AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಶೆಟ್ಟರ್, ಸವದಿ ಕಾಂಗ್ರೆಸ್​ ಸೇರ್ಪಡೆ ನಮಗೆ ಪ್ಲಸ್​ ಆಗುತ್ತೆ, ಸಿಎಂ ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ದೇಕೆ?

ಬಿಜೆಪಿ ತೊರೆದು ಹೋದ ಶೆಟ್ಟರ್, ಸವದಿ ಕಾಂಗ್ರೆಸ್​ ಸೇರ್ಪಡೆಯಿಂದ ನಮಗೆ ಪ್ಲಸ್​ ಆಗುತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Karnataka Assembly Elections 2023: ಶೆಟ್ಟರ್, ಸವದಿ ಕಾಂಗ್ರೆಸ್​ ಸೇರ್ಪಡೆ ನಮಗೆ ಪ್ಲಸ್​ ಆಗುತ್ತೆ, ಸಿಎಂ ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ದೇಕೆ?
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Apr 24, 2023 | 11:42 AM

Share

ದಾವಣಗೆರೆ: ವಿಧಾನಸಭೆ ಚುನಾವಣೆ(Karnataka Assembly Election)ಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಲಿಂಗಾಯತ ಸಿಎಂ ಕುರಿತು ಚರ್ಚೆ ಜೋರಾಗಿದೆ. ಈ ಮಧ್ಯೆ ಹೇಗಾದರೂ ಮಾಡಿ ಗೆಲುವು ಸಾಧಿಸಲು ಉಭಯ ಪಕ್ಷಗಳು ಆರೋಪ ಪ್ರತ್ಯಾರೋಪಗಳ ಸುರಿಮಳೆ ಸುರಿಸುತ್ತಿದ್ದಾರೆ. ಅದರಂತೆ ‘ಬಿಜೆಪಿ ತೊರೆದು ಹೋದ ಶೆಟ್ಟರ್, ಸವದಿ ಕಾಂಗ್ರೆಸ್​ ಸೇರ್ಪಡೆಯಿಂದ ನಮಗೆ ಪ್ಲಸ್​ ಆಗುತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ. ದಾವಣಗೆರೆಯಲ್ಲಿ ಲಿಂಗಾಯತ ಮುಖ್ಯಮಂತ್ರಿ ಬಗ್ಗೆ ಸಿದ್ದರಾಮಯ್ಯ(Siddaramaiah) ಹೇಳಿಕೆ ವಿಚಾರವನ್ನ ತಿರುಚಲಾಗಿದೆ ಎಂಬ ಆರೋಪ ಕುರಿತು ಮಾತನಾಡಿದ ಅವರು‘ ಸಿದ್ದರಾಮಯ್ಯ ಹೇಳಿಕೆಯನ್ನು ಯಾರೂ ತಿರುಚಿಲ್ಲ, ಅವರು ಮಾತನಾಡಿದ ವಿಡಿಯೋ ಇದೆ. ಸಿದ್ದರಾಮಯ್ಯ ಅವರೇ ಹೇಳಿಕೆಯನ್ನ ಬದಲಾವಣೆ ಮಾಡಿಕೊಂಡಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಹೇಳಿಕೆ, ಜೊತೆಗೆ ಕೆಲವರು ಕಾಂಗ್ರೆಸ್ ಸೇರ್ಪಡೆಯಿಂದ ಈ ಸಲ ಬಿಜೆಪಿಗೆ ವೀರಶೈವ ಮತಗಳು ಹೆಚ್ಚಾಗುತ್ತವೆ. ಈಗ ಬಿಜೆಪಿ ಅಲೆ ಇದ್ದು, ಖಂಡಿತ ಅಧಿಕಾರಕ್ಕೆ ಬರಲಿದೆ. ಕೂಸು ಹುಟ್ಟುವ ಮೊದಲೇ ಕುಲಾಯಿ ಹೊಲಿಸುವುದು ಸೂಕ್ತ. ಮುಂದಿನ ಸಿಎಂ ನಾನೇ ಎಂದು ಹೇಳಲ್ಲ. ಫಲಿತಾಂಶ ಬಂದ ಬಳಿಕ ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ. ಇನ್ನು ರಾಜ್ಯದಲ್ಲಿ ಶೇ 90 ರಷ್ಟು ಬಿಜೆಪಿಯಲ್ಲಿನ ಬಂಡಾಯ ಶಮನವಾಗಿದೆ. ಇನ್ನಷ್ಟು‌ ಮಾತು ಕತೆ ನಡೆದಿದೆ ಎಂದಿದ್ದಾರೆ.

ಇದನ್ನೂ ಓದಿ:ಇಂದಿರಾ ಗಾಂಧಿ ವಿರುದ್ಧ ಸ್ಪರ್ಧಿಸಲಿಲ್ಲ, ರಾಜಕೀಯಕ್ಕೂ ಬರಲಿಲ್ಲ; ರಾಜ್​ಕುಮಾರ್ ಅವರನ್ನು ತಡೆದಿತ್ತು ಈ ವಿಚಾರ

ಇನ್ನು 18ರಿಂದ35 ವರ್ಷದೊಳಗಿನ ಯುವ ಪಡೆ ಬಿಜೆಪಿಯೊಂದಿಗೆ ಇದೆ. ಜನರ ಭಾವನೆಗಳ‌ ಜೊತೆ ಆಟವಾಡುವುದು ಕಾಂಗ್ರೆಸ್. ನಿನ್ನೆ(ಏ.23) ರಾಹುಲ್ ಗಾಂಧಿ‌ ಕೂಡಲ ಸಂಗಮಕ್ಕೆ ಭೇಟಿ ನೀಡಿದ್ದಾರೆ. ತೊರಿಕೆಗಾದರೂ ಬಸವಣ್ಣನ ದರ್ಶನ ಮಾಡಲಿಲ್ಲವೆಂದರೂ. ಇನ್ನು ಚುನಾವಣಾ ಪ್ರಚಾರಕ್ಕೋಸ್ಕರ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ ಸೇರಿದಂತೆ ಪ್ರಮುಖರು ರಾಜ್ಯಕ್ಕೆ ಬರಲಿದ್ದಾರೆ. ನಾನು ಈಗ ಬೆಂಗಳೂರು, ಮಧ್ಯ ಕರ್ನಾಟಕ, ನಾಳೆ(ಏ.25) ಬೆಳಗಾವಿ ವಿಭಾಗ, ಇದಾದ ಬಳಿಕ‌ ಕಲ್ಯಾಣ ಕರ್ನಾಟಕದಲ್ಲಿ ಪ್ರಚಾರ ಮಾಡುವೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:42 am, Mon, 24 April 23

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್