Sagara Election 2023 Winner: ಸಾಗರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣಗೆ ಭರ್ಜರಿ ಗೆಲುವು

|

Updated on: May 13, 2023 | 3:16 PM

Belur Gopalakrishna: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣಗೆ ಭರ್ಜರಿ ಗೆಲುವು ದೊರೆತಿದೆ.

Sagara Election 2023 Winner: ಸಾಗರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣಗೆ ಭರ್ಜರಿ ಗೆಲುವು
ಬೇಳೂರು ಗೋಪಾಲಕೃಷ್ಣ
Follow us on

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣಗೆ ಭರ್ಜರಿ ಗೆಲುವು ದೊರೆತಿದೆ. ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೀನಾಯ ಸೋಲು ಅನುಭವಿಸಿದ್ದಾರೆ. ಕ್ಷೇತ್ರ ಮರುವಿಂಗಡಣೆಗೂ ಮೊದಲು ಹೊಸನಗರ ಬಳಿಕ ಸೊರಬದಿಂದ ಹಾಲಪ್ಪ ಗೆಲುವು ಸಾಧಿಸಿದ್ದರು. ಬೇಳೂರು ಗೋಪಾಲಕೃಷ್ಣ 2004 ಹಾಗೂ 2008ರಲ್ಲಿ ಸಾಗರದಿಂದಲೇ ಶಾಸಕರಾಗಿ ಆಯ್ಕೆಯಾಗಿದ್ದರು.

ಬಗರ್​ಹುಕುಂ ಹೋರಾಟದ ಕಿಚ್ಚನ್ನು ಹೊಂದಿರುವ ಸಾಗರ ವಿಧಾನಸಭಾ ಕ್ಷೇತ್ರವು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಮೇಲಾಟಕ್ಕೆ ದಶಕಗಳ ಇತಿಹಾಸ ಹೊಂದಿದೆ.

ಸಾಗರದ ಬೇಳೂರಿನಲ್ಲಿ ಜನಿಸಿರುವ ಗೋಪಾಲಕೃಷ್ಣ ಅವರ ತಂದೆ ಹೆಸರು ಕೆರಿಯಪ್ಪ. 1981-1982ರಲ್ಲಿ ಪಿಯುಸಿ ಮಾಡಿದ ಬೇಳೂರು ಅಷ್ಟಕ್ಕೆ ವಿದ್ಯಾಭ್ಯಾಸ ಮುಗಿಸಿ ನಂತರ ರಾಜಕೀಯ ಪ್ರವೇಶಿಸಿದರು.

ಈ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಈ ಬಾರಿ ಕಣದಿಂದ ಹೊರಗುಳಿದಿದ್ದಾರೆ.

 

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ