ಹಣ ಪಡೆದು ಕಾಂಗ್ರೆಸ್ ಬಿ-ಫಾರಂ ನೀಡಿದೆ ಎಂಬ ಶೋಭಾ ಕರಂದ್ಲಾಜೆ ದೂರಿಗೆ ಸತೀಶ್ ಜಾರಕಿಹೊಳಿ ಹೇಳಿದಿಷ್ಟು

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕಮಾರ್​ ಹಣ ಪಡೆದು ಕಾಂಗ್ರೆಸ್​ ಅಭ್ಯರ್ಥಿಗಳಿಗೆ ಬಿ-ಫಾರಂ ನೀಡಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು ನೀಡಿದ್ದರು. ಈ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

Follow us
|

Updated on:Apr 22, 2023 | 9:26 PM

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕಮಾರ್​ ಹಣ ಪಡೆದು ಕಾಂಗ್ರೆಸ್​ ಅಭ್ಯರ್ಥಿಗಳಿಗೆ ಬಿ-ಫಾರಂ ನೀಡಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು ನೀಡಿದ್ದರು. ಈ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಪ್ರತಿಕ್ರಿಯೆ ನೀಡಿದ್ದು, ಅದು ನಮ್ಮ ಪಕ್ಷದ ಆಂತರಿಕ ವಿಚಾರ ಅವರು ಚೆಕ್ ಮೂಲಕ ಕೊಟ್ಟಿದ್ದಾರೆ. ಚುನಾವಣೆ ಆಯೋಗದಲ್ಲಿ ಅವಕಾಶ ಇದೆ. ಕಾನೂನಿನಲ್ಲಿ ಅವಕಾಶವಿದೆ. ತಪ್ಪೇನಲ್ಲ, ಪೇಪರ್ ಜಾಹೀರಾತಿಗೆ ತೆಗೆದುಕೊಳ್ಳುತ್ತಿದ್ದೇವೆ. ಬಾಕಿ ಉಳಿದರೆ ಬಿಲ್ಡಿಂಗ್ ಫಂಡ್ ಅಂತ ಕಟ್ಟುತ್ತಿವೆ. ಕೊಟ್ಟವರು, ತೆಗೆದುಕೊಂಡವರು ಲೆಕ್ಕ ತೋರಿಸಲೇಬೇಕು ಎಂದು ಹೇಳಿದರು. ಟಿಕೆಟ್ ವಂಚಿತರ ಬಂಡಾಯ ಶಮನ ವಿಚಾರವಾಗಿ ಪ್ರತಿಕ್ರಿಯಿಸಿ, ಕಿತ್ತೂರುನಲ್ಲಿ ಶಿಲ್ಲೇದಾರ್ ಆಗಿದೆ, ಬೇರೆ ಬೇರೆ ಎಲ್ಲ ಕಡೆ ಸಂಧಾನ ನಡಿಯುತ್ತಿದೆ ಎಂದರು.

ಚುಣಾವಣೆ ಗೆಲ್ಲಲು ಬಿಜೆಪಿ ಹೊಸ ತಂತ್ರಗಾರಿಕೆ

ಜಿಲ್ಲೆಯಲ್ಲಿ ಈಗಾಗಲೇ ಚುನಾವಣೆ ಪ್ರಚಾರ ಒಂದು ಬಾರಿ ಆಗಿದೆ. ಡಿಕೆಶಿ, ರಾಹುಲ್ ಗಾಂಧಿ ಈಗಾಗಲೇ ಬಂದು ಹೋಗಿದ್ದಾರೆ. ಸಿದ್ಧರಾಮಯ್ಯ ಕೊನೆಯ ಬಾರಿಗೆ ಬರುತ್ತಿದ್ದಾರೆ. ಇದಾದ್ಮೇಲೆ ಅಭ್ಯರ್ಥಿಗಳು, ಸ್ಥಳೀಯ ಮುಖಂಡರು, ನಾವೇ ಚುನಾವಣೆ ಪ್ರಚಾರ ಮಾಡಬೇಕು.

ಇದನ್ನೂ ಓದಿ: ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ: ಸಿದ್ದರಾಮಯ್ಯ ಸ್ಪಷ್ಟನೆ

ಚುಣಾವಣೆ ಗೆಲ್ಲಲು ಬಿಜೆಪಿ ಹೊಸ ತಂತ್ರಗಾರಿಕೆ ನಡೆಸಿದೆಯಾ ಎಂಬ ವಿಚಾರಕ್ಕೆ ಉತ್ತಿರಿಸಿದ ಅವರು, ಏನಾಗಲ್ಲ ಅದು ಹಳೆಯದಾಗಿದೆ ಹೊಸದೇನಿಲ್ಲ ಅವರದು. ಯಾವುದು ವರ್ಕೌಟ್ ಆಗಲ್ಲ. ಪ್ರಾಧಾನಿ ಮೋದಿ, ಅಮಿತ್ ಶಾ, ಸಿಎಂ ಬಂದು ಸುಳ್ಳ ಹೇಳ್ತಾರೆ ಜನ ಎಷ್ಟು ಸಾರಿ ಕೇಳೋದು. ಹೀಗಾಗಿ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಯಮಕನಮರಡಿ ಕ್ಷೇತ್ರ ಈ ಬಾರಿಗೆ ಟಾಪ್ ಟೆನ್​ನಲ್ಲಿ ಬರಬೇಕೆಂದು ನಮ್ಮೆಲ್ಲ ಕಾರ್ಯಕರ್ತರ ಅಭಿಲಾಷೆ ಎಂದು ತಿಳಿಸಿದರು.

ಗೆಲ್ಲಿಸೋದು, ರಿಜೆಕ್ಟ್ ಮಾಡೋದು ಜನ

ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಗೊಂದಲ ವಿಚಾರವಾಗಿ ಮಾತನಾಡಿ, ಚುನಾವಣೆಯಲ್ಲಿ ಜನ ವೋಟ್ ಹಾಕುತ್ತಾರೆ. ಯಾರನ್ನು ರಿಜೆಕ್ಟ್ ಮಾಡುವ ಅವಶ್ಯಕತೆಯಿಲ್ಲ. ಯಾರ ಯಾರ ಸ್ಪರ್ಧೆ ಮಾಡುತ್ತಾರೆ ಮಾಡಿದ್ರೆ ಒಳ್ಳೆಯದೇ. ಅಂತಿಮವಾಗಿ ಸೋಲಿಸೋದು, ಗೆಲ್ಲಿಸೋದು ರಿಜೆಕ್ಟ್ ಮಾಡೋದು ಜನ. ಜನರ ಕೈಯಲ್ಲಿ ಇದೆ ನೋಡೋಣ ಏನ್ ಆಗುತ್ತೆ.

ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ದೂರು

ಇಡೀ ದೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಎಲ್ಲೂ ತಿರಸ್ಕಾರ ಆಗಲ್ಲ. ಅದು A ಫಾರ್ಮ್ ಆಗಲಿ B ಫಾರ್ಮ್ ಆಗಲಿ C ಫಾರ್ಮ್ D ಫಾರ್ಮ್‌ ತುಂಬಿದ್ರೂ ಅವರು ಮಾಡಲ್ಲ. ಅದರ ಕಡೆ ನಾವು ಟೈಮ್ ವ್ಯರ್ಥ ಮಾಡದೇ ಮತದಾರರ ಕಡೆ ಹೋಗೋದು ಒಳ್ಳೆಯದು ಎಂದರು.

ಏ.24, 25ರಂದು ಬೆಳಗಾವಿ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಮತಯಾಚನೆ

ಏ.24, 25ರಂದು ಬೆಳಗಾವಿ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಮತಯಾಚನೆ ಮಾಡಲಿದ್ದಾರೆ. ಒಂದು ದಿನ 4 ಕ್ಷೇತ್ರಗಳು, ಮತ್ತೊಂದು ದಿನ 4 ಕ್ಷೇತ್ರಗಳಲ್ಲಿ ಪ್ರಚಾರ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:26 pm, Sat, 22 April 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ