AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸ ತಿರುಚಿ ಪಠ್ಯ ಪುಸ್ತಕದಲ್ಲಿ ಸೇರಿಸುವ ಕೆಲಸ ಮಾಡಿದ ನೀಚ ವಿದ್ಯಾಮಂತ್ರಿ ನಾಗೇಶ್: ಸಿದ್ದರಾಮಯ್ಯ

ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಶಿಕ್ಷಣ ಸಚಿವ ಬಿಸಿ ನಾಗೇಶ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇತಿಹಾಸ ತಿರುಚಿ ಪಠ್ಯ ಪುಸ್ತಕದಲ್ಲಿ ಸೇರಿಸುವ ಕೆಲಸ ಮಾಡಿದ ನೀಚ ವಿದ್ಯಾಮಂತ್ರಿ ಎಂದು ಜರಿದರು.

ಇತಿಹಾಸ ತಿರುಚಿ ಪಠ್ಯ ಪುಸ್ತಕದಲ್ಲಿ ಸೇರಿಸುವ ಕೆಲಸ ಮಾಡಿದ ನೀಚ ವಿದ್ಯಾಮಂತ್ರಿ ನಾಗೇಶ್: ಸಿದ್ದರಾಮಯ್ಯ
ಬಿಸಿ ನಾಗೇಶ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
Rakesh Nayak Manchi
|

Updated on:Apr 30, 2023 | 9:41 PM

Share

ತುಮಕೂರು: ತಿಪಟೂರು ಕ್ಷೇತ್ರದ ಶಾಸಕರೂ ಆಗಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ಅವರು ಪಕ್ಕಾ ಆರ್​ಎಸ್​ಎಸ್​. ಇತಿಹಾಸ ತಿರುಚಿ ಪಠ್ಯ ಪುಸ್ತಕದಲ್ಲಿ ಸೇರಿಸುವ ಕೆಲಸ ಮಾಡಿದ ನೀಚ ವಿದ್ಯಾಮಂತ್ರಿ ಇವರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ತಿಪಟೂರು ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ‌ಇತಿಹಾಸ ತಿರುಚುವುದು, ಸಮಾಜ ಹೊಡೆಯುವುದು, ಒಂದು ಧರ್ಮದ ಮೇಲೆ ಇನ್ನೊಂದು ಧರ್ಮ ಎತ್ತಿಕಟ್ಟುವುದು ಬಿಟ್ಟರೆ ಬೇರೆ ಏನ್ ಕೆಲಸ ಇಲ್ಲ. ಇಡೀ‌ ಶಿಕ್ಷಣ ವ್ಯವಸ್ಥೆಯನ್ನೇ ಹಾಳು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮಕ್ಕಳಿಗೆ ನೈಜ ಚರಿತ್ರೆಯನ್ನ ತಿಳಿಸಬೇಕು. ಇತಿಹಾಸ ಮರೆಯುವವರು ಮುಂದೆ ಬರಲ್ಲ ಅಂತಾ ಅಂಬೇಡ್ಕರ್ ಹೇಳಿದ್ದರು. ಈ ಮನುಷ್ಯ ನಾಗೇಶ್ ಇದ್ದಾನಲ್ಲಾ ಇತಿಹಾಸವನ್ನೇ ತಿರುಚಿಬಿಡ್ತಾರೆ. ಇತಿಹಾಸ ತಿರುಚಿ ಪಠ್ಯ ಪುಸ್ತಕದಲ್ಲಿ ಸೇರಿಸುವ ಕೆಲಸ ಮಾಡಿದ ನೀಚ ವಿದ್ಯಾಮಂತ್ರಿ ನಾಗೇಶ್. ಇವರು ಕರ್ನಾಟಕದ ಅಭಿವೃದ್ಧಿ ಮಾಡಲು ಸಾಧ್ಯನಾ? ಇಂತವರು ಸೋಲೇಬೇಕು. ಯಾವ ಕಾರಣಕ್ಕೂ ಗೆಲ್ಲಬಾರದು ಎಂದರು.

ಕೊಬ್ಬರಿ ಬೆಲೆ ಬಿದ್ದೋಯ್ತು, ನಾನು ಮುಖ್ಯಮಂತ್ರಿ ಆಗಿದ್ದಾಗ ಕೊಬ್ಬರಿ ಬೆಲೆ ಕಮ್ಮಿ ಆದಾಗ ಬೆಂಬಲ ಬೆಲೆ ನೀಡಿದ್ದೆ. ಇದಕ್ಕೆ ಮಾಧುಸ್ವಾಮಿನೇ ಸಾಕ್ಷಿ ಎಂದ ಸಿದ್ದರಾಮಯ್ಯ ಅವರು ನೇರವಾಗಿ ಎನ್​ಎಸ್​ಯುಐ ಬಗ್ಗೆ ಪ್ರಸ್ತಾಪಿಸಿದರು. ವಿನಾಕಾರಣ ಎನ್​ಎಸ್​ಯುಐ ವಿದ್ಯಾರ್ಥಿಗಳ ಮೇಲೆ ಸುಳ್ಳು ಕೇಸ್ ಹಾಕಿ ಜೈಲಿಗೆ ಹಾಕಿದರು. ಆರ್​ಎಸ್​ಎಸ್​ ಚಡ್ಡಿ ಸುಟ್ಟಾಕಿದರು ಅಷ್ಟೇ. ಅದು ಇವರ ಚಡ್ಡಿನೋ ಆರ್​ಎಸ್​ಎಸ್​ ಚಡ್ಡಿನೋ ಗೊತ್ತಿಲ್ಲ. ಪ್ರತಿಭಟನೆ ಮಾಡಿದ್ದಕ್ಕೆ ಕೇಸ್ ಹಾಕಿ ಜೈಲಿಗೆ ಹಾಕಿದರು. ಬಿಜೆಪಿ ಅವರು ಶಾಶ್ವತವಾಗಿ ಅಧಿಕಾರದಲ್ಲಿ ಇರಲ್ಲಾ ಅಂತಾ ಅವತ್ತು ಎಸ್​ಪಿ ಹೇಳಿದ್ದೆ ಎಂದರು.

ಇದನ್ನೂ ಓದಿ: ಟಗರು ವಿರುದ್ಧ ರಾಜಹುಲಿ ಘರ್ಜನೆ: ವರುಣಾದಲ್ಲಿ ಸಿದ್ದರಾಮಯ್ಯ ಸೋಲಿಸುವ ಜವಾಬ್ದಾರಿ ನನ್ನದು ಎಂದ ಬಿಎಸ್ ಯಡಿಯೂರಪ್ಪ

ಪೊಲೀಸ್​ನವರು ವರ್ಗಾವಣೆಗೆ ಬಿಜೆಪಿಗೆ 40ರಿಂದ 50 ಲಕ್ಷ ಕೊಡಬೇಕು. ನಂದೀಶ್ ಅಂತಾ ಕೆ.ಆರ್.ಪುರಂ ಇನ್ಸ್ ಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡ. ಎಂಟಿ ಬಿ ನಾಗರಾಜ ನೋಡಲು‌ ಹೋಗಿದ್ದ. ಅಲ್ಲಿ‌ ಪಾಪ ಸಾಲ ಮಾಡಿ ಬಂದಿದ್ದ, ಸಾಲ ತಿರಿಸಲು ಆಗದೇ ಆತ್ಮಹತ್ಯೆ ಮಾಡಿಕೊಂಡ ಅಂದರು. ಇದು ಯಾರು ಹೇಳಿದ್ದು ಮಿಸ್ಟರ್ ಎಂಟಿಬಿ ನಾಗರಾಜ್? ಇವತ್ತು ಪೊಲೀಸರಿಗೆ ಹೇಳುತ್ತೇನೆ, ಬಿಜೆಪಿಯವರ ಮಾತು ಕೇಳಬೇಡಿ. ಕೋಡ್ ಆಫ್ ಕಂಡೆಕ್ಟ್ ಇದೆ ಅವರ ಮಾತು ಕೇಳಬೇಡಿ. ಮುಂದೆ ಬರುವುದು ನಮ್ಮ ಸರ್ಕಾರ ಎಂದು ಎಚ್ಚರಿಕೆ ನೀಡಿದರು. ನಾನು ಒಂದೇ ಒಂದು ರೂಪಾಯಿ ಪೊಲೀಸರಿಂದ ಮುಟ್ಟಿಲ್ಲ. ನಾನಾಗಲೀ, ಜಾರ್ಜ್ ಆಗಲಿ, ರಾಮಲಿಂಗಾರೆಡ್ಡಿ ಆಗಲಿ ಮುಟ್ಟಿಲ್ಲ. ಯಾರಾದರೂ ಏಜೆಂಟ್​ಗಳು ನನಗೆ ಗೊತ್ತಿಲ್ಲದೆ ಮುಟ್ಟಿದರೆ ನಂಗೆ ಗೊತ್ತಿಲ್ಲ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:41 pm, Sun, 30 April 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?