AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸ್ಪರ್ಧಿಸುವುದಿಲ್ಲ, ಕುಟುಂಬದವರಿಗೂ ಟಿಕೆಟ್ ಬೇಡ; ಪಕ್ಷನಿಷ್ಠೆ ಮೆರೆದ ಬಿಜೆಪಿಯ ಎಸ್​ಎ ರವೀಂದ್ರನಾಥ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಇತ್ತೀಚೆಗೆ ಘೋಷಿಸಿದ್ದ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್​ಎ ರವೀಂದ್ರನಾಥ್, ಕುಟುಂಬದವರಿಗೂ ಟಿಕೆಟ್ ನೀಡುವಂತೆ ಆಗ್ರಹಿಸದೆ ಪಕ್ಷ ನಿಷ್ಠೆ ಮೆರೆದಿದ್ದಾರೆ.

ನಾನು ಸ್ಪರ್ಧಿಸುವುದಿಲ್ಲ, ಕುಟುಂಬದವರಿಗೂ ಟಿಕೆಟ್ ಬೇಡ; ಪಕ್ಷನಿಷ್ಠೆ ಮೆರೆದ ಬಿಜೆಪಿಯ ಎಸ್​ಎ ರವೀಂದ್ರನಾಥ್
ಎಸ್​ಎ ರವೀಂದ್ರನಾಥ್Image Credit source: Facebook
ಗಣಪತಿ ಶರ್ಮಾ
|

Updated on: Apr 10, 2023 | 3:57 PM

Share

ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಇತ್ತೀಚೆಗೆ ಘೋಷಿಸಿದ್ದ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್​ಎ ರವೀಂದ್ರನಾಥ್ (SA Ravindranath), ಕುಟುಂಬದವರಿಗೂ ಟಿಕೆಟ್ ನೀಡುವಂತೆ ಆಗ್ರಹಿಸದೆ ಪಕ್ಷ ನಿಷ್ಠೆ ಮೆರೆದಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಬೆಂಬಲಿಗರು ರವೀಂದ್ರನಾಥ್ ಮೇಲೆ ಭಾರೀ ಒತ್ತಡ ಹಾಕಿದ್ದರು. ಆದಾಗ್ಯೂ ಅವರು ಚುನಾವಣಾ ಕಣದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದರು. ಆರೋಗ್ಯ ಸರಿಯಿಲ್ಲದ ಕಾರಣಕ್ಕೆ ಸ್ವ ಇಚ್ಛೆಯಿಂದ ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು.

‘ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಅವರ ಪರ ಕೆಲಸ’

ರವೀಂದ್ರನಾಥ್ ಅವರ ಪುತ್ರ ಎಸ್​​ಆರ್ ಬಸವರಾಜ್ ಶಿಗಮಗೊಂಡನಹಳ್ಳಿ ಗ್ರಾಪಂ ಸದಸ್ಯರಾಗಿದ್ದಾರೆ. ರವೀಂದ್ರನಾಥ್ ಅವರಿಗೆ ಇಬ್ಬರು ಪುತ್ರಿಯರೂ ಇದ್ದು, ಈ ಪೈಕಿ ಒಬ್ಬರು ಜಿಲ್ಲಾ ಪಂಚಾಯಿತ್ ಮಾಜಿ ಸದಸ್ಯೆ ಹಾಗೂ ಇನ್ನೊಬ್ಬರು ಹಾಲಿ ಮಹಾನಗರ ಪಾಲಿಕೆ ಸದಸ್ಯೆ. ಕುಟುಂಬದವರಿಗೆ, ಮಕ್ಕಳಿಗೆ ಟಿಕೆಟ್ ನೀಡುವಂತೆಯೂ ರವೀಂದ್ರನಾಥ್ ವರಿಷ್ಠರಿಗೆ ಮವನಿ ಮಾಡಿಲ್ಲ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಅವರ ಪರ ಪ್ರಚಾರ ಮಾಡುವೆ ಎಂದು ಹೇಳಿದ್ದಾರೆ. ಆ ಮೂಲಕ ಪಕ್ಷ ನಿಷ್ಠೆ ಮೆರೆದಿದ್ದಾರೆ ಎಂದು ಸ್ಥಳೀಯ ಕಾರ್ಯಕರ್ತರು ಹೇಳಿದ್ದಾರೆ.

ಮಾಯಕೊಂಡ ವಿಧಾನಸಭಾ ಕ್ಷೇತ್ರದಿಂದ 1994, 1999 ಹಾಗೂ 2004 ಮೂರು ಸಲ ಶಾಸಕ ಹಾಗೂ ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದಿಂದ 2008 ಹಾಗೂ 2018 ಹೀಗೆ ಐದು ಸಲ ಶಾಸಕರಾಗಿ ಆಯ್ಕೆಯಾಗಿದ್ದ ರವೀಂದ್ರನಾಥ್, ಬಿಜೆಪಿ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಒತ್ತಾಯಿಸಿ ಮನೆಗೆ ಬರುತ್ತಿರುವ ಅಭಿಮಾನಿಗಳಿಗೆ, ಕಾರ್ಯಕರ್ತರಿಗೆ ಖಡಾಖಂಡಿತವಾಗಿ ತಾವು ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬೆನ್ನಲ್ಲೇ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮತ್ತೋರ್ವ ಬಿಜೆಪಿ ಶಾಸಕ

ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಉತ್ತರಕ್ಕೆ ಎಸ್​​ಎ ರವೀಂದ್ರನಾಥ್​ ಅಭ್ಯರ್ಥಿ ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಅವರು, ನನಗೆ ಟಿಕೆಟ್​ ಬೇಡ, ಹೊಸಬರಿಗೆ ಅವಕಾಶ ಕೊಡಿ ಎಂದು ಹೇಳಿದ್ದರು. ಯಡಿಯೂರಪ್ಪ ಅವರು ಸ್ವಯಂ ನಿವೃತ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಅವರಾದ ಬಳಿಕ ಹಿರಿಯ ಅಂದರೆ ನಾನೇ ಇರೋದು. ಹಾಗಾಗಿ ನಾನು ಕೂಡ ನಿವೃತ್ತಿ ಘೋಷಣ ಮಾಡಿಕೊಂಡಿದ್ದೇನೆ. ಪಕ್ಷ ಯಾರಿಗೆ ಟಿಕೆಟ್​ ನೀಡುತ್ತದೆ ಅವರನ್ನು ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದರು.

ಚುನಾವಣೆಯಲ್ಲಿ ಸ್ಪರ್ಧಿಸದಿರಲು ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕೂಡ ಇತ್ತೀಚೆಗೆ ತೀರ್ಮಾನ ಮಾಡಿದ್ದು, ಮುಂದೆ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!