AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲ್ಯಾಕ್ ಮೇಲ್ ಮಾಡಿ ಬಿಜೆಪಿ ಟಿಕೆಟ್ ಪಡೆದ ಆರೋಪ: ಹುಲಿಗೆಮ್ಮ ದೇವಸ್ಥಾನಕ್ಕೆ ಬಂದು ಆಣೆ ಮಾಡುವಂತೆ ಸಂಸದ ಸಂಗಣ್ಣ ಕರಡಿ ಸವಾಲ್‌

ಜೆಡಿಎಸ್ ಅಭ್ಯರ್ಥಿ ಸಿ.ವಿ.ಚಂದ್ರಶೇಖರ ಲೂಟಿಕೋರ. ಜನರ ಹಣ ಕೊಳ್ಳೆ ಹೊಡೆದು ಏಲೆಕ್ಷನ್ ಮಾಡ್ತಿದ್ದಾನೆ. ಜನರ ಹಣ ಕೊಳ್ಳೆ ಹೊಡೆದು ಸಾವಿರ ಕೋಟಿ ದುಡ್ಡು ಮಾಡಿದ್ದಾನೆ ಎಂದು ಸಂಗಣ್ಣ ಕರಡಿಯವರು ವಾಗ್ದಾಳಿ ನಡೆಸಿದ್ದಾರೆ.

ಬ್ಲ್ಯಾಕ್ ಮೇಲ್ ಮಾಡಿ ಬಿಜೆಪಿ ಟಿಕೆಟ್ ಪಡೆದ ಆರೋಪ: ಹುಲಿಗೆಮ್ಮ ದೇವಸ್ಥಾನಕ್ಕೆ ಬಂದು ಆಣೆ ಮಾಡುವಂತೆ ಸಂಸದ ಸಂಗಣ್ಣ ಕರಡಿ ಸವಾಲ್‌
ಸಂಸದ ಸಂಗಣ್ಣ ಕರಡಿ ಪ್ರಚಾರ
ಆಯೇಷಾ ಬಾನು
ಆಯೇಷಾ ಬಾನು|

Updated on:Apr 25, 2023 | 11:22 AM

Share

ಮುಖ್ಯಾಂಶಗಳು

  • ಜೆಡಿಎಸ್ ಅಭ್ಯರ್ಥಿ ಸಿ‌.ವಿ.ಚಂದ್ರಶೇಖರ್ ವಿರುದ್ದ ಸಂಸದ ಸಂಗಣ್ಣ ಕರಡಿ ವಾಗ್ದಾಳಿ
  • ಹುಲಿಗೆಮ್ಮ ದೇವಸ್ಥಾನಕ್ಕೆ ಬಂದು ಆಣೆ ಮಾಡುವಂತೆ ಸವಾಲ್‌
  • ಸಿ‌.ವಿ.ಚಂದ್ರಶೇಖರ್ ಅವರನ್ನು ಲೂಟಿಕೋರ ಎಂದ ಸಂಗಣ್ಣ ಕರಡಿ

ಕೊಪ್ಪಳ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದರ ನಡುವೆ ಕೊಪ್ಪಳ ವಿಧಾನಸಭೆ ಕ್ಷೇತ್ರದಲ್ಲಿ ಟಾಕ್ ವಾರ್ ಶುರುವಾಗಿದೆ. ಒಪ್ಪಂದ ರಾಜಕಾರಣಕ್ಕೆ ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಕೊಪ್ಪಳದಲ್ಲಿ ಈ ಬಾರಿ ಬ್ಲಾಕ್ ಮೇಲರ್- ವಂಚಕ,‌ ಲೂಟಿಕೋರ- ಭ್ರಷ್ಟ ಎಂಬ ಪದಗಳು ಸದ್ದು ಮಾಡುತ್ತಿವೆ. ಜೆಡಿಎಸ್ ಅಭ್ಯರ್ಥಿ ಲೂಟಿಕೋರ, ಜನರ ಹಣ ಕೊಳ್ಳೆ ಹೊಡೆದು ಏಲೆಕ್ಷನ್ ಮಾಡ್ತಿದ್ದಾನೆ ಎಂದು ಸಂಸದ ಸಂಗಣ್ಣ ಕರಡಿಯವರು ಜೆಡಿಎಸ್ ಅಭ್ಯರ್ಥಿ ಸಿ‌.ವಿ.ಚಂದ್ರಶೇಖರ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಕಳೆದ 2018ರ‌ ಚುನಾವಣೆಯಂತೆಯೇ ಈ ಬಾರಿಯೂ ಕೊನೆ ಕ್ಷಣದಲ್ಲಿ ಬಿಜೆಪಿ ಬಿ ಫಾರಂ ವಂಚಿತ ಸಿ.ವಿ.ಚಂದ್ರಶೇಖರ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಸಂಸದ ಸಂಗಣ್ಣ ಕರಡಿ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡಿ, ಸೊಸೆಗೆ ಟಿಕೇಟ್ ತಂದಿದ್ದಾರೆ. ಸ್ವಾರ್ಥ ರಾಜಕಾರಣಕ್ಕೆ ಹೆಸರಾಗಿರುವ ಸಂಸದ ಸಂಗಣ್ಣ ಕರಡಿ ವಿರೋಧ ಪಕ್ಷದ ಹಿಟ್ನಾಳ‌ ಕುಟುಂಬದ ಜೊತೆಗೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿ.ವಿ.ಚಂದ್ರಶೇಖರ್ ನಾಮಪತ್ರ ಸಲ್ಲಿಕೆ ಮಾಡಿದ್ದ ದಿನವೇ ವಾಗ್ದಾಳಿ ನಡೆಸಿದ್ದರು. ಚಂದ್ರಶೇಖರ್ ಹೇಳಿಕೆಗೆ ಕೆಂಡವಾಗಿದ್ದ ಸಂಗಣ್ಣ ಕರಡಿ ಅವರು ಪ್ರಚಾರ ಸಭೆಯಲ್ಲಿ ಸಿವಿಸಿ ವಿರುದ್ಧ ಕಟುವಾಗಿ ಟೀಕೆ ಮಾಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸಿ.ವಿ.ಚಂದ್ರಶೇಖರ ಲೂಟಿಕೋರ. ಜನರ ಹಣ ಕೊಳ್ಳೆ ಹೊಡೆದು ಏಲೆಕ್ಷನ್ ಮಾಡ್ತಿದ್ದಾನೆ. ಜನರ ಹಣ ಕೊಳ್ಳೆ ಹೊಡೆದು ಸಾವಿರ ಕೋಟಿ ದುಡ್ಡು ಮಾಡಿದ್ದಾನೆ. ಸರ್ಕಾರಿ ನೌಕರನಾಗಿ ಇಷ್ಟು ದುಡ್ಡು ಮಾಡೋಕೆ ಹೇಗೆ ಸಾಧ್ಯ ಎಂದು ತಿರಿಗೇಟು ನೀಡಿದ್ದಾರೆ.‌

ನಂಗೆ ಬ್ಲ್ಯಾಕ್ ಮೇಲ್ ಮಾಡಿ ಬಿಜೆಪಿ ಟಿಕೆಟ್ ತಂದಿದ್ದೇನೆ ಎನ್ನುತ್ತಿರುವು ಸಿವಿಸಿ, ಹುಲಿಗೆಮ್ಮ ದೇವಸ್ಥಾನಕ್ಕೆ ಬಂದು ಆಣೆ ಮಾಡುವ ಮೂಲಕ ಸಾಬೀತು ಮಾಡಲಿ ಎಂದು ಸಂಗಣ್ಣ ಕರಡಿ ಸವಾಲ್‌ ಹಾಕಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:22 am, Tue, 25 April 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ