AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲ್ಯಾಕ್ ಮೇಲ್ ಮಾಡಿ ಬಿಜೆಪಿ ಟಿಕೆಟ್ ಪಡೆದ ಆರೋಪ: ಹುಲಿಗೆಮ್ಮ ದೇವಸ್ಥಾನಕ್ಕೆ ಬಂದು ಆಣೆ ಮಾಡುವಂತೆ ಸಂಸದ ಸಂಗಣ್ಣ ಕರಡಿ ಸವಾಲ್‌

ಜೆಡಿಎಸ್ ಅಭ್ಯರ್ಥಿ ಸಿ.ವಿ.ಚಂದ್ರಶೇಖರ ಲೂಟಿಕೋರ. ಜನರ ಹಣ ಕೊಳ್ಳೆ ಹೊಡೆದು ಏಲೆಕ್ಷನ್ ಮಾಡ್ತಿದ್ದಾನೆ. ಜನರ ಹಣ ಕೊಳ್ಳೆ ಹೊಡೆದು ಸಾವಿರ ಕೋಟಿ ದುಡ್ಡು ಮಾಡಿದ್ದಾನೆ ಎಂದು ಸಂಗಣ್ಣ ಕರಡಿಯವರು ವಾಗ್ದಾಳಿ ನಡೆಸಿದ್ದಾರೆ.

ಬ್ಲ್ಯಾಕ್ ಮೇಲ್ ಮಾಡಿ ಬಿಜೆಪಿ ಟಿಕೆಟ್ ಪಡೆದ ಆರೋಪ: ಹುಲಿಗೆಮ್ಮ ದೇವಸ್ಥಾನಕ್ಕೆ ಬಂದು ಆಣೆ ಮಾಡುವಂತೆ ಸಂಸದ ಸಂಗಣ್ಣ ಕರಡಿ ಸವಾಲ್‌
ಸಂಸದ ಸಂಗಣ್ಣ ಕರಡಿ ಪ್ರಚಾರ
ಆಯೇಷಾ ಬಾನು
|

Updated on:Apr 25, 2023 | 11:22 AM

Share

ಕೊಪ್ಪಳ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದರ ನಡುವೆ ಕೊಪ್ಪಳ ವಿಧಾನಸಭೆ ಕ್ಷೇತ್ರದಲ್ಲಿ ಟಾಕ್ ವಾರ್ ಶುರುವಾಗಿದೆ. ಒಪ್ಪಂದ ರಾಜಕಾರಣಕ್ಕೆ ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಕೊಪ್ಪಳದಲ್ಲಿ ಈ ಬಾರಿ ಬ್ಲಾಕ್ ಮೇಲರ್- ವಂಚಕ,‌ ಲೂಟಿಕೋರ- ಭ್ರಷ್ಟ ಎಂಬ ಪದಗಳು ಸದ್ದು ಮಾಡುತ್ತಿವೆ. ಜೆಡಿಎಸ್ ಅಭ್ಯರ್ಥಿ ಲೂಟಿಕೋರ, ಜನರ ಹಣ ಕೊಳ್ಳೆ ಹೊಡೆದು ಏಲೆಕ್ಷನ್ ಮಾಡ್ತಿದ್ದಾನೆ ಎಂದು ಸಂಸದ ಸಂಗಣ್ಣ ಕರಡಿಯವರು ಜೆಡಿಎಸ್ ಅಭ್ಯರ್ಥಿ ಸಿ‌.ವಿ.ಚಂದ್ರಶೇಖರ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಕಳೆದ 2018ರ‌ ಚುನಾವಣೆಯಂತೆಯೇ ಈ ಬಾರಿಯೂ ಕೊನೆ ಕ್ಷಣದಲ್ಲಿ ಬಿಜೆಪಿ ಬಿ ಫಾರಂ ವಂಚಿತ ಸಿ.ವಿ.ಚಂದ್ರಶೇಖರ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಸಂಸದ ಸಂಗಣ್ಣ ಕರಡಿ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡಿ, ಸೊಸೆಗೆ ಟಿಕೇಟ್ ತಂದಿದ್ದಾರೆ. ಸ್ವಾರ್ಥ ರಾಜಕಾರಣಕ್ಕೆ ಹೆಸರಾಗಿರುವ ಸಂಸದ ಸಂಗಣ್ಣ ಕರಡಿ ವಿರೋಧ ಪಕ್ಷದ ಹಿಟ್ನಾಳ‌ ಕುಟುಂಬದ ಜೊತೆಗೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿ.ವಿ.ಚಂದ್ರಶೇಖರ್ ನಾಮಪತ್ರ ಸಲ್ಲಿಕೆ ಮಾಡಿದ್ದ ದಿನವೇ ವಾಗ್ದಾಳಿ ನಡೆಸಿದ್ದರು. ಚಂದ್ರಶೇಖರ್ ಹೇಳಿಕೆಗೆ ಕೆಂಡವಾಗಿದ್ದ ಸಂಗಣ್ಣ ಕರಡಿ ಅವರು ಪ್ರಚಾರ ಸಭೆಯಲ್ಲಿ ಸಿವಿಸಿ ವಿರುದ್ಧ ಕಟುವಾಗಿ ಟೀಕೆ ಮಾಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸಿ.ವಿ.ಚಂದ್ರಶೇಖರ ಲೂಟಿಕೋರ. ಜನರ ಹಣ ಕೊಳ್ಳೆ ಹೊಡೆದು ಏಲೆಕ್ಷನ್ ಮಾಡ್ತಿದ್ದಾನೆ. ಜನರ ಹಣ ಕೊಳ್ಳೆ ಹೊಡೆದು ಸಾವಿರ ಕೋಟಿ ದುಡ್ಡು ಮಾಡಿದ್ದಾನೆ. ಸರ್ಕಾರಿ ನೌಕರನಾಗಿ ಇಷ್ಟು ದುಡ್ಡು ಮಾಡೋಕೆ ಹೇಗೆ ಸಾಧ್ಯ ಎಂದು ತಿರಿಗೇಟು ನೀಡಿದ್ದಾರೆ.‌

ನಂಗೆ ಬ್ಲ್ಯಾಕ್ ಮೇಲ್ ಮಾಡಿ ಬಿಜೆಪಿ ಟಿಕೆಟ್ ತಂದಿದ್ದೇನೆ ಎನ್ನುತ್ತಿರುವು ಸಿವಿಸಿ, ಹುಲಿಗೆಮ್ಮ ದೇವಸ್ಥಾನಕ್ಕೆ ಬಂದು ಆಣೆ ಮಾಡುವ ಮೂಲಕ ಸಾಬೀತು ಮಾಡಲಿ ಎಂದು ಸಂಗಣ್ಣ ಕರಡಿ ಸವಾಲ್‌ ಹಾಕಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:22 am, Tue, 25 April 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್