ಒಳಮೀಸಲಾತಿ ಪರಿಷ್ಕರಣೆ ಮಾಡಲು ಸರ್ಕಾರವು ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿಬಂದಿವೆ.

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯು ಇನ್ನೂ ಮಂಡನೆಯಾಗಿಲ್ಲ. ಆದರೆ ಈ ವರದಿಯಲ್ಲಿ ಪ್ರಸ್ತಾಪಿಸಿರುವ ಎಸ್​ಸಿ ಒಳ ಮೀಸಲಾತಿಯ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಲ್ಲೂ ಉಲ್ಲೇಖ ಮಾಡಲಾಗಿದೆ. ಒಳ ಮೀಸಲಾತಿ ಅನುಷ್ಠಾನದ ಮೂಲಕ ಎಸ್​ಸಿ ಸಮುದಾಯದ ಮನಗೆಲ್ಲುವ ಬಗ್ಗೆಯೂ ರಾಜ್ಯ ಸರ್ಕಾರವು ಚುನಾವಣಾ ತಂತ್ರ ಹೆಣೆದಿದೆ. ಚುನಾವಣೆ ಸಮೀಪವಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೀಸಲಾತಿ ಬಗ್ಗೆ ಆಗಾಗ ಚರ್ಚೆಯಾಗುವಂತೆ ನೋಡಿಕೊಳ್ಳುತ್ತಿದೆ. ಈ ಮೂಲಕ ಮತಗಳನ್ನು ತನ್ನ ಪರವಾಗಿ ಕ್ರೋಡೀಕರಿಸಿಕೊಳ್ಳಲು ಬಿಜೆಪಿಯು ಯತ್ನಿಸುತ್ತಿದೆ ಎಂದು ವಿಶ್ಲೇಷಿಲಾಗುತ್ತಿದೆ.

ಬಿಜೆಪಿ ಹಿಂದೇಟು ಹಾಕದು: ನಾರಾಯಣಸ್ವಾಮಿ

ಒಳ ಮೀಸಲಾತಿ ಜಾರಿ ವಿಷಯದಲ್ಲಿ ಬಿಜೆಪಿಯು ಎಂದಿಗೂ ಹಿಂದೇಟು ಹಾಕುವುದಿಲ್ಲ ಎಂದು ಇತ್ತೀಚೆಗಷ್ಟೇ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಮೈಸೂರಿನಲ್ಲಿ ಹೇಳಿದ್ದರು. ‘ಬಿಜೆಪಿಯಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ. ಬಹುಶಃ ಕಾಂಗ್ರೆಸ್​ನ ಸಿದ್ದರಾಮಯ್ಯ ಹೊರತುಪಡಿಸಿದರೆ ಉಳಿದವರೆಲ್ಲರೂ ಒಳಮೀಸಲಾತಿ ಪರವಾಗಿಯೇ ಇದ್ದಾರೆ’ ಎಂದು ಅವರು ಅಭಿಪ್ರಾಯಪಟ್ಟಿದ್ದರು.

‘ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯಲ್ಲಿ ಉಲ್ಲೇಖಿಸಿರುವ ಶಿಫಾರಸುಗಳ ಜಾರಿಗೆ ಸಚಿವ ಸಂಪುಟವು ತೀರ್ಮಾನ ತೆಗೆದುಕೊಂಡಿದೆ. ನ್ಯಾಯಮೂರ್ತಿ ನಾಗಮೋಹನ್​ದಾಸ್ ವರದಿಯ ಶಿಫಾರಸನ್ನೂ ಶೀಘ್ರ ಜಾರಿಗೊಳಿಸಲಾಗುವುದು. ಈ ಮೂಲಕ ಎಲ್ಲ ಸಮುದಾಯಗಳಿಗೂ ಮುಕ್ತ ಅವಕಾಶ ಸಿಗಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: 4 ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿದ್ದ ವಿಕಾಸ್ ಬನ್ಸೋಡೆ ಸಿಟಿ ರವಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Published On - 11:46 am, Tue, 15 November 22

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!