AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shikaripur Election 2023 Winner: ತಂದೆಯ ಭದ್ರಕೋಟೆ ಶಿಕಾರಿಪುರದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ವಿಜಯೇಂದ್ರಗೆ ಭಾರಿ ಗೆಲುವು

BY Vijayendra: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಶಿಕಾರಿಪುರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 1983ರಿಂದ 2018ರವರೆಗೆ ಒಮ್ಮೆ ಮಾತ್ರ ಶಿಕಾರಿಪುರದ ಜನತೆ ಯಡಿಯೂರಪ್ಪರನ್ನು ಸೋಲಿಸಿತ್ತು.

Shikaripur Election 2023 Winner: ತಂದೆಯ ಭದ್ರಕೋಟೆ ಶಿಕಾರಿಪುರದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ವಿಜಯೇಂದ್ರಗೆ ಭಾರಿ ಗೆಲುವು
ಬಿವೈ ವಿಜಯೇಂದ್ರ
ನಯನಾ ರಾಜೀವ್
|

Updated on: May 13, 2023 | 3:25 PM

Share

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಶಿಕಾರಿಪುರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 1983ರಿಂದ 2018ರವರೆಗೆ ಒಮ್ಮೆ ಮಾತ್ರ ಶಿಕಾರಿಪುರದ ಜನತೆ ಯಡಿಯೂರಪ್ಪರನ್ನು ಸೋಲಿಸಿತ್ತು. ಯಡಿಯೂರಪ್ಪ ಹೊಸ ಪಕ್ಷ ಕಟ್ಟಿದಾಗಲೂ ಮತದಾರರು ಕೈ ಬಿಟ್ಟಿರಲಿಲ್ಲ. ಈ ಬಾರಿ ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದು ಅವರ ಬದಲಿಗೆ ಬಿಜೆಪಿಯಿಂದ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರಗೆ ಟಿಕೆಟ್ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರನ್ನು ಎಂಟು ಬಾರಿ ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿಕೊಟ್ಟಿದ್ದ ಶಿಕಾರಿಪುರದ ಜನತೆ ಇತ್ತೀಚಿನ ದಿನಗಳಲ್ಲಿ ಮೊದಲ ಬಾರಿಗೆ ರಾಜಕೀಯ ಸ್ಥಿತ್ಯಂತರಗಳನ್ನು ಕಾಣುತ್ತಿದೆ.

ಕಾಂಗ್ರೆಸ್​ನಿಂದ ಜಿಬಿ ಮಾಲತೇಶ್​, ಜೆಡಿಎಸ್​ನಿಂದ ಸುಧಾಕರ್ ಶೆಟ್ಟಿ, ಆಪ್​ನಿಂದ ಚಂದ್ರಕಾಂತ್ ರೇವಣ್​ಕರ್ ಅಭ್ಯರ್ಥಿಯಾಗಿದ್ದರು. ಕಳೆದ ಬಾರಿ ಯಡಿಯೂರಪ್ಪ 35 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಅದಕ್ಕೂ ಮೊದಲು ಕೆಜೆಪಿಯಿಂದ ಸ್ಪರ್ಧಿಸಿದ್ದಾಗ, ಅವರ ಗೆಲುವಿನ ಅಂತರ 25 ಸಾವಿರ ಮತದಷ್ಟಿತ್ತು, ಆಗ ಬಿಜೆಪಿ ಅಭ್ಯರ್ಥಿಗೆ ಠೇವಣಿ ನಷ್ಟವಾಗಿತ್ತು ಎನ್ನುವುದನ್ನು ಗಮನಿಸಬಹುದು.

ಈ ಬಾರಿ ವಿಜಯೇಂದ್ರ ಹಾಗೂ ಮಾಲತೇಶ್ ನಡುವೆ ನೇರ ಪೈಪೋಟಿ ಇರಲಿದೆ. ಕಳೆದ ಬಾರಿಯೂ ಮಾಲತೇಶ್ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!