AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಕಿಚ್ಚ ಸುದೀಪ್ ಅಭಿನಯದ ಸಿನಿಮಾ, ಟಿವಿ ಶೋ ಪ್ರಸಾರ ಮಾಡದಂತೆ ಚುನಾವಣಾ ಆಯೋಗಕ್ಕೆ ಶಿವಮೊಗ್ಗದ ವಕೀಲ ಮನವಿ

ನಟ ಕಿಚ್ಚ ಸುದೀಪ್ ಅವರ​ ಚಲನಚಿತ್ರಗಳನ್ನು, ಟಿ.ವಿ.ಶೋಗಳನ್ನು ಮತ್ತು ಅವರು ಇರುವ ಜಾಹಿರಾತುಗಳ ಪ್ರದರ್ಶನಕ್ಕೆ ತಡೆ ಹಿಡಿಯಬೇಕೆಂದು ಶಿವಮೊಗ್ಗದ ವಕೀಲರೊಬ್ಬರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ನಟ ಕಿಚ್ಚ ಸುದೀಪ್ ಅಭಿನಯದ ಸಿನಿಮಾ, ಟಿವಿ ಶೋ ಪ್ರಸಾರ ಮಾಡದಂತೆ ಚುನಾವಣಾ ಆಯೋಗಕ್ಕೆ ಶಿವಮೊಗ್ಗದ ವಕೀಲ ಮನವಿ
ನಟ ಸುದೀಪ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Apr 05, 2023 | 10:50 PM

Share

ಮುಖ್ಯಾಂಶಗಳು

  • ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ನಟ ಕಿಚ್ಚ ಸುದೀಪ್,​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ.
  • ನಟ ಕಿಚ್ಚ ಸುದೀಪ್ ಅವರ​ ಚಲನಚಿತ್ರಗಳನ್ನು, ಟಿ.ವಿ.ಶೋಗಳನ್ನು ಮತ್ತು ಅವರು ಇರುವ ಜಾಹಿರಾತುಗಳ ಪ್ರದರ್ಶನಕ್ಕೆ ತಡೆ ಹಿಡಿಯಬೇಕೆಂದು ಶಿವಮೊಗ್ಗದ ವಕೀಲರೊಬ್ಬರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
  • ಶಿವಮೊಗ್ಗ ಜಿಲ್ಲೆಯ ವಕೀಲ ಕೆ.ಪಿ ಶ್ರೀಪಾಲ ಎಂಬುವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ನಟ ಕಿಚ್ಚ ಸುದೀಪ್ (Actor Sudeep) ,​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ (CM Basavaraj Bommai) ಬೆಂಬಲ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆ ನಟ ಕಿಚ್ಚ ಸುದೀಪ್ ಅವರ​ ಚಲನಚಿತ್ರಗಳನ್ನು (Films), ಟಿ.ವಿ.ಶೋಗಳನ್ನು (TV Shows) ಮತ್ತು ಅವರು ಇರುವ ಜಾಹಿರಾತುಗಳ (Advertisement) ಪ್ರದರ್ಶನಕ್ಕೆ ತಡೆ ಹಿಡಿಯಬೇಕೆಂದು ಶಿವಮೊಗ್ಗದ (Shivamogga) ವಕೀಲರೊಬ್ಬರು (Advocate) ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಶಿವಮೊಗ್ಗದ ವಕೀಲರ ಪತ್ರದಲ್ಲಿ ಏನಿದೆ

ಜಿಲ್ಲೆಯ ವಕೀಲ ಕೆ.ಪಿ ಶ್ರೀಪಾಲ ಎಂಬುವರು ಪತ್ರದಲ್ಲಿ “ಕನ್ನಡದ ಚಲನಚಿತ್ರ ನಟ ಕಿಚ್ಚ ಸುದೀಪ್​ ಅವರು ಬಿಜೆಪಿಯ ಸ್ಟಾರ್​ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವವರೆಗೂ ಅವರ ನಟನೆಯ ಯಾವುದೇ ಚಲನಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿ.ವಿಗಳಲ್ಲಿ ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ ಟಿ.ವಿ ಶೋಗಳು ಪ್ರಸಾರವಾಗದಂತೆ ಮತ್ತು ನಟಿಸಿರುವ ಜಾಹಿರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕ್ರಮ ಜರುಗಿಸಬೇಕು.”

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ನಟ ಸುದೀಪ್​ ಬೆಂಬಲ: ಬಿಜೆಪಿ ವಿರುದ್ಧ ಟ್ವೀಟ್​ ಮೂಲಕ ಕಾಂಗ್ರೆಸ್​ ವ್ಯಂಗ್ಯ

“ಅವರು ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದನ್ನು ಅವರೆ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನಚಿತ್ರಗಳು, ಟಿ.ವಿ ಶೋಗಳು ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ. ಆದ್ದರಿಂದ ತಕ್ಷಣದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳುವಂತೆ ವಕೀಲ ಕೆ.ಪಿ ಶ್ರೀಪಾಲ ಅವರು ಒತ್ತಾಯಿಸಿದ್ದಾರೆ.”

ವಿಧಾನಸಭಾ ಚುನಾವಣಾ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು