AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಬಿಜೆಪಿ ಟಿಕೆಟ್​ ಪಟ್ಟು..!: ಬೆಂಬಲಿಗರ ಸಭೆ ಕರೆದ ಸಂಗಣ್ಣ ಕರಡಿ

ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನಮಗೇ ಕೊಡಬೇಕು ಎಂದು ಹಾಲಿ ಸಂಸದ ಸಂಗಣ್ಣ ಕರಡಿ ಪಟ್ಟು ಹಿಡಿದಿದ್ದು, ವರಿಷ್ಠರು ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಸಂಗಣ್ಣ ಕರಡಿ ಇಂದು ಬೆಂಬಲಿಗರ ಸಭೆ ಕರೆದಿದ್ದಾರೆ.

ಕೊಪ್ಪಳ ಬಿಜೆಪಿ ಟಿಕೆಟ್​ ಪಟ್ಟು..!: ಬೆಂಬಲಿಗರ ಸಭೆ ಕರೆದ ಸಂಗಣ್ಣ ಕರಡಿ
ಸಂಸದ ಸಂಗಣ್ಣ ಕರಡಿ
ವಿವೇಕ ಬಿರಾದಾರ
|

Updated on: Apr 16, 2023 | 10:35 AM

Share

ಕೊಪ್ಪಳ: ರಾಜ್ಯ ಬಿಜೆಪಿ (BJP) ಘಟಕದಲ್ಲಿ ಟಿಕೆಟ್​ ಸಿಗದಿದ್ದಕ್ಕೆ ಅಸಮಾಧಾನಗೊಂಡ ಆಕಾಂಕ್ಷಿಗಳು ಮತ್ತು ಹಾಲಿ ಶಾಸಕರು ಪಕ್ಷಕ್ಕೆ ರಾಜಿನಾಮೆ ನೀಡಿ, ಪಕ್ಷೇತರವಾಗಿ ಅಥವಾ ಬೇರೆ ಪಕ್ಷಗಳಿಗೆ ಸೇರಿಕೊಂಡು ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಟಿಕೆಟ್​ ಸಿಗದಿದ್ದಕ್ಕೆ ಅಸಮಾಧನಗೊಂಡ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರ ಹಾಲಿ ಶಾಸಕ ಜಗದೀಶ್​ ಶೆಟ್ಟರ್ (Jagadish Shettar)​​​ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಇವರ ಬೆನ್ನಲ್ಲೇ ಇಂದು (ಏ.16) ಬಿಜೆಪಿಯ ಮತ್ತೊಬ್ಬ ಘಟಾನುಘಟಿ ಪಕ್ಷಕ್ಕೆ ರಾಜಿನಾಮೆ ನೀಡುವ ಸಾಧ್ಯತೆ ಇದೆ. ಹೌದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನಮಗೇ ಕೊಡಬೇಕು ಎಂದು ಹಾಲಿ ಸಂಸದ ಸಂಗಣ್ಣ ಕರಡಿ (Karadi Sanganna) ಹಾಗೂ ಮುಖಂಡ ಸಿ.ವಿ.‌ಚಂದ್ರಶೇಖರ್ (CV Chandrashekar) ಇಬ್ಬರೂ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಟಿಕೆಟ್ ಅಂತಿಮಗೊಳಿಸುವುದು ವರಿಷ್ಠರಿಗೆ ಕಗ್ಗಂಟಾಗಿದೆ.

ಇವರಿಬ್ಬರಲ್ಲಿ ಯಾರು ಅಭ್ಯರ್ಥಿಯಾದರೂ ಇನ್ನೊಬ್ಬರು ಬಂಡಾಯ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯುವ ಸಾಧ್ಯತೆ ಇದೆ. ಈ ಹಿನ್ನೆಲೆ ವರಿಷ್ಠರು ಅಳಿದು-ತೂಗಿ ಟಿಕೆಟ್​ ನೀಡಲು ಮುಂದಾಗಿದ್ದಾರೆ. ಸಂಗಣ್ಣ ಕರಡಿ ಅವರು ಕ್ಷೇತ್ರದ ಟಿಕೆಟ್​ ಕೇಳಿದ್ದು, ವರಿಷ್ಠರು ಸಂಸದರಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದಾರೆ. ಕೊನೆಗೆ ತಮ್ಮ ಪುತ್ರ ಗವಿಸಿದ್ದಪ್ಪ ಕರಡಿಗೆ ಟಿಕೆಟ್ ನೀಡಿ ಎಂದಿದ್ದು, ಪುತ್ರನಿಗು ಕೂಡಾ ಟಿಕೆಟ್ ನೀಡಲು ವರಿಷ್ಠರು ನಿರಾಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕಣ್ಣೀರಿಡುತ್ತಲೇ ಬೆಂಬಲಿಗರನ್ನು ಸಮಾಧಾನಿಸುತ್ತಿರುವ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಸ್​ಎ ರಾಮದಾಸ್

ಈ ಹಿನ್ನಲೆಯಲ್ಲಿ ಅಸಮಧಾನಗೊಂಡಿರುವ ಸಂಗಣ್ಣ ಕರಡಿ, ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ನಂತರ ಲೋಕಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಹಿನ್ನೆಲೆ ಇಂದು (ಏ.16) ಬೆಳಗ್ಗೆ 10.30ಕ್ಕೆ ಬೆಂಬಲಿಗರ ಸಭೆ ಕರೆದಿದ್ದು, ಸಭೆ ಬಳಿಕ ದೆಹಲಿಗೆ ತೆರಳಿ ಲೋಕಸಭಾ ಸ್ಪೀಕರ್​​ಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.

ಇನ್ನು ಕರಡಿ ಸಂಗಣ್ಣ ಜೆಡಿಎಸ್ ಸೇರ್ಪಡೆ ಬಹುತೇಕ ಪಕ್ಕಾ ಆಗಿದ್ದು ಇಂದಿನ ಸಭೆ ಬಳಿಕ ಅಂತಿಮ ನಿರ್ಧಾರ ಹೊರಬೀಳಲಿದೆ. ಒಂದು ವೇಳೆ ಜೆಡಿಎಸ್​ ಸೇರ್ಪಡೆಯಾದರೇ ಏ.19ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆ ಕರಡಿ ಸಂಗಣ್ಣ ನಡೆ ತೀವ್ರ ಕುತೂಹಲ ಕೆರಳಿಸಿದೆ. ಇನ್ನು ರಾಘವೇಂದ್ರ ಹಿಟ್ನಾಳ ವಿರುದ್ಧ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ 2013 ಮತ್ತು 2018 ರಲ್ಲಿ ಸತತವಾಗಿ ಪಕ್ಷ ಸೋಲು ಅನುಭವಿಸಿರುವುದರಿಂದ ಈ ಬಾರಿ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ಅಳೆದು-ತೂಗಿ ನಿರ್ಣಯ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!