AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಾಯತ ಸಿಎಂ ಹೇಳಿಕೆ: ಸಿದ್ದರಾಮಯ್ಯ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು

ಲಿಂಗಾಯತ ಸಿಎಂ ಭ್ರಷ್ಟಾಚಾರ ಎಸಗಿ, ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ಹಿನ್ನೆಲೆ ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕದಿಂದ ಸಿದ್ದರಾಮಯ್ಯ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on:Apr 23, 2023 | 7:11 PM

Share

ಬೆಂಗಳೂರು: ಲಿಂಗಾಯತ ಸಿಎಂ ಭ್ರಷ್ಟಾಚಾರ ಎಸಗಿ, ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ಮಾಜಿ ಸಿಎಂ ಸಿದ್ಧರಾಮಯ್ಯ  (Siddaramaiah) ಹೇಳಿಕೆಗೆ ಸದ್ಯ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರು ಈ ಕುರಿತಾಗಿ ಸಿದ್ಧರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ಮಾಡುತ್ತಿದ್ದಾರೆ. ಇವೆಲ್ಲದರ ನಡುವೆ ಸಿದ್ಧರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕದಿಂದ ಸಿದ್ದರಾಮಯ್ಯ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಲಿಂಗಾಯತ ಮುಖ್ಯಮಂತ್ರಿಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಲಿಂಗಾಯತ ಯುವ ವೇದಿಕೆ ಮುಖಂಡ ಬಸವರಾಜ್​ ಎನ್ನುವವರು ದೂರು ದಾಖಲಿಸಿದ್ದಾರೆ.

ಲಿಂಗಾಯತ ಯುವ ವೇದಿಕೆಯಿಂದ ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ಆಗ್ರಹ 

ಆಯೋಗಕ್ಕೆ ದೂರು ಸಲ್ಲಿಕೆ ನಂತರ ಮುಖಂಡ ಬಸವರಾಜ್ ಮಾತನಾಡಿ, ಸಿದ್ದರಾಮಯ್ಯ ಇಡೀ ಲಿಂಗಾಯತ ಸಮುದಾಯವನ್ನು ನಿಂದಿಸಿದ್ದಾರೆ. ಲಿಂಗಾಯತ ಸಿಎಂಗಳು ಭ್ರಷ್ಟರು ಎಂದು ಹೇಳಿಕೆ ನೀಡಿದ್ದು ಸರಿಯಲ್ಲ. ನಾವು ಯಾವುದೇ ಪಕ್ಷದ ಪರವಾಗಿ ಆಯೋಗಕ್ಕೆ ದೂರು ನೀಡಿಲ್ಲ. ಇಡೀ ಲಿಂಗಾಯತ ಸಮುದಾಯವನ್ನ ತೇಜೋವಧೆ ಮಾಡಿದ್ದಾರೆ. ಕೂಡಲೇ ಸಿದ್ದರಾಮಯ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ: ಸಿದ್ದರಾಮಯ್ಯ ಸ್ಪಷ್ಟನೆ

ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಸಿದ್ದರಾಮಯ್ಯಗೆ ಎಚ್ಚರಿಕೆ

ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ಮಾತನಾಡಿ, ಇದು ವೀರಶೈವ ಲಿಂಗಾಯತ ಸಮುದಾಯಕ್ಕೆ ಧಕ್ಕೆ ತರುವಂತಹ ಕೆಲಸ. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಭಾರೀ ಆಕ್ರೋಶ ಉಂಟು ಮಾಡಿದೆ. ಈ ಹಿಂದೆ ವೀರಶೈವ ಲಿಂಗಾಯತ ಸಮುದಾಯ ಒಡೆಯಲು ಯತ್ನಿಸಿದ್ದರು.

ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದನ್ನು ನಾವು ಇನ್ನೂ ಮರೆತಿಲ್ಲ. ಈಗ ಚುನಾವಣೆ ವೇಳೆ ನಿಮ್ಮ ಮನಸ್ಸಿನಲ್ಲಿರುವ ಭಾವನೆ ಹೊರಹಾಕಿದ್ದೀರಿ. ಇದು ವೀರಶೈವ ಲಿಂಗಾಯತ ಸಮುದಾಯಕ್ಕೆ ಮಾಡಿದ ದೊಡ್ಡ ದ್ರೋಹ. ವರುಣ ಕ್ಷೇತ್ರದಲ್ಲಿ 70 ಸಾವಿರಕ್ಕೂ ಹೆಚ್ಚು ಲಿಂಗಾಯತ ಮತದಾರರಿದ್ದಾರೆ. ನಿಮ್ಮ ಹೇಳಿಕೆಯಿಂದ ವೀರಶೈವ ಲಿಂಗಾಯತರಿಗೆ ತೀವ್ರ ಬೇಸರವಾಗಿದೆ. ತಕ್ಷಣ ಕ್ಷಮೆಯಾಚಿಸಿ, ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಕ್ಷಮೆಯಾಚಿಸದಿದ್ದರೆ ನೀವು ತಕ್ಕ ಪಾಠ ಕಲಿಯಬೇಕಾಗುತ್ತೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಲಿಂಗಾಯತ ಡ್ಯಾಮ್​ನಲ್ಲಿದ್ದ ಕಾಂಗ್ರೆಸ್​​ ನೀರು ಸಮುದ್ರ ಸೇರಿದ ನೀರು ಉಪ್ಪು ಇರುತ್ತೆ, ಉಪಯೋಗಕ್ಕೆ ಬರಲ್ಲ; ಡಿಕೆ ಶಿವಕುಮಾರ್​ಗೆ ಪ್ರಹ್ಲಾದ್ ಜೋಶಿ ತಿರುಗೇಟು

ಸಿದ್ದರಾಮಯ್ಯ ಸ್ಪಷ್ಟನೆ 

ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ. ಲಿಂಗಾಯತ ಸಮುದಾಯದ ಬಗ್ಗೆ ಅಪಾರ ಗೌರವವಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಗೆ ಸೀಮಿತವಾಗಿ ಮಾತ್ರ ನಾನು ಹೇಳಿಕೆ ನೀಡಿದ್ದೇನೆ.

ಈ ಹಿಂದೆ ಸಿಎಂ ಆಗಿದ್ದ ಲಿಂಗಾಯತ ಸಮಾಜದವರು ಪ್ರಮಾಣಿಕರಾಗಿದ್ದರು. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್‌, ಜೆ.ಹೆಚ್‌.ಪಟೇಲ್‌, S.R.ಕಂಠಿ ಸೇರಿ ಲಿಂಗಾಯತ ಸಮುದಾಯದ ಸಿಎಂಗಳು ಅತ್ಯಂತ ಹಾನೆಸ್ಟ್‌ ಆಗಿದ್ದರು. ನನ್ನ ಹೇಳಿಕೆಯನ್ನು ಬಿಜೆಪಿ ಸೋಷಿಯಲ್ ಮೀಡಿಯಾ ತಿರುಚುತ್ತಿದೆ. ಚುನಾವಣೆ ಹಿನ್ನೆಲೆ ನನ್ನ ಹೇಳಿಕೆ ತಿರುಚಿ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಲಿಂಗಾಯತರ ಮೇಲೆ ವಿಶ್ವಾಸ ಇಲ್ಲದಿದ್ದರೆ ಏಕೆ ಇಷ್ಟು ಸೀಟ್‌ ನೀಡುತ್ತಿದ್ದೆವು ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Sun, 23 April 23

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು