AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sakaleshpur Election Results 2023: ಸಕಲೇಶಪುರ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಎಚ್.ಕೆ. ಕುಮಾರಸ್ವಾಮಿಗೆ ಸೋಲುಣಿಸಿದ ಬಿಜೆಪಿ

Sakaleshpur Assembly Election Result 2023 Live Counting Updates: ಹಾಸನ ಜಿಲ್ಲೆಯ ಮಲೆನಾಡಿನ ಭಾಗದಲ್ಲಿರುವ ಸಕಲೇಶಪುರದ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ನಿಂದ ಎಚ್.ಕೆ. ಕುಮಾರಸ್ವಾಮಿ, ಕಾಂಗ್ರೆಸ್​ನಿಂದ ಮುರಳಿ ಮೋಹನ್ ಮತ್ತು ಬಿಜೆಪಿಯಿಂದ ಎಸ್ ಮಂಜುನಾಥ್ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರದ ಮತ ಎಣಿಕೆಯ ವಿವರ ಇಲ್ಲಿದೆ.

Sakaleshpur Election Results 2023: ಸಕಲೇಶಪುರ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಎಚ್.ಕೆ. ಕುಮಾರಸ್ವಾಮಿಗೆ ಸೋಲುಣಿಸಿದ ಬಿಜೆಪಿ
ಸಕಲೇಶಪುರ ವಿಧಾನಸಭಾ ಕ್ಷೇತ್ರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 13, 2023 | 3:41 PM

Share

Sakaleshpur Assembly Election Result 2023: 1.93 ಲಕ್ಷ ಮತದಾರರು ಇರುವ ಸಕಲೇಶಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ಕರ್ನಾಟಕ ವಿಧಾನಸಭೆಗೆ 2023 ಮೇ 10ಕ್ಕೆ ಚುನಾವಣೆ ನಡೆದಿತ್ತು. ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಎಸ್​ಸಿ ಮೀಸಲು ಇರುವ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎಸ್ ಮಂಜುನಾಥ್ ರೋಚಕ ಜಯ ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎಚ್.ಕೆ. ಕುಮಾರಸ್ವಾಮಿ ಅವರ ಸತತ ಗೆಲುವಿನ ಓಟಕ್ಕೆ ಸಿಮೆಂಟ್ ಮಂಜು ಬ್ರೇಕ್ ಹಾಕಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 3ನೇ ಸ್ಥಾನ ಗಳಿಸಿದರೂ ಶೇ. 25ಕ್ಕೂ ಹೆಚ್ಚು ಮತ ಗಳಿಸಿ ತ್ರಿಕೋನ ಫೈಟ್ ಪ್ರದರ್ಶನವಾಗುವಂತೆ ಮಾಡಿದ್ದಾರೆ.

ಸಕಲೇಶಪುರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಕಣದಲ್ಲಿದ್ದ ಪ್ರಮುಖರು:

  • ಜೆಡಿಎಸ್: ಎಚ್.ಕೆ. ಕುಮಾರಸ್ವಾಮಿ
  • ಬಿಜೆಪಿ: ಎಸ್ ಮಂಜುನಾಥ (ಗೆಲುವು)
  • ಕಾಂಗ್ರೆಸ್: ಮುರಳಿ ಮೋಹನ್

2018ರಲ್ಲಿ ನಡೆದ ಚುನಾವಣೆಯಲ್ಲಿ ಎಚ್.ಕೆ. ಕುಮಾರಸ್ವಾಮಿ ಅವರಿಗೆ ಸಿಕ್ಕ ಗೆಲುವಿನ ಅಂತರ 5 ಸಾವಿರಕ್ಕಿಂತಲೂ ಕಡಿಮೆ. ನಾರ್ವೆ ಸೋಮಶೇಖರ್ ಬಿಜೆಪಿ ಟಿಕೆಟ್ ಪಡೆದು ಕುಮಾರಸ್ವಾಮಿಗೆ ತೀವ್ರ ಪೈಪೋಟಿ ನೀಡಿದ್ದರು. ಈ ಬಾರಿ ಮಂಜುನಾಥ್ ಎಂಬುವವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಎಚ್.ಕೆ. ಕುಮಾರಸ್ವಾಮಿ ಅವರ ಗೆಲುವಿನ ಓಟ ಹೀಗೇ ಮುಂದುವರಿಯುತ್ತದಾ ಎಂಬುದನ್ನು ನೋಡಲು ಫಲಿತಾಂಶ ಪ್ರಕಟವಾಗುವವರೆಗೂ ಕಾಯಬೇಕು.

ಇನ್ನು, ಹಾಸನದಲ್ಲಿ ಹೆಚ್​ಡಿ ದೇವೇಗೌಡ, ಶ್ರೀಕಂಠಯ್ಯ, ಪುಟ್ಟಸ್ವಾಮಿಗೌಡರಂತಹ ದಿಗ್ಗಜರ ಸಮ್ಮುಖದಲ್ಲಿ ಬಿಜೆಪಿಯಲ್ಲಿ ಪ್ರಬಲ ಮುಖಂಡ ಆಗಿದ್ದವರು ಬಿಬಿ ಶಿವಪ್ಪ. ಹಾಸನದಲ್ಲಿ ಕೇಸರಿ ಬಾವುಟ ಹಾರಿಸಿದ ಮೊದಲಿಗರಲ್ಲಿ ಶಿವಪ್ಪ ಸೇರುತ್ತಾರೆ. 1994 ಮತ್ತು 1999ರ ಚುನಾವಣೆಯಲ್ಲಿ ಬಿಬಿ ಶಿವಪ್ಪ ಬಿಜೆಪಿ ಟಿಕೆಟ್​ನಲ್ಲಿ ಸಕಲೇಶಪುರದಲ್ಲಿ ಗೆಲುವು ಕಂಡಿದ್ದರು. ಅದಾದ ಬಳಿಕ ಬಿಜೆಪಿಗೆ ಇಲ್ಲಿ ಗೆಲುವು ಸಿಕ್ಕಿರಲಿಲ್ಲ. ಈಗ ಕಮಲ ಇಲ್ಲಿ ಮತ್ತೆ ಅರಳಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 4:28 pm, Thu, 4 May 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ