AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹೊಸಿಲಲ್ಲಿ ಮತ ಕ್ರೋಡೀಕರಣಕ್ಕೆ ಮತ್ತೊಂದು ಅಸ್ತ್ರ: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಗೆ ಬಿಜೆಪಿ ಸರ್ಕಾರ ಚಿಂತನೆ

ವರದಿಯ ಪ್ರಕಾರ ಎಸ್​ಸಿ ಬಲಗೈ ಸಮುದಾಯಗಳಿಗೆ ಶೇ 5, ಎಸ್​ಸಿ ಎಡಗೈ ಸಮುದಾಯಗಳಿಗೆ ಶೇ 6ರ ಮೀಸಲಾತಿ ನಿಗದಿಪಡಿಸಲಾಗಿದೆ.

ಚುನಾವಣೆ ಹೊಸಿಲಲ್ಲಿ ಮತ ಕ್ರೋಡೀಕರಣಕ್ಕೆ ಮತ್ತೊಂದು ಅಸ್ತ್ರ: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಗೆ ಬಿಜೆಪಿ ಸರ್ಕಾರ ಚಿಂತನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 15, 2022 | 11:46 AM

Share

ಬೆಂಗಳೂರು: ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಳ ಬಳಿಕ ಮತ ಕ್ರೋಡೀಕರಣಕ್ಕಾಗಿ ಕರ್ನಾಟಕದ ಬಿಜೆಪಿ ಸರ್ಕಾರವು ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಈಗಾಗಲೇ ಎಸ್​ಸಿ ಒಳ ಮೀಸಲಾತಿ ವಿಚಾರವಾಗಿ ನ್ಯಾಯಮೂರ್ತಿ ಸದಾಶಿವ ಆಯೋಗವು ವರದಿ ಸಲ್ಲಿಸಿದ್ದು, ಆಯೋಗದ ವರದಿ ಜಾರಿಗೊಳಿಸಬೇಕೆಂಬ ಬೇಡಿಕೆ ಕೇಳಿಬಂದಿದೆ. ವರದಿಯ ಪ್ರಕಾರ ಎಸ್​ಸಿ ಬಲಗೈ ಸಮುದಾಯಗಳಿಗೆ ಶೇ 5, ಎಸ್​ಸಿ ಎಡಗೈ ಸಮುದಾಯಗಳಿಗೆ ಶೇ 6ರ ಮೀಸಲಾತಿ ನಿಗದಿಪಡಿಸಲಾಗಿದೆ. ಬೋವಿ ಮತ್ತು ಬಂಜಾರಾ ಸಮುದಾಯಗಳಿಗೆ ಶೇ 1 ಹಾಗೂ ಇತರರಿಗೆ ಶೇ 3ರ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ವರದಿಯು ಶಿಫಾರಸು ಮಾಡಿದೆ. ಹೆಚ್ಚುವರಿ ಮೀಸಲಾತಿಗೆ ಅನುಗುಣವಾಗಿ ಒಳಮೀಸಲಾತಿ ಪರಿಷ್ಕರಣೆ ಮಾಡಲು ಸರ್ಕಾರವು ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿಬಂದಿವೆ.

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯು ಇನ್ನೂ ಮಂಡನೆಯಾಗಿಲ್ಲ. ಆದರೆ ಈ ವರದಿಯಲ್ಲಿ ಪ್ರಸ್ತಾಪಿಸಿರುವ ಎಸ್​ಸಿ ಒಳ ಮೀಸಲಾತಿಯ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಲ್ಲೂ ಉಲ್ಲೇಖ ಮಾಡಲಾಗಿದೆ. ಒಳ ಮೀಸಲಾತಿ ಅನುಷ್ಠಾನದ ಮೂಲಕ ಎಸ್​ಸಿ ಸಮುದಾಯದ ಮನಗೆಲ್ಲುವ ಬಗ್ಗೆಯೂ ರಾಜ್ಯ ಸರ್ಕಾರವು ಚುನಾವಣಾ ತಂತ್ರ ಹೆಣೆದಿದೆ. ಚುನಾವಣೆ ಸಮೀಪವಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೀಸಲಾತಿ ಬಗ್ಗೆ ಆಗಾಗ ಚರ್ಚೆಯಾಗುವಂತೆ ನೋಡಿಕೊಳ್ಳುತ್ತಿದೆ. ಈ ಮೂಲಕ ಮತಗಳನ್ನು ತನ್ನ ಪರವಾಗಿ ಕ್ರೋಡೀಕರಿಸಿಕೊಳ್ಳಲು ಬಿಜೆಪಿಯು ಯತ್ನಿಸುತ್ತಿದೆ ಎಂದು ವಿಶ್ಲೇಷಿಲಾಗುತ್ತಿದೆ.

ಬಿಜೆಪಿ ಹಿಂದೇಟು ಹಾಕದು: ನಾರಾಯಣಸ್ವಾಮಿ

ಒಳ ಮೀಸಲಾತಿ ಜಾರಿ ವಿಷಯದಲ್ಲಿ ಬಿಜೆಪಿಯು ಎಂದಿಗೂ ಹಿಂದೇಟು ಹಾಕುವುದಿಲ್ಲ ಎಂದು ಇತ್ತೀಚೆಗಷ್ಟೇ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಮೈಸೂರಿನಲ್ಲಿ ಹೇಳಿದ್ದರು. ‘ಬಿಜೆಪಿಯಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ. ಬಹುಶಃ ಕಾಂಗ್ರೆಸ್​ನ ಸಿದ್ದರಾಮಯ್ಯ ಹೊರತುಪಡಿಸಿದರೆ ಉಳಿದವರೆಲ್ಲರೂ ಒಳಮೀಸಲಾತಿ ಪರವಾಗಿಯೇ ಇದ್ದಾರೆ’ ಎಂದು ಅವರು ಅಭಿಪ್ರಾಯಪಟ್ಟಿದ್ದರು.

‘ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯಲ್ಲಿ ಉಲ್ಲೇಖಿಸಿರುವ ಶಿಫಾರಸುಗಳ ಜಾರಿಗೆ ಸಚಿವ ಸಂಪುಟವು ತೀರ್ಮಾನ ತೆಗೆದುಕೊಂಡಿದೆ. ನ್ಯಾಯಮೂರ್ತಿ ನಾಗಮೋಹನ್​ದಾಸ್ ವರದಿಯ ಶಿಫಾರಸನ್ನೂ ಶೀಘ್ರ ಜಾರಿಗೊಳಿಸಲಾಗುವುದು. ಈ ಮೂಲಕ ಎಲ್ಲ ಸಮುದಾಯಗಳಿಗೂ ಮುಕ್ತ ಅವಕಾಶ ಸಿಗಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: 4 ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿದ್ದ ವಿಕಾಸ್ ಬನ್ಸೋಡೆ ಸಿಟಿ ರವಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Published On - 11:46 am, Tue, 15 November 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ