AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಧ್ಯೇಯದಡಿ ಸಮುದಾಯಗಳ ಮೀಸಲಾತಿ ಹೆಚ್ಚಳ: ಪ್ರಲ್ಹಾದ್ ಜೋಶಿ

ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರಕ್ಕೆ ಸಮಾಜದ ಪ್ರತಿ ವ್ಯಕ್ತಿಯ ಕಲ್ಯಾಣವೂ ಮುಖ್ಯ. ಶ್ರೇಷ್ಠ ಭಾರತದ ನಿರ್ಮಾಣ ಸರ್ವರಿಗೂ ಸಮಾನ ಪ್ರಾತಿನಿಧ್ಯ ಹಾಗೂ ಅವಕಾಶ ದೊರೆತಾಗ ಮಾತ್ರ ಸಾಧ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಧ್ಯೇಯದಡಿ ಸಮುದಾಯಗಳ ಮೀಸಲಾತಿ ಹೆಚ್ಚಳ: ಪ್ರಲ್ಹಾದ್ ಜೋಶಿ
ಪ್ರಹ್ಲಾದ್ ಜೋಶಿ
Rakesh Nayak Manchi
Rakesh Nayak Manchi|

Updated on:Apr 06, 2023 | 9:55 PM

Share

ಮುಖ್ಯಾಂಶಗಳು

  • ಎಲ್ಲ ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ಒಳ ಮೀಸಲಾತಿ ಹೆಚ್ಚಿಸಲಾಗಿದೆ: ಪ್ರಲ್ಹಾದ್ ಜೋಶಿ
  • ರಾಜ್ಯದ ಪ್ರತಿ ವ್ಯಕ್ತಿಯ ಶ್ರೇಯಸ್ಸು ಬಿಜೆಪಿಯ ಗುರಿಯಾಗಿದೆ: ಪ್ರಲ್ಹಾದ್ ಜೋಶಿ
  • ಸಿದ್ದರಾಮಯ್ಯ ಅವರು ಮೀಸಲಾತಿ ಹೆಚ್ಚಿಸುವ ಬಗ್ಗೆ ರಾಜಕೀಯ ಇಚ್ಛಾಶಕ್ತಿ ತೀರಿಸಲಿಲ್ಲ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ರಾಜ್ಯ ಸರ್ಕಾರ ಸಮುದಾಯಗಳ ಮೀಸಲಾತಿ ಹೆಚ್ಚಿಸುವ ಮೂಲಕ ಎಲ್ಲರ ವಿಶ್ವಾಸ ಗಳಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ರಾಜ್ಯದಲ್ಲಿ ಪರಿಶಿಷ್ಟ ಸಮುದಾಯಗಳಿಗೆ ಮೀಸಲಾತಿ (SC ST Reservation) ಹಾಗೂ ಒಳ ಮೀಸಲಾತಿ (Internal Reservation) ಹೆಚ್ಚಿಸಿದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಭಿನಂದಿಸಲು ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ ಅವರು, ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರಕ್ಕೆ ಸಮಾಜದ ಪ್ರತಿ ವ್ಯಕ್ತಿಯ ಕಲ್ಯಾಣವೂ ಮುಖ್ಯ. ಶ್ರೇಷ್ಠ ಭಾರತದ ನಿರ್ಮಾಣ ಸರ್ವರಿಗೂ ಸಮಾನ ಪ್ರಾತಿನಿಧ್ಯ ಹಾಗೂ ಅವಕಾಶ ದೊರೆತಾಗ ಮಾತ್ರ ಸಾಧ್ಯ. ಅದೇ ಉದ್ದೇಶದಿಂದಲೇ ಈ ಕ್ರಾಂತಿಕಾರಿ ನಿರ್ಣಾಯವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದ್ದು, ರಾಜ್ಯದ ಪ್ರತಿ ವ್ಯಕ್ತಿಯ ಶ್ರೇಯಸ್ಸು ಬಿಜೆಪಿಯ ಗುರಿಯಾಗಿದೆ ಎಂದರು.

ಕಾಂಗ್ರೆಸ್ ಮಾತಿಗೂ ಕೃತಿಗೂ ವ್ಯತ್ಯಾಸವಿದೆ. ಕಾಂಗ್ರೆಸ್ ದ್ವಂದ್ವ ‌ನೀತಿ ಅನುಸರಿಸುತ್ತಿದೆ. ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ಸಿದ್ಧರಾಮಯ್ಯ ಅವರು ಜಾತಿ ವಿಷ ಬೀಜ ಬಿತ್ತಲು ಮುಂದಾದರೆ ಹೊರತು, ಮೀಸಲಾತಿ ಹೆಚ್ಚಿಸುವ ಬಗ್ಗೆ ರಾಜಕೀಯ ಇಚ್ಛಾಶಕ್ತಿ ತೀರಿಸಲಿಲ್ಲ ಎಂದು ಹೇಳುವ ಮೂಲಕ ಪ್ರಲ್ಹಾದ್ ಜೋಶಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Karnataka Elections: ಮೀಸಲಾತಿ ಮುಟ್ಟಿದರೆ ಕ್ರಾಂತಿ ಆಗತ್ತದೆ: ಕಾಂಗ್ರೆಸ್​ಗೆ ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ

ರಾಜ್ಯ ಬಿಜೆಪಿ ಸರ್ಕಾರ ಯಾರಿಗೂ‌, ಯಾವ ಸಮುದಾಯದಕ್ಕೂ ಅನ್ಯಾಯ ಮಾಡಿಲ್ಲ. ಎಲ್ಲ ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ಒಳ ಮೀಸಲಾತಿ ಹೆಚ್ಚಿಸಲಾಗಿದೆ. ಇದೊಂದು ಐತಿಹಾಸಿಕ ನಿರ್ಧಾರವಾಗಿದ್ದು, ಬಿಜೆಪಿಯ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನೀತಿಯನ್ನ ತೋರ್ಪಡಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ನಾರಾಯಣಸ್ವಾಮಿ, ಸಚಿವರಾದ ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ, ಶಂಕರ ಪಾಟೀಲ ಮುನೇನಕೊಪ್ಪ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:41 pm, Thu, 6 April 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ