AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಕಿಚ್ಚ ಸುದೀಪ್ ಅಭಿನಯದ ಸಿನಿಮಾ, ಟಿವಿ ಶೋ ಪ್ರಸಾರ ಮಾಡದಂತೆ ಚುನಾವಣಾ ಆಯೋಗಕ್ಕೆ ಶಿವಮೊಗ್ಗದ ವಕೀಲ ಮನವಿ

ನಟ ಕಿಚ್ಚ ಸುದೀಪ್ ಅವರ​ ಚಲನಚಿತ್ರಗಳನ್ನು, ಟಿ.ವಿ.ಶೋಗಳನ್ನು ಮತ್ತು ಅವರು ಇರುವ ಜಾಹಿರಾತುಗಳ ಪ್ರದರ್ಶನಕ್ಕೆ ತಡೆ ಹಿಡಿಯಬೇಕೆಂದು ಶಿವಮೊಗ್ಗದ ವಕೀಲರೊಬ್ಬರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ನಟ ಕಿಚ್ಚ ಸುದೀಪ್ ಅಭಿನಯದ ಸಿನಿಮಾ, ಟಿವಿ ಶೋ ಪ್ರಸಾರ ಮಾಡದಂತೆ ಚುನಾವಣಾ ಆಯೋಗಕ್ಕೆ ಶಿವಮೊಗ್ಗದ ವಕೀಲ ಮನವಿ
ನಟ ಸುದೀಪ್​
ವಿವೇಕ ಬಿರಾದಾರ
|

Updated on: Apr 05, 2023 | 10:50 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ನಟ ಕಿಚ್ಚ ಸುದೀಪ್ (Actor Sudeep) ,​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ (CM Basavaraj Bommai) ಬೆಂಬಲ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆ ನಟ ಕಿಚ್ಚ ಸುದೀಪ್ ಅವರ​ ಚಲನಚಿತ್ರಗಳನ್ನು (Films), ಟಿ.ವಿ.ಶೋಗಳನ್ನು (TV Shows) ಮತ್ತು ಅವರು ಇರುವ ಜಾಹಿರಾತುಗಳ (Advertisement) ಪ್ರದರ್ಶನಕ್ಕೆ ತಡೆ ಹಿಡಿಯಬೇಕೆಂದು ಶಿವಮೊಗ್ಗದ (Shivamogga) ವಕೀಲರೊಬ್ಬರು (Advocate) ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಶಿವಮೊಗ್ಗದ ವಕೀಲರ ಪತ್ರದಲ್ಲಿ ಏನಿದೆ

ಜಿಲ್ಲೆಯ ವಕೀಲ ಕೆ.ಪಿ ಶ್ರೀಪಾಲ ಎಂಬುವರು ಪತ್ರದಲ್ಲಿ “ಕನ್ನಡದ ಚಲನಚಿತ್ರ ನಟ ಕಿಚ್ಚ ಸುದೀಪ್​ ಅವರು ಬಿಜೆಪಿಯ ಸ್ಟಾರ್​ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವವರೆಗೂ ಅವರ ನಟನೆಯ ಯಾವುದೇ ಚಲನಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿ.ವಿಗಳಲ್ಲಿ ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ ಟಿ.ವಿ ಶೋಗಳು ಪ್ರಸಾರವಾಗದಂತೆ ಮತ್ತು ನಟಿಸಿರುವ ಜಾಹಿರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕ್ರಮ ಜರುಗಿಸಬೇಕು.”

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ನಟ ಸುದೀಪ್​ ಬೆಂಬಲ: ಬಿಜೆಪಿ ವಿರುದ್ಧ ಟ್ವೀಟ್​ ಮೂಲಕ ಕಾಂಗ್ರೆಸ್​ ವ್ಯಂಗ್ಯ

“ಅವರು ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದನ್ನು ಅವರೆ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನಚಿತ್ರಗಳು, ಟಿ.ವಿ ಶೋಗಳು ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ. ಆದ್ದರಿಂದ ತಕ್ಷಣದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳುವಂತೆ ವಕೀಲ ಕೆ.ಪಿ ಶ್ರೀಪಾಲ ಅವರು ಒತ್ತಾಯಿಸಿದ್ದಾರೆ.”

ವಿಧಾನಸಭಾ ಚುನಾವಣಾ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ