AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಕಿಚ್ಚ ಸುದೀಪ್ ಅಭಿನಯದ ಸಿನಿಮಾ, ಟಿವಿ ಶೋ ಪ್ರಸಾರ ಮಾಡದಂತೆ ಚುನಾವಣಾ ಆಯೋಗಕ್ಕೆ ಶಿವಮೊಗ್ಗದ ವಕೀಲ ಮನವಿ

ನಟ ಕಿಚ್ಚ ಸುದೀಪ್ ಅವರ​ ಚಲನಚಿತ್ರಗಳನ್ನು, ಟಿ.ವಿ.ಶೋಗಳನ್ನು ಮತ್ತು ಅವರು ಇರುವ ಜಾಹಿರಾತುಗಳ ಪ್ರದರ್ಶನಕ್ಕೆ ತಡೆ ಹಿಡಿಯಬೇಕೆಂದು ಶಿವಮೊಗ್ಗದ ವಕೀಲರೊಬ್ಬರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ನಟ ಕಿಚ್ಚ ಸುದೀಪ್ ಅಭಿನಯದ ಸಿನಿಮಾ, ಟಿವಿ ಶೋ ಪ್ರಸಾರ ಮಾಡದಂತೆ ಚುನಾವಣಾ ಆಯೋಗಕ್ಕೆ ಶಿವಮೊಗ್ಗದ ವಕೀಲ ಮನವಿ
ನಟ ಸುದೀಪ್​
ವಿವೇಕ ಬಿರಾದಾರ
|

Updated on: Apr 05, 2023 | 10:50 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ನಟ ಕಿಚ್ಚ ಸುದೀಪ್ (Actor Sudeep) ,​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ (CM Basavaraj Bommai) ಬೆಂಬಲ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆ ನಟ ಕಿಚ್ಚ ಸುದೀಪ್ ಅವರ​ ಚಲನಚಿತ್ರಗಳನ್ನು (Films), ಟಿ.ವಿ.ಶೋಗಳನ್ನು (TV Shows) ಮತ್ತು ಅವರು ಇರುವ ಜಾಹಿರಾತುಗಳ (Advertisement) ಪ್ರದರ್ಶನಕ್ಕೆ ತಡೆ ಹಿಡಿಯಬೇಕೆಂದು ಶಿವಮೊಗ್ಗದ (Shivamogga) ವಕೀಲರೊಬ್ಬರು (Advocate) ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಶಿವಮೊಗ್ಗದ ವಕೀಲರ ಪತ್ರದಲ್ಲಿ ಏನಿದೆ

ಜಿಲ್ಲೆಯ ವಕೀಲ ಕೆ.ಪಿ ಶ್ರೀಪಾಲ ಎಂಬುವರು ಪತ್ರದಲ್ಲಿ “ಕನ್ನಡದ ಚಲನಚಿತ್ರ ನಟ ಕಿಚ್ಚ ಸುದೀಪ್​ ಅವರು ಬಿಜೆಪಿಯ ಸ್ಟಾರ್​ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವವರೆಗೂ ಅವರ ನಟನೆಯ ಯಾವುದೇ ಚಲನಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿ.ವಿಗಳಲ್ಲಿ ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ ಟಿ.ವಿ ಶೋಗಳು ಪ್ರಸಾರವಾಗದಂತೆ ಮತ್ತು ನಟಿಸಿರುವ ಜಾಹಿರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕ್ರಮ ಜರುಗಿಸಬೇಕು.”

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ನಟ ಸುದೀಪ್​ ಬೆಂಬಲ: ಬಿಜೆಪಿ ವಿರುದ್ಧ ಟ್ವೀಟ್​ ಮೂಲಕ ಕಾಂಗ್ರೆಸ್​ ವ್ಯಂಗ್ಯ

“ಅವರು ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದನ್ನು ಅವರೆ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನಚಿತ್ರಗಳು, ಟಿ.ವಿ ಶೋಗಳು ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ. ಆದ್ದರಿಂದ ತಕ್ಷಣದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳುವಂತೆ ವಕೀಲ ಕೆ.ಪಿ ಶ್ರೀಪಾಲ ಅವರು ಒತ್ತಾಯಿಸಿದ್ದಾರೆ.”

ವಿಧಾನಸಭಾ ಚುನಾವಣಾ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!