AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​​ ಆಕಾಂಕ್ಷಿಗಳ ಸಂಧಾನ ಸಭೆ ಯಶಸ್ವಿ, ಆಪ್ತನಿಗೆ ಟಿಕೆಟ್ ಒಲಿಯುವಂತೆ ಮಾಡಿದ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ್ದ ಟಿಕೆಟ್ ಆಕಾಂಕ್ಷಿಗಳ ಸಂಧಾನ ಸಭೆ ಸಕ್ಸಸ್ ಆಗಿದ್ದು, ಅಂತಿಮವಾಗಿ ತಮ್ಮ ಆಪ್ತನಿಗೆ ಟಿಕೆಟ್​​ ಖಚಿತಪಡಿಸಿದ್ದಾರೆ.

ಟಿಕೆಟ್​​ ಆಕಾಂಕ್ಷಿಗಳ ಸಂಧಾನ ಸಭೆ ಯಶಸ್ವಿ, ಆಪ್ತನಿಗೆ ಟಿಕೆಟ್ ಒಲಿಯುವಂತೆ ಮಾಡಿದ ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on: Feb 27, 2023 | 1:35 PM

Share

ಬೆಳಗಾವಿ: ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆಯೇ ಟಿಕೆಟ್​ ಪಡೆದುಕೊಳ್ಳಲು ಆಕಾಂಕ್ಷಿಗಳ ಕಸರತ್ತು ಜೋರಾಗಿದೆ. ಅದರಂತೆ ಬೆಳಗಾವಿಯ ರಾಮದುರ್ಗಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಟಿಕೆಟ್​​ಗಾಗಿ ಭಾರೀ ಪೈಪೋಟಿ ನಡೆದಿದ್ದು, ಇದೀಗ ಸಿದ್ದರಾಮಯ್ಯ(Siddaramaiah) ಮಧ್ಯ ಪ್ರವೇಶಿಸಿ ಇಬ್ಬರ ನಡುವೆ ಸಂಧಾನ ಸಭೆ ಮಾಡಿದ್ದು, ಇಬ್ಬರಲ್ಲಿ ಒಬ್ಬರ ಮನವೊಲಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಇದರಿಂದ ಅಂತಿಮವಾಗಿ ಕಣದಲ್ಲಿ ಸಿದ್ದರಾಮಯ್ಯನವರ ಆಪ್ತ ಉಳಿದುಕೊಂಡಿದ್ದಾರೆ.

ಹೌದು…ರಾಮದುರ್ಗಾ ಕ್ಷೇತ್ರದ ಟಿಕೆಟ್​ಗಾಗಿ ಅಶೋಕ್ ಪಟ್ಟಣ್ ಹಾಗೂ ಚಿಕ್ಕರೇವಣ್ಣ ನಡುವೆ ತೀವ್ರ ಪೈಪೋಟಿ ಪೈಪೋಟಿ ಏರ್ಪಟ್ಟಿದ್ದು, ಈ ಬಾರಿ ತಮಗೆ ಟಿಕೆಟ್​ ನೀಡಬೇಕೆಂದು ಇಬ್ಬರು ನಾಯಕರು ಪಟ್ಟು ಹಿಡಿದಿದ್ದರು. ಇದರಿಂದ ವರಿಷ್ಠರಿಗೆ ದೊಡ್ಡ ತಲೆನೋವಾಗಿತ್ತು. ಇದರಿಂದ ಮಧ್ಯ ಪ್ರವೇಶ ಮಾಡಿ ಇಬ್ಬರ ನಡುವೆ ಸಂಧಾನ ಸಭೆ ನಡೆಸಿ ಮನವೊಲಿಸುವಲ್ಲಿ ಸಕ್ಸಸ್ ಆಗಿದ್ದಾರೆ.

ಶಿವಾನಂದ ವೃತ್ತದ ಸರ್ಕಾರಿ ನಿವಾಸದಲ್ಲಿ ಇಬ್ಬರನ್ನೂ ಕೂರಿಸಿಕೊಂಡು ಸಂಧಾನ ಸಭೆ ನಡೆಸಿದ ಸಿದ್ದರಾಮಯ್ಯ, ಅಂತಿಮವಾಗಿ ಚಿಕ್ಕರೇವಣ್ಣ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗ ಅಶೋಕ್ ಪಟ್ಟಣ್​ಗೆ ಟಿಕೆಟ್ ಕೊಡೋಣ. ಸರ್ಕಾರ ಬಂದಾಗ ಸ್ಥಾನಮಾನ ನಿಮಗೆ ನೀಡೋಣ ಎಂದು ಚಿಕ್ಕರೇವಣ್ಣಗೆ ಭರವಸೆ ನೀಡಿದ್ದಾರೆ. ಸಿದ್ದು ಮಾತಿಗೆ ಚಿಕ್ಕರೇವಣ್ಣ ಕೊನೆಗೂ ಒಪ್ಪಿಗೆ ಸೂಚಿಸಿ ಚುನಾವಣಾ ಅಖಾಡದಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ತಮ್ಮ ಆಪ್ತ ಅಶೋಕ್ ಪಟ್ಟಣ್​ಗೆ​ ಮಣೆ ಹಾಕಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅಶೋಕ್​ ಪಟ್ಟಣ್​, ಚಿಕ್ಕ ರೇವಣ್ಣ ಜತೆ ಮಾತನಾಡಿದ್ದೇನೆ. ಈ ಬಾರಿ ಅಶೋಕ್ ಪಟ್ಟಣ್​ಗೆ ಟಿಕೆಟ್​ ಕೊಡಿಸೋಣ. ಎಲ್ಲರೂ ಅಶೋಕ್ ಪಟ್ಟಣ್​ ಗೆಲ್ಲಲು ಶ್ರಮಿಸಲು ಹೇಳಿದ್ದೇನೆ . ಅದಕ್ಕೆ ಚಿಕ್ಕ ರೇವಣ್ಣ ಒಪ್ಪಿಗೆ ನೀಡಿದ್ದಾರೆ. ಬೇಕಿದ್ರೆ ಅವರನ್ನೆ ಕೇಳಿ ಎಂದು ರೇವಣ್ಣ ಬಳಿಕ ಕೈ ತೋರಿಸಿದರು. ಇದಕ್ಕೆ ಚಿಕ್ಕರೇವಣ್ಣ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ‌ಮಾತು ಒಪ್ಪಿಕೊಂಡಿರುವುದಾಗಿ ಸ್ಪಷ್ಟಪಡಿಸಿದರು.

2018, ಕಳೆದ ಚುನಾವಣೆಯಲ್ಲಿ ಬಿಜೆಪಿಯ ಮಹಾದೇವಪ್ಪ ಎಸ್ ಯಾದವಾಡ ಜಯ ಗಳಿಸಿದ್ದರು. ಕಾಂಗ್ರೆಸ್​​ನ ಅಶೋಕ್ ಪಟ್ಟಣ್ ಕೇವಲ 2875 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಇದೀಗ 2023ರಲ್ಲಿ ವಿಧಾನಸಭೆ ಚುನಾವಣೆಯಲ್ಲೂ ಸಹ ಅಶೋಕ್ ಪಟ್ಟಣ್​ಗೆ ಕಾಂಗ್ರೆಸ್ ಟಿಕೆಟ್​ ಪಕ್ಕಾ ಆದಂತಾಗಿದೆ.

ಒಟ್ಟಿನಲ್ಲಿ ಸಿದ್ದರಾಮಯ್ಯ ಇಬ್ಬರು ನಾಯಕರ ಸಂಧಾನ ಸಭೆ ನಡೆಸಿ ಅಂತಿಮವಾಗಿ ತಮ್ಮ ಆಪ್ತ ಅಶೋಕ್​ ಪಟ್ಟಣ್​ಗೆ ಟಿಕೆಟ್​​ ಖಚಿತಪಡಿಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ